darshan and sudeep
ಕಳೆದ ವರ್ಷ ದರ್ಶನ್ ಬಂಧನವಾದ ನಂತರ ಸುದೀಪ್ ಮಾತನಾಡಿದ್ದರು. ತಮಗೆ ಕಾನೂನು, ಸರ್ಕಾರದ ಮೇಲೆ ನಂಬಿಕೆಯಿದೆ, ಆಗಬೇಕಾಗಿರೋದು ಆಗಿಯೇ ಆಗುತ್ತದೆ ಎಂದಿದ್ದರು. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್, ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ವಿಷಯವಾಗಿ ಸುದೀಪ್ ಮತ್ತೊಮ್ಮೆ ಕೆಲವು ವಿಷಯಗಳನ್ನು ಹಂಚಿಕೊಳ್ಳುವುದರ ಜೊತೆಗೆ, ಅವರ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಇದನ್ನು ಓದಿ:ದರ್ಶನ್ಗೆ ಮತ್ತೆ ಜೈಲು: ಅಭಿಮಾನಿಗಳಲ್ಲಿ ತೀವ್ರ ಬೇಸರ
ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸುದೀಪ್, ‘ಅವರ ಸಿನಿಮಾಗೆ ಒಳ್ಳೆಯದಾಗಲಿ. ಅವರಿಗೆ ಅವರದ್ದೇ ಆದ ನೋವು ಇರುತ್ತದೆ. ಈ ವಿಷಯದಲ್ಲಿ ನಾವು ಮಾತನಾಡುವುದು ತಪ್ಪಾಗುತ್ತದೆ. ಸರ್ಕಾರ, ಕಾನೂನು ಅಂತ ಬಂದಾಗ ಅವರೇನು ಮಾಡಬೇಕು ಅದನ್ನ ಮಾಡುತ್ತಿದ್ದಾರೆ. ಅದಕ್ಕೂ ನಾವು ಅಡ್ಡಿ ಬರಬಾರದು. ಯಾರೂ ಕೈಕಟ್ಟಿಕೊಂಡು ಸುಮ್ಮನೇ ಕುಳಿತಿರುವುದಿಲ್ಲ. ಆದರೆ, ಕೆಲವೊಂದಕ್ಕೆ ನಾನು ತಲೆಹಾಕೋಕೆ ಹೋಗಲ್ಲ. ಏಕೆಂದರೆ, ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ. ಅದರಿಂದ ಅಂತರ ಜಾಸ್ತಿಯಾಗುತ್ತದೆ’ ಎಂದರು.
ಯಾರದ್ದೋ ಮಾತು ಕೇಳಿ ದೂರಾಗಿಲ್ಲ ಎಂದ ಸುದೀಪ್, ‘ನಾವೇನು ಚಿಕ್ಕವರಲ್ಲ, ನಾವು ದೂರಾಗಿದ್ದು ಯಾಕೆ ಅನ್ನೋದು ನಮಗೆ ಗೊತ್ತಿದೆ. ನಾವಿಬ್ಬರು ಯಾಕೆ ಮಾತಾಡುವುದಿಲ್ಲ ಎಂದರೆ ಅದಕ್ಕೆ ಕೆಲವು ಕಾರಣಗಳಿವೆ. ಯಾರೂ ಆ ಕಾರಣಗಳ ಬಗ್ಗೆ ಕೇಳಲ್ಲ. ಆದರೆ, ನಮಗೆ ಗೊತ್ತಿರುತ್ತದೆ. ಇನ್ನು, ಯಾರದ್ದೋ ಮಾತು ಕೇಳಿಕೊಂಡು ಹೀಗೆ ಮಾಡುವಷ್ಟು ನಾವು ಚಿಕ್ಕವರಲ್ಲ. ನಮಗೆ ಕೆಲವು ವಿಷಯಗಳು ಅರ್ಥ ಆಗುತ್ತವೆ. ನಾವ್ಯಾಕೆ ಹೀಗೀದ್ದೀವಿ ಎಂಬ ಸತ್ಯ ನಮಗೆ ಗೊತ್ತಿರುತ್ತದೆ. ಸೂರ್ಯ, ಚಂದ್ರ ಎರಡೂ ಅದರ ಜಾಗದಲ್ಲಿ ಇದ್ದರೆ ಚೆನ್ನ’ ಎಂದರು.
ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…