ಮನರಂಜನೆ

ಎಲ್ಲ ಬದಲಾಗಬಹುದು ಅಂತ ಅಂದ್ಕೊಂಡಿದ್ದು ಸುಳ್ಳಾಯ್ತು: ಅನಂತ್ ನಾಗ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‍ ಕುರಿತು ಹಲವು ನಟ-ನಟಿಯರು ಇದುವರೆಗೂ ಮಾತನಾಡಿದ್ದಾರೆ. ಹಲವರು ದರ್ಶನ್‍ ಪರ ನಿಂತಿದ್ದಾರೆ. ಆದರೆ, ಇದುವರೆಗೂ ಹಿರಿಯ ನಟ ಅನಂತ್ ನಾಗ್‍ ಅವರು ಈ ವಿಷಯದ ಬಗ್ಗೆ ಮಾತನಾಡಿರಲಿಲ್ಲ. ನಿಜ ಹೇಳಬೇಕೆಂದರೆ, ಅವರು ಯಾವುದೇ ಸಮಾರಂಭ ಅಥವಾ ಪತ್ರಿಕಾಗೋಷ್ಠಿಯಲ್ಲೂ ಕಾಣಿಸಿಕೊಂಡಿರಲಿಲ್ಲ.

ಇತ್ತೀಚೆಗೆ ‘ಇದು ಎಂಥಾ ಲೋಕವಯ್ಯ’ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ದರ್ಶನ್‍ ಪ್ರಕರಣ ಕುರಿತಾಗಿ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ಒಂದಿಷ್ಟು ವಿಷಯಗಳನ್ನು ಮಾತನಾಡಿದ್ದಾರೆ. ಪ್ರಮುಖವಾಗಿ, ದರ್ಶನ್‍ ಪ್ರಕರಣದಿಂದ ಸಮಾಜದ ಮೇಲೆ ಯಾವುದೇ ರೀತಿಯ ಪರಿಣಾಮವೂ ಆಗುವುದಿಲ್ಲ ಎಂದು ಹಿರಿಯ ನಟ ಅನಂತ್ ನಾಗ್‍ ಅಭಿಪ್ರಾಯ ಪಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಈ ತರಹದ ಘಟನೆಗಳು ಎಲ್ಲಾ ಕಡೆ ಆಗುತ್ತಿವೆ. ಬರೀ ಸಿನಿಮಾದವರ ಜೀವನದಲ್ಲಿ ಮಾತ್ರ ಆಗುತ್ತಿಲ್ಲ. ಅದೇ ತರಹದ ಅನೇಕ ಮತ್ತು ಸಾವಿರ ಪಟ್ಟು ಹಿಂಸೆ ಆಗುತ್ತಿದೆ. ದೇಶ ದೇಶಗಳ ನಡುವೆ ಸಮಸ್ಯೆ ಶುರುವಾಗಿದೆ. ಆದರೆ, ಯಾರೂ ಆ ಬಗ್ಗೆ ಮಾತನಾಡುತ್ತಿಲ್ಲ. ಅಂತಹ ಹಲವು ಘಟನೆಗಳಲ್ಲಿ ಇದೂ ಒಂದು ಘಟನೆ ಅಷ್ಟೇ. ಬಹುಶಃ ಆ ವ್ಯಕ್ತಿಯಿಂದ (ದರ್ಶನ್‍) ಇದಕ್ಕೆ ಹೆಚ್ಚು ಪ್ರಚಾರ ಸಿಕ್ಕಿರಬಹುದು. ಕೆಲವು ಘಟನೆಗಳು ಆದಾಗ ಮಾಧ್ಯಮದವರು ಅದನ್ನೇ ಹೈಲೈಟ್‍ ಮಾಡುವುದರಿಂದ ಜನರ ಮನಸ್ಸುಗಳು ಜಡವಾಗಿ ಬಿಡುತ್ತವೆ. ಅದರಿಂದ ಅವರ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ’ ಎಂದು ಅನಂತ ನಾಗ್‍ ಹೇಳಿದ್ದಾರೆ.

ಈ ಘಟನೆಯಿಂದ ಸ್ಫೂರ್ತಿ ಪಡೆದು ಏನೋ ಮಾಡುತ್ತಾರೆ ಎನ್ನುವುದು ಖಂಡಿತಾ ಸುಳ್ಳು ಎನ್ನುವ ಅವರು, ‘ಇದು ಸಮಾಜದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾನು ಕೆಲವು ರಾಜಕೀಯ ಚಿತ್ರಗಳಲ್ಲಿ ಆಸೆಪಟ್ಟು ನಟಿಸಿದ್ದೇನೆ. ನಮ್ಮ ಚಿತ್ರ ನೋಡಿದ ಮೇಲೆ ರಾಜಕೀಯ ಬದಲಾಗಬಹುದು, ಜನರ ಮೇಲೆ ಪರಿಣಾಮ ಬೀರಬಹುದು, ಸಮಾಜದಲ್ಲಿ ಒಂದಿಷ್ಟು ಬದಲಾವಣೆಗಳನ್ನು ಕಾಣಬಹುದು ಅಂತಂದುಕೊಂಡಿದ್ದೆ. ಆದರೆ, ಅಂತಹ ಬದಲಾವಣೆ ನಾನು ನೋಡಲಿಲ್ಲ. ಹಾಗಾಗಿ, ಇದರಿಂದ ಸಮಾಜದ ಮೇಲೆ ಯಾವುದೇ ಪರಿಣಾಮವಾಗುತ್ತದೆ ಎಂದು ನಾನು ನಂಬುವುದಿಲ್ಲ’ ಎನ್ನುತ್ತಾರೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago