ಮನರಂಜನೆ

ಜಾಕಿ ಜಾತ್ರೆ ಜೋರು: ಮರುಬಿಡುಗಡೆ ಟ್ರೆಂಡ್‌ನಲ್ಲಿ ದಾಖಲೆ ಬರೆದ ಅಪ್ಪು ಫ್ಯಾನ್ಸ್‌

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಸೂಪರ್ ಹಿಟ್‌ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್‌ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ.

ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ ಅಭೂತಪೂರ್ವ ಪ್ರತಿಕ್ರಿಯೆ ಪುನೀತ್‌ ನಟನೆಯ ಇನ್ನುಳಿದ ಚಿತ್ರಗಳನ್ನು ತೆರೆ ಮೇಲೆ ತರಲು ಉತ್ತೇಜನೆ ನೀಡಿದ್ದು, ಪುನೀತ್‌ ಚಿತ್ರ ಮಾತ್ರವಲ್ಲದೇ ಇನ್ನುಳಿದ ಸ್ಟಾರ್‌ ನಟರ ವಿಂಟೇಜ್‌ ಚಿತ್ರಗಳನ್ನು ಮರು ಬಿಡುಗಡೆ ಮಾಡುವ ಯೋಚನೆಯನ್ನು ನಿರ್ಮಾಪಕರಲ್ಲಿ ಮೂಡಿಸಿದೆ.

ಜಾಕಿ ಚಿತ್ರದ ಒಟ್ಟು 14 ಸಾವಿರ ಟಿಕೆಟ್‌ಗಳು ಮುಂಗಡ ಬುಕಿಂಗ್‌ ಮೂಲಕ ಮಾರಾಟವಾಗಿದ್ದು, ಇದು ಇತ್ತೀಚೆಗೆ ಬಿಡುಗಡೆಗೊಂಡ ಹೊಸ ಚಿತ್ರಗಳಿಗಿಂತ ಹೆಚ್ಚಿನ ಮಟ್ಟದ್ದಾಗಿದೆ. ಇನ್ನು ಚಿತ್ರಮಂದಿರಗಳ ಪರದೆಗಳ ಮುಂದೆ ಹೊಸ ಚಿತ್ರಕ್ಕೆ ಇರುವಂತಹ ಸೆಲಬ್ರೇಷನ್‌ ಈ ಚಿತ್ರಕ್ಕೂ ದಕ್ಕಿದೆ. ಎವರ್‌ಗ್ರೀನ್‌ ಹಿಟ್‌ ಹಾಡುಗಳನ್ನು ಚಿತ್ರಮಂದಿರದಲ್ಲಿ ಹಾಡುವ ಮೂಲಕ ಅಭಿಮಾನಿಗಳು ಕನ್ಸರ್ಟ್‌ ರೀತಿ ಜಾಕಿ ಚಿತ್ರವನ್ನು ಎಂಜಾಯ್‌ ಮಾಡಿದ್ದಾರೆ. ಮತ್ತೊಮ್ಮೆ ಅಪ್ಪುವನ್ನು ಸಂಭ್ರಮಿಸಿದ್ದಾರೆ. ಹೀಗೆ ದೊಡ್ಡದಾಗಿ ಮರುಬಿಡುಗಡೆಯಾಗುವ ಮೂಲಕ ಜಾಕಿ ದಾಖಲೆಗಳ ಪುಟ ಸೇರಿದೆ.

andolana

Recent Posts

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…

6 mins ago

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

1 hour ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

1 hour ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

3 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

3 hours ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago