ಮನರಂಜನೆ

ಎಲ್ಲ ಬದಲಾಗಬಹುದು ಅಂತ ಅಂದ್ಕೊಂಡಿದ್ದು ಸುಳ್ಳಾಯ್ತು: ಅನಂತ್ ನಾಗ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‍ ಕುರಿತು ಹಲವು ನಟ-ನಟಿಯರು ಇದುವರೆಗೂ ಮಾತನಾಡಿದ್ದಾರೆ. ಹಲವರು ದರ್ಶನ್‍ ಪರ ನಿಂತಿದ್ದಾರೆ. ಆದರೆ, ಇದುವರೆಗೂ ಹಿರಿಯ ನಟ ಅನಂತ್ ನಾಗ್‍ ಅವರು ಈ ವಿಷಯದ ಬಗ್ಗೆ ಮಾತನಾಡಿರಲಿಲ್ಲ. ನಿಜ ಹೇಳಬೇಕೆಂದರೆ, ಅವರು ಯಾವುದೇ ಸಮಾರಂಭ ಅಥವಾ ಪತ್ರಿಕಾಗೋಷ್ಠಿಯಲ್ಲೂ ಕಾಣಿಸಿಕೊಂಡಿರಲಿಲ್ಲ.

ಇತ್ತೀಚೆಗೆ ‘ಇದು ಎಂಥಾ ಲೋಕವಯ್ಯ’ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ದರ್ಶನ್‍ ಪ್ರಕರಣ ಕುರಿತಾಗಿ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ಒಂದಿಷ್ಟು ವಿಷಯಗಳನ್ನು ಮಾತನಾಡಿದ್ದಾರೆ. ಪ್ರಮುಖವಾಗಿ, ದರ್ಶನ್‍ ಪ್ರಕರಣದಿಂದ ಸಮಾಜದ ಮೇಲೆ ಯಾವುದೇ ರೀತಿಯ ಪರಿಣಾಮವೂ ಆಗುವುದಿಲ್ಲ ಎಂದು ಹಿರಿಯ ನಟ ಅನಂತ್ ನಾಗ್‍ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಈ ತರಹದ ಘಟನೆಗಳು ಎಲ್ಲಾ ಕಡೆ ಆಗುತ್ತಿವೆ. ಬರೀ ಸಿನಿಮಾದವರ ಜೀವನದಲ್ಲಿ ಮಾತ್ರ ಆಗುತ್ತಿಲ್ಲ. ಅದೇ ತರಹದ ಅನೇಕ ಮತ್ತು ಸಾವಿರ ಪಟ್ಟು ಹಿಂಸೆ ಆಗುತ್ತಿದೆ. ದೇಶ ದೇಶಗಳ ನಡುವೆ ಸಮಸ್ಯೆ ಶುರುವಾಗಿದೆ. ಆದರೆ, ಯಾರೂ ಆ ಬಗ್ಗೆ ಮಾತನಾಡುತ್ತಿಲ್ಲ. ಅಂತಹ ಹಲವು ಘಟನೆಗಳಲ್ಲಿ ಇದೂ ಒಂದು ಘಟನೆ ಅಷ್ಟೇ. ಬಹುಶಃ ಆ ವ್ಯಕ್ತಿಯಿಂದ (ದರ್ಶನ್‍) ಇದಕ್ಕೆ ಹೆಚ್ಚು ಪ್ರಚಾರ ಸಿಕ್ಕಿರಬಹುದು. ಕೆಲವು ಘಟನೆಗಳು ಆದಾಗ ಮಾಧ್ಯಮದವರು ಅದನ್ನೇ ಹೈಲೈಟ್‍ ಮಾಡುವುದರಿಂದ ಜನರ ಮನಸ್ಸುಗಳು ಜಡವಾಗಿ ಬಿಡುತ್ತವೆ. ಅದರಿಂದ ಅವರ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ’ ಎಂದು ಅನಂತ ನಾಗ್‍ ಹೇಳಿದ್ದಾರೆ.

ಈ ಘಟನೆಯಿಂದ ಸ್ಫೂರ್ತಿ ಪಡೆದು ಏನೋ ಮಾಡುತ್ತಾರೆ ಎನ್ನುವುದು ಖಂಡಿತಾ ಸುಳ್ಳು ಎನ್ನುವ ಅವರು, ‘ಇದು ಸಮಾಜದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾನು ಕೆಲವು ರಾಜಕೀಯ ಚಿತ್ರಗಳಲ್ಲಿ ಆಸೆಪಟ್ಟು ನಟಿಸಿದ್ದೇನೆ. ನಮ್ಮ ಚಿತ್ರ ನೋಡಿದ ಮೇಲೆ ರಾಜಕೀಯ ಬದಲಾಗಬಹುದು, ಜನರ ಮೇಲೆ ಪರಿಣಾಮ ಬೀರಬಹುದು, ಸಮಾಜದಲ್ಲಿ ಒಂದಿಷ್ಟು ಬದಲಾವಣೆಗಳನ್ನು ಕಾಣಬಹುದು ಅಂತಂದುಕೊಂಡಿದ್ದೆ. ಆದರೆ, ಅಂತಹ ಬದಲಾವಣೆ ನಾನು ನೋಡಲಿಲ್ಲ. ಹಾಗಾಗಿ, ಇದರಿಂದ ಸಮಾಜದ ಮೇಲೆ ಯಾವುದೇ ಪರಿಣಾಮವಾಗುತ್ತದೆ ಎಂದು ನಾನು ನಂಬುವುದಿಲ್ಲ’ ಎನ್ನುತ್ತಾರೆ.

ಭೂಮಿಕಾ

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago