ಮನರಂಜನೆ

ಇದೇ ನನ್ನ ಕೊನೆಯ ಗ್ರಾಂಡ್‍ ಫಿನಾಲೆ ಎಂದ ಸುದೀಪ್

‘ಬಿಗ್‍ ಬಾಸ್‍ – ಸೀಸನ್‍ 11’ ತಮ್ಮ ಕೊನೆಯ ಸೀಸನ್‍ ಆಗಲಿದೆ ಎಂದು ಅಕ್ಟೋಬರ್‍ ತಿಂಗಳಲ್ಲೇ ಸುದೀಪ್‍ ಘೋಷಿಸಿದ್ದರು. ಈ ಕಾರ್ಯಕ್ರಮ ಮುಗಿಯುವುದಕ್ಕೆ ಕೆಲವೇ ದಿನಗಳಷ್ಟೇ ಉಳಿದಿದ್ದು, ಈ ಬಾರಿಯ ಗ್ರಾಂಡ್‍ ಫಿನಾಲೆ ತಮ್ಮ ಕೊನೆಯ ಗ್ರಾಂಡ್‍ ಫಿನಾಲೆ ಆಗಲಿದೆ ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಕಳೆದ 10 ಅವತರಣಿಕೆಗಳನ್ನು ನಿರೂಪಕರಾಗಿ ಮುನ್ನಡೆಸಿದ್ದ ಸುದೀಪ್‍, 11ನೇ ಅವತರಣಿಕೆಯನ್ನು ನಡೆಸಿಕೊಡುತ್ತಾರಾ? ಇಲ್ಲವಾ? ಎಂಬುದರ ಕುರಿತು ಸಂಶಯವಿತ್ತು. ಆದರೆ, ಅಂತಿಮವಾಗಿ ಕಲರ್ಸ್‍ ಕನ್ನಡದವರ ಒತ್ತಾಯದ ಮೇರೆಗೆ ಸುದೀಪ್‍ ಕೊನೆಗೂ ಕಾರ್ಯಕ್ರಮವನ್ನು ನಡೆಸಿಕೊಡುವುದಕ್ಕೆ ಮುಂದಾದರು. ಕಾರ್ಯಕ್ರಮ ಶುರುವಾದ ಮೊದಲ ವಾರ ಟಿಆರ್‍ಪಿ ಹಂಚಿಕೊಳ್ಳುವುದರ ಜೊತೆಗೆ, ಇದು ತಮ್ಮ ಕೊನೆಯ ಕಾರ್ಯಕ್ರಮ ಎಂದು ಸೋಷಿಯಲ್‍ ಮೀಡಿಯಾದಲ್ಲಿ ಹೇಳಿಕೊಂಡಿದ್ದರು.

ಈ ಕುರಿತು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಸುದೀಪ್‍, ‘ಕಳೆದ 10 + 1 ವರ್ಷಗಳಿಂದ ‘ಬಿಗ್‍ ಬಾಸ್‍’ ನಡೆಸಿಕೊಡುತ್ತಿದ್ದು, ಇದು ಮುಂದುವರೆಯುವುದಕ್ಕೆ ಸಕಾಲ. ನಿರೂಪಕನಾಗಿ ಇದು ನನ್ನ ಕೊನೆಯ ವರ್ಷವಾಗಿದ್ದು, ಈ ನನ್ನ ನಿರ್ಧಾರವನ್ನು ಎಲ್ಲರೂ ಗೌರವಿಸುತ್ತಾರೆ ಎಂದು ನಂಬಿದ್ದೇನೆ. ನನ್ನ ಶಕ್ತಿ ಮೀರಿ ಈ ಕಾರ್ಯಕ್ರಮವನ್ನು ಚೆನ್ನಾಗಿ ನಡೆಸಿಕೊಡುವುದಕ್ಕೆ ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದರು.

ಸುದೀಪ್‍ ಅವರು ತಮ್ಮ ನಿರ್ಧಾರವನ್ನು ಹೇಳಿದ್ದರೂ, ಕಲರ್ಸ್ ಕನ್ನಡದವರು ಒಪ್ಪಿರಲಿಲ್ಲ ಎಂಬ ಮಾತು ಕೇಳಿಬಂದಿತ್ತು. ಕೆಲವು ದಿನಗಳ ಹಿಂದೆ ನಡೆದ ಸಂದರ್ಶನದಲ್ಲೂ, ಚಾನಲ್‍ನವರು ಇನ್ನೂ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ ಎಂದಿದ್ದರು. ಆದರೆ, ಅದಕ್ಕೆ ಒಪ್ಪದಿರುವ ಸುದೀಪ್‍, ಈ ಬಾರಿಯ ಗ್ರಾಂಡ್‍ ಫಿನಾಲೆ ತಮ್ಮ ಕೊನೆಯದ್ದು ಎಂದು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬರೆದುಕೊಂಡಿರುವ ಸುದೀಪ್‍, ‘ಕಳೆದ 11 ಸೀಸನ್‍ಗಳ ಕಾಲ ‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಸಾಕಷ್ಟು ಎಂಜಾಯ್‍ ಮಾಡಿದ್ದೇನೆ. ಈ ಕಾರ್ಯಕ್ರಮಕ್ಕೆ ಪ್ರೀತಿ ತೋರಿಸಿದ ಎಲ್ಲರಿಗೂ ಧನ್ಯವಾದಗಳು. ಮುಂಬರುವ ಗ್ರಾಂಡ್‍ ಫಿನಾಲೆ, ನನ್ನ ಕೊನೆಯ ಕಾರ್ಯಕ್ರಮವಾಗಿದ್ದು, ಸಾಧ್ಯವಾದಷ್ಟೂ ಮನರಂಜಿಸುವುದಕ್ಕೆ ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದಾರೆ.

ಅಂದಹಾಗೆ, ಸುದೀಪ್‍ ಬದಲಿಗೆ ಮುಂದಿನ ಸೀಸನ್‍ ಯಾರು ನಡೆಸಿಕೊಡುತ್ತಾರೆ? ಎಂಬ ಚರ್ಚೆ ಶುರುವಾಗಿದೆ. ಮೊದಲು ಈ ಸೀಸನ್‍ ಮುಗಿದ ಮೇಲೆ, ಈ ಬಗ್ಗೆ ಚಾನಲ್‍ನವರು ತಲೆ ಕೆಡಿಸಿಕೊಳ್ಳಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

10 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

10 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

10 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

10 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

12 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

12 hours ago