darshan and sudeep
ಕಳೆದ ವರ್ಷ ದರ್ಶನ್ ಬಂಧನವಾದ ನಂತರ ಸುದೀಪ್ ಮಾತನಾಡಿದ್ದರು. ತಮಗೆ ಕಾನೂನು, ಸರ್ಕಾರದ ಮೇಲೆ ನಂಬಿಕೆಯಿದೆ, ಆಗಬೇಕಾಗಿರೋದು ಆಗಿಯೇ ಆಗುತ್ತದೆ ಎಂದಿದ್ದರು. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ನಟ ದರ್ಶನ್, ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ವಿಷಯವಾಗಿ ಸುದೀಪ್ ಮತ್ತೊಮ್ಮೆ ಕೆಲವು ವಿಷಯಗಳನ್ನು ಹಂಚಿಕೊಳ್ಳುವುದರ ಜೊತೆಗೆ, ಅವರ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಇದನ್ನು ಓದಿ:ದರ್ಶನ್ಗೆ ಮತ್ತೆ ಜೈಲು: ಅಭಿಮಾನಿಗಳಲ್ಲಿ ತೀವ್ರ ಬೇಸರ
ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸುದೀಪ್, ‘ಅವರ ಸಿನಿಮಾಗೆ ಒಳ್ಳೆಯದಾಗಲಿ. ಅವರಿಗೆ ಅವರದ್ದೇ ಆದ ನೋವು ಇರುತ್ತದೆ. ಈ ವಿಷಯದಲ್ಲಿ ನಾವು ಮಾತನಾಡುವುದು ತಪ್ಪಾಗುತ್ತದೆ. ಸರ್ಕಾರ, ಕಾನೂನು ಅಂತ ಬಂದಾಗ ಅವರೇನು ಮಾಡಬೇಕು ಅದನ್ನ ಮಾಡುತ್ತಿದ್ದಾರೆ. ಅದಕ್ಕೂ ನಾವು ಅಡ್ಡಿ ಬರಬಾರದು. ಯಾರೂ ಕೈಕಟ್ಟಿಕೊಂಡು ಸುಮ್ಮನೇ ಕುಳಿತಿರುವುದಿಲ್ಲ. ಆದರೆ, ಕೆಲವೊಂದಕ್ಕೆ ನಾನು ತಲೆಹಾಕೋಕೆ ಹೋಗಲ್ಲ. ಏಕೆಂದರೆ, ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ. ಅದರಿಂದ ಅಂತರ ಜಾಸ್ತಿಯಾಗುತ್ತದೆ’ ಎಂದರು.
ಯಾರದ್ದೋ ಮಾತು ಕೇಳಿ ದೂರಾಗಿಲ್ಲ ಎಂದ ಸುದೀಪ್, ‘ನಾವೇನು ಚಿಕ್ಕವರಲ್ಲ, ನಾವು ದೂರಾಗಿದ್ದು ಯಾಕೆ ಅನ್ನೋದು ನಮಗೆ ಗೊತ್ತಿದೆ. ನಾವಿಬ್ಬರು ಯಾಕೆ ಮಾತಾಡುವುದಿಲ್ಲ ಎಂದರೆ ಅದಕ್ಕೆ ಕೆಲವು ಕಾರಣಗಳಿವೆ. ಯಾರೂ ಆ ಕಾರಣಗಳ ಬಗ್ಗೆ ಕೇಳಲ್ಲ. ಆದರೆ, ನಮಗೆ ಗೊತ್ತಿರುತ್ತದೆ. ಇನ್ನು, ಯಾರದ್ದೋ ಮಾತು ಕೇಳಿಕೊಂಡು ಹೀಗೆ ಮಾಡುವಷ್ಟು ನಾವು ಚಿಕ್ಕವರಲ್ಲ. ನಮಗೆ ಕೆಲವು ವಿಷಯಗಳು ಅರ್ಥ ಆಗುತ್ತವೆ. ನಾವ್ಯಾಕೆ ಹೀಗೀದ್ದೀವಿ ಎಂಬ ಸತ್ಯ ನಮಗೆ ಗೊತ್ತಿರುತ್ತದೆ. ಸೂರ್ಯ, ಚಂದ್ರ ಎರಡೂ ಅದರ ಜಾಗದಲ್ಲಿ ಇದ್ದರೆ ಚೆನ್ನ’ ಎಂದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…