ಮನರಂಜನೆ

ಇದೇ ನನ್ನ ಕೊನೆಯ ಗ್ರಾಂಡ್‍ ಫಿನಾಲೆ ಎಂದ ಸುದೀಪ್

‘ಬಿಗ್‍ ಬಾಸ್‍ – ಸೀಸನ್‍ 11’ ತಮ್ಮ ಕೊನೆಯ ಸೀಸನ್‍ ಆಗಲಿದೆ ಎಂದು ಅಕ್ಟೋಬರ್‍ ತಿಂಗಳಲ್ಲೇ ಸುದೀಪ್‍ ಘೋಷಿಸಿದ್ದರು. ಈ ಕಾರ್ಯಕ್ರಮ ಮುಗಿಯುವುದಕ್ಕೆ ಕೆಲವೇ ದಿನಗಳಷ್ಟೇ ಉಳಿದಿದ್ದು, ಈ ಬಾರಿಯ ಗ್ರಾಂಡ್‍ ಫಿನಾಲೆ ತಮ್ಮ ಕೊನೆಯ ಗ್ರಾಂಡ್‍ ಫಿನಾಲೆ ಆಗಲಿದೆ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಕಳೆದ 10 ಅವತರಣಿಕೆಗಳನ್ನು ನಿರೂಪಕರಾಗಿ ಮುನ್ನಡೆಸಿದ್ದ ಸುದೀಪ್‍, 11ನೇ ಅವತರಣಿಕೆಯನ್ನು ನಡೆಸಿಕೊಡುತ್ತಾರಾ? ಇಲ್ಲವಾ? ಎಂಬುದರ ಕುರಿತು ಸಂಶಯವಿತ್ತು. ಆದರೆ, ಅಂತಿಮವಾಗಿ ಕಲರ್ಸ್‍ ಕನ್ನಡದವರ ಒತ್ತಾಯದ ಮೇರೆಗೆ ಸುದೀಪ್‍ ಕೊನೆಗೂ ಕಾರ್ಯಕ್ರಮವನ್ನು ನಡೆಸಿಕೊಡುವುದಕ್ಕೆ ಮುಂದಾದರು. ಕಾರ್ಯಕ್ರಮ ಶುರುವಾದ ಮೊದಲ ವಾರ ಟಿಆರ್‍ಪಿ ಹಂಚಿಕೊಳ್ಳುವುದರ ಜೊತೆಗೆ, ಇದು ತಮ್ಮ ಕೊನೆಯ ಕಾರ್ಯಕ್ರಮ ಎಂದು ಸೋಷಿಯಲ್‍ ಮೀಡಿಯಾದಲ್ಲಿ ಹೇಳಿಕೊಂಡಿದ್ದರು.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಸುದೀಪ್‍, ‘ಕಳೆದ 10 + 1 ವರ್ಷಗಳಿಂದ ‘ಬಿಗ್‍ ಬಾಸ್‍’ ನಡೆಸಿಕೊಡುತ್ತಿದ್ದು, ಇದು ಮುಂದುವರೆಯುವುದಕ್ಕೆ ಸಕಾಲ. ನಿರೂಪಕನಾಗಿ ಇದು ನನ್ನ ಕೊನೆಯ ವರ್ಷವಾಗಿದ್ದು, ಈ ನನ್ನ ನಿರ್ಧಾರವನ್ನು ಎಲ್ಲರೂ ಗೌರವಿಸುತ್ತಾರೆ ಎಂದು ನಂಬಿದ್ದೇನೆ. ನನ್ನ ಶಕ್ತಿ ಮೀರಿ ಈ ಕಾರ್ಯಕ್ರಮವನ್ನು ಚೆನ್ನಾಗಿ ನಡೆಸಿಕೊಡುವುದಕ್ಕೆ ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದರು.

ಸುದೀಪ್‍ ಅವರು ತಮ್ಮ ನಿರ್ಧಾರವನ್ನು ಹೇಳಿದ್ದರೂ, ಕಲರ್ಸ್ ಕನ್ನಡದವರು ಒಪ್ಪಿರಲಿಲ್ಲ ಎಂಬ ಮಾತು ಕೇಳಿಬಂದಿತ್ತು. ಕೆಲವು ದಿನಗಳ ಹಿಂದೆ ನಡೆದ ಸಂದರ್ಶನದಲ್ಲೂ, ಚಾನಲ್‍ನವರು ಇನ್ನೂ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ ಎಂದಿದ್ದರು. ಆದರೆ, ಅದಕ್ಕೆ ಒಪ್ಪದಿರುವ ಸುದೀಪ್‍, ಈ ಬಾರಿಯ ಗ್ರಾಂಡ್‍ ಫಿನಾಲೆ ತಮ್ಮ ಕೊನೆಯದ್ದು ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಸುದೀಪ್‍, ‘ಕಳೆದ 11 ಸೀಸನ್‍ಗಳ ಕಾಲ ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಸಾಕಷ್ಟು ಎಂಜಾಯ್‍ ಮಾಡಿದ್ದೇನೆ. ಈ ಕಾರ್ಯಕ್ರಮಕ್ಕೆ ಪ್ರೀತಿ ತೋರಿಸಿದ ಎಲ್ಲರಿಗೂ ಧನ್ಯವಾದಗಳು. ಮುಂಬರುವ ಗ್ರಾಂಡ್‍ ಫಿನಾಲೆ, ನನ್ನ ಕೊನೆಯ ಕಾರ್ಯಕ್ರಮವಾಗಿದ್ದು, ಸಾಧ್ಯವಾದಷ್ಟೂ ಮನರಂಜಿಸುವುದಕ್ಕೆ ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದಾರೆ.

ಅಂದಹಾಗೆ, ಸುದೀಪ್‍ ಬದಲಿಗೆ ಮುಂದಿನ ಸೀಸನ್‍ ಯಾರು ನಡೆಸಿಕೊಡುತ್ತಾರೆ? ಎಂಬ ಚರ್ಚೆ ಶುರುವಾಗಿದೆ. ಮೊದಲು ಈ ಸೀಸನ್‍ ಮುಗಿದ ಮೇಲೆ, ಈ ಬಗ್ಗೆ ಚಾನಲ್‍ನವರು ತಲೆ ಕೆಡಿಸಿಕೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

4 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

5 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

5 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

6 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

6 hours ago