ಮನರಂಜನೆ

ಜಾಕಿ ಜಾತ್ರೆ ಜೋರು: ಮರುಬಿಡುಗಡೆ ಟ್ರೆಂಡ್‌ನಲ್ಲಿ ದಾಖಲೆ ಬರೆದ ಅಪ್ಪು ಫ್ಯಾನ್ಸ್‌

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಸೂಪರ್ ಹಿಟ್‌ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್‌ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ.

ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ ಅಭೂತಪೂರ್ವ ಪ್ರತಿಕ್ರಿಯೆ ಪುನೀತ್‌ ನಟನೆಯ ಇನ್ನುಳಿದ ಚಿತ್ರಗಳನ್ನು ತೆರೆ ಮೇಲೆ ತರಲು ಉತ್ತೇಜನೆ ನೀಡಿದ್ದು, ಪುನೀತ್‌ ಚಿತ್ರ ಮಾತ್ರವಲ್ಲದೇ ಇನ್ನುಳಿದ ಸ್ಟಾರ್‌ ನಟರ ವಿಂಟೇಜ್‌ ಚಿತ್ರಗಳನ್ನು ಮರು ಬಿಡುಗಡೆ ಮಾಡುವ ಯೋಚನೆಯನ್ನು ನಿರ್ಮಾಪಕರಲ್ಲಿ ಮೂಡಿಸಿದೆ.

ಜಾಕಿ ಚಿತ್ರದ ಒಟ್ಟು 14 ಸಾವಿರ ಟಿಕೆಟ್‌ಗಳು ಮುಂಗಡ ಬುಕಿಂಗ್‌ ಮೂಲಕ ಮಾರಾಟವಾಗಿದ್ದು, ಇದು ಇತ್ತೀಚೆಗೆ ಬಿಡುಗಡೆಗೊಂಡ ಹೊಸ ಚಿತ್ರಗಳಿಗಿಂತ ಹೆಚ್ಚಿನ ಮಟ್ಟದ್ದಾಗಿದೆ. ಇನ್ನು ಚಿತ್ರಮಂದಿರಗಳ ಪರದೆಗಳ ಮುಂದೆ ಹೊಸ ಚಿತ್ರಕ್ಕೆ ಇರುವಂತಹ ಸೆಲಬ್ರೇಷನ್‌ ಈ ಚಿತ್ರಕ್ಕೂ ದಕ್ಕಿದೆ. ಎವರ್‌ಗ್ರೀನ್‌ ಹಿಟ್‌ ಹಾಡುಗಳನ್ನು ಚಿತ್ರಮಂದಿರದಲ್ಲಿ ಹಾಡುವ ಮೂಲಕ ಅಭಿಮಾನಿಗಳು ಕನ್ಸರ್ಟ್‌ ರೀತಿ ಜಾಕಿ ಚಿತ್ರವನ್ನು ಎಂಜಾಯ್‌ ಮಾಡಿದ್ದಾರೆ. ಮತ್ತೊಮ್ಮೆ ಅಪ್ಪುವನ್ನು ಸಂಭ್ರಮಿಸಿದ್ದಾರೆ. ಹೀಗೆ ದೊಡ್ಡದಾಗಿ ಮರುಬಿಡುಗಡೆಯಾಗುವ ಮೂಲಕ ಜಾಕಿ ದಾಖಲೆಗಳ ಪುಟ ಸೇರಿದೆ.

andolana

Recent Posts

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

2 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

2 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

2 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

2 hours ago

ಟಿಎಪಿಸಿಎಂಎಸ್ ಚುನಾವಣೆಗೆ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ  ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ…

2 hours ago