ಮನರಂಜನೆ

ಜಾಕಿ ಜಾತ್ರೆ ಜೋರು: ಮರುಬಿಡುಗಡೆ ಟ್ರೆಂಡ್‌ನಲ್ಲಿ ದಾಖಲೆ ಬರೆದ ಅಪ್ಪು ಫ್ಯಾನ್ಸ್‌

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಸೂಪರ್ ಹಿಟ್‌ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್‌ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ.

ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ ಅಭೂತಪೂರ್ವ ಪ್ರತಿಕ್ರಿಯೆ ಪುನೀತ್‌ ನಟನೆಯ ಇನ್ನುಳಿದ ಚಿತ್ರಗಳನ್ನು ತೆರೆ ಮೇಲೆ ತರಲು ಉತ್ತೇಜನೆ ನೀಡಿದ್ದು, ಪುನೀತ್‌ ಚಿತ್ರ ಮಾತ್ರವಲ್ಲದೇ ಇನ್ನುಳಿದ ಸ್ಟಾರ್‌ ನಟರ ವಿಂಟೇಜ್‌ ಚಿತ್ರಗಳನ್ನು ಮರು ಬಿಡುಗಡೆ ಮಾಡುವ ಯೋಚನೆಯನ್ನು ನಿರ್ಮಾಪಕರಲ್ಲಿ ಮೂಡಿಸಿದೆ.

ಜಾಕಿ ಚಿತ್ರದ ಒಟ್ಟು 14 ಸಾವಿರ ಟಿಕೆಟ್‌ಗಳು ಮುಂಗಡ ಬುಕಿಂಗ್‌ ಮೂಲಕ ಮಾರಾಟವಾಗಿದ್ದು, ಇದು ಇತ್ತೀಚೆಗೆ ಬಿಡುಗಡೆಗೊಂಡ ಹೊಸ ಚಿತ್ರಗಳಿಗಿಂತ ಹೆಚ್ಚಿನ ಮಟ್ಟದ್ದಾಗಿದೆ. ಇನ್ನು ಚಿತ್ರಮಂದಿರಗಳ ಪರದೆಗಳ ಮುಂದೆ ಹೊಸ ಚಿತ್ರಕ್ಕೆ ಇರುವಂತಹ ಸೆಲಬ್ರೇಷನ್‌ ಈ ಚಿತ್ರಕ್ಕೂ ದಕ್ಕಿದೆ. ಎವರ್‌ಗ್ರೀನ್‌ ಹಿಟ್‌ ಹಾಡುಗಳನ್ನು ಚಿತ್ರಮಂದಿರದಲ್ಲಿ ಹಾಡುವ ಮೂಲಕ ಅಭಿಮಾನಿಗಳು ಕನ್ಸರ್ಟ್‌ ರೀತಿ ಜಾಕಿ ಚಿತ್ರವನ್ನು ಎಂಜಾಯ್‌ ಮಾಡಿದ್ದಾರೆ. ಮತ್ತೊಮ್ಮೆ ಅಪ್ಪುವನ್ನು ಸಂಭ್ರಮಿಸಿದ್ದಾರೆ. ಹೀಗೆ ದೊಡ್ಡದಾಗಿ ಮರುಬಿಡುಗಡೆಯಾಗುವ ಮೂಲಕ ಜಾಕಿ ದಾಖಲೆಗಳ ಪುಟ ಸೇರಿದೆ.

andolana

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

3 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

4 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

4 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

5 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago