ಮನರಂಜನೆ

ಯಾರೂ ಮುಟ್ಟದ ಕಥೆಯೊಂದನ್ನು ಚಿತ್ರ ಮಾಡ್ತಿದ್ದಾರಂತೆ ನಮ್‍ ಋಷಿ

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ ಬಿಡುಗಡೆಯಾಗಿದೆ.

ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದ್ದಾರೆ. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್‍ ರುದ್ರನಾಗ್‍ ನಿರ್ದೇಶನ

ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ. ಒಳ್ಳೆಯ ತಂಡ ಬೇಕು ಎನ್ನುವ ಋಷಿ, ‘ಒಳ್ಳೆಯ ತಂಡವೆಂದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಷನ್‍ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಪ್ಯಾಷನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇನೆ’ ಎಂದರು.

‘ಫ್ರಾಡ್‍ ಋಷಿ’ ಚಿತ್ರೀಕರಣ ಅಕ್ಟೋಬರ್‍ ತಿಂಗಳಲ್ಲಿ ಶುರುವಾಗಿ, ಡಿಸೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತದಂತೆ. ಈ ಕುರಿತು ಮಾತನಾಡುವ ಅವರು, ‘ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್.10ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್‍ ಚಿತ್ರವಲ್ಲ. ಆದರೆ, ಕಂಟೆಂಟ್‍ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್‍ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

6 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

7 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

7 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

7 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

7 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

8 hours ago