ಮನರಂಜನೆ

ಯಾರೂ ಮುಟ್ಟದ ಕಥೆಯೊಂದನ್ನು ಚಿತ್ರ ಮಾಡ್ತಿದ್ದಾರಂತೆ ನಮ್‍ ಋಷಿ

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ ಬಿಡುಗಡೆಯಾಗಿದೆ.

ನಮ್ ಋಷಿ ಬರೆದು ಶ್ರೀಗುರು ಸಂಗೀತ ನೀಡಿರುವ ಹಾಗೂ ಸೋಮಶೇಖರ್ ಅವರು ಹಾಡಿರುವ ಈ ಹಾಡನ್ನು ನಿರ್ಮಾಪಕ ಕೆ.ಮಂಜು ಬಿಡುಗಡೆ ಮಾಡಿದ್ದಾರೆ. ನಮ್ ಋಷಿ ಆಡಿಯೋ ಯೂಟ್ಯೂಬ್ ಚಾನಲ್‌ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್‍ ರುದ್ರನಾಗ್‍ ನಿರ್ದೇಶನ

ಸಿನಿಮಾ ಮಾಡುವುದಕ್ಕೆ ದುಡ್ಡು ಬೇಕಾಗಿಲ್ಲ. ಒಳ್ಳೆಯ ತಂಡ ಬೇಕು ಎನ್ನುವ ಋಷಿ, ‘ಒಳ್ಳೆಯ ತಂಡವೆಂದರೆ, ಒಬ್ಬರನ್ನೊಬ್ಬರು ಪ್ರೀತಿಸುವಂತಿರಬೇಕು. ಅವರು ಬೆಳೆದರೆ ನಾವು ಖುಷಿಪಡಬೇಕು. ನಾವು ಬೆಳೆದರೆ ಅವರು ಖುಷಿಪಡಬೇಕು. ಸಣ್ಣ ವಿಷಯಗಳಿಗೆ ಕಿತ್ತಾಟಗಳಾಗುತ್ತವೆ. ಅದನ್ನೆಲ್ಲಾ ಮೀರಿದ ಒಂದು ತಂಡವಿರಬೇಕು. ನಾನು ಕಲಾವಿದರಿಗೆ ದುಡ್ಡು ಕೊಟ್ಟು ನಟನೆ ಮಾಡಿಸುವುದಿಲ್ಲ. ಕಲಾವಿದರಲ್ಲಿ ಎರಡು ತರಹದ ಕಲಾವಿದರಿರುತ್ತಾರೆ. ಕೆಲವರು ವೃತ್ತಿಪರ ಕಲಾವಿದರು. ಇನ್ನೂ, ಕೆಲವರು ಪ್ಯಾಷನ್‍ಗಾಗಿ ಅಭಿನಯ ಮಾಡುತ್ತಾರೆ. ಅವರಿಗೆ ಹಣದ ಅವಶ್ಯಕತೆ ಇರುವುದಿಲ್ಲ. ವೃತ್ತಿಪರ ಕಲಾವಿದರಿಗೆ ದುಡ್ಡು ಕೊಡಬೇಕಾಗುತ್ತದೆ. ಆದರೆ, ಪ್ಯಾಷನ್ ಇರುವವರನ್ನು ಆಯ್ಕೆ ಮಾಡಿಕೊಂಡರೆ, ಅವರಿಗೆ ಹಣ ನೀಡದಿದ್ದರೂ ಆಗುತ್ತದೆ. ಜೊತೆಗೆ ಅವರಿಂದ ಸಹಕಾರವೂ ಸಿಗುತ್ತದೆ. ನಾನು ಅಂಥವರನ್ನೇ ಆಯ್ಕೆ ಮಾಡಿಕೊಂಡು ಚಿತ್ರ ಮಾಡುತ್ತಿದ್ದೇನೆ’ ಎಂದರು.

‘ಫ್ರಾಡ್‍ ಋಷಿ’ ಚಿತ್ರೀಕರಣ ಅಕ್ಟೋಬರ್‍ ತಿಂಗಳಲ್ಲಿ ಶುರುವಾಗಿ, ಡಿಸೆಂಬರ್‍ ತಿಂಗಳಲ್ಲಿ ಬಿಡುಗಡೆಯಾಗುತ್ತದಂತೆ. ಈ ಕುರಿತು ಮಾತನಾಡುವ ಅವರು, ‘ಈ ಚಿತ್ರ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆಯಾಗುತ್ತದೆ. ಅಕ್ಟೋಬರ್.10ರಿಂದ ಚಿತ್ರೀಕರಣ ಶುರುವಾಗಲಿದೆ. ಇದು ದೊಡ್ಡ ಬಜೆಟ್‍ ಚಿತ್ರವಲ್ಲ. ಆದರೆ, ಕಂಟೆಂಟ್‍ ಬಹಳ ಚೆನ್ನಾಗಿದೆ. ಚಿತ್ರದಲ್ಲಿ ಎಂಟು ಹಾಡುಗಳಿವೆ. ನನ್ನ ಮೂರು ಯಶಸ್ವಿ ಹಾಡುಗಳನ್ನು ಈ ಚಿತ್ರದಲ್ಲಿ ಬಳಸಿಕೊಳ್ಳುತ್ತಿದ್ದೇನೆ. ಕಡಿಮೆ ಬಜೆಟ್‍ನಲ್ಲಿ ಈ ಚಿತ್ರ ಮಾಡುತ್ತಿದ್ದೇನೆ. ಶಂಕರ್ ಛಾಯಾಗ್ರಹಣ ಮತ್ತು ಶ್ರೀಗುರು ಸಂಗೀತ ಈ ಚಿತ್ರಕ್ಕಿದೆ. ಒಂದೊಳ್ಳೆಯ ತಂಡ ಕಟ್ಟಿದ್ದೇನೆ. ಚಿತ್ರದಲ್ಲಿ ನಾಲ್ವರು ನಾಯಕಿಯರಿದ್ದಾರೆ. ಇದುವರೆಗೂ ಯಾರೂ ಮುಟ್ಟದ ಮತ್ತು ಎಲ್ಲರೂ ಹೇಳುವುದಕ್ಕೆ ಹೆದರುವ ಒಂದು ವಿಷಯವನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇನೆ. ಇದೊಂದು ಸೂಕ್ಷ್ಮ ವಿಷಯವಿರುವ ಕಥೆ. ಜನರಿಗೆ ಚಿತ್ರ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

13 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago