ಮನರಂಜನೆ

ಜಾಕಿ ಜಾತ್ರೆ ಜೋರು: ಮರುಬಿಡುಗಡೆ ಟ್ರೆಂಡ್‌ನಲ್ಲಿ ದಾಖಲೆ ಬರೆದ ಅಪ್ಪು ಫ್ಯಾನ್ಸ್‌

ಬೆಂಗಳೂರು: ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ನಟನೆಯ ಸೂಪರ್ ಹಿಟ್‌ ಚಿತ್ರ ಜಾಕಿ 14 ವರ್ಷಗಳ ಬಳಿಕ ಮರುಬಿಡುಗಡೆಯಾಗಿದೆ. ಈ ಮೂಲಕ ಅಪ್ಪು ಅಗಲಿಕೆಯ ಬಳಿಕ ಪುನೀತ್‌ ನಟನೆಯ ಚಿತ್ರಗಳನ್ನು ಮರು ಬಿಡುಗಡೆ ಮಾಡಬೇಕೆಂಬ ಅಭಿಮಾನಿಗಳ ಆಸೆ ಈಡೇರಿದಂತಾಗಿದೆ.

ಅದರಲ್ಲೂ ಚಿತ್ರಕ್ಕೆ ವ್ಯಕ್ತವಾಗಿರುವ ಅಭೂತಪೂರ್ವ ಪ್ರತಿಕ್ರಿಯೆ ಪುನೀತ್‌ ನಟನೆಯ ಇನ್ನುಳಿದ ಚಿತ್ರಗಳನ್ನು ತೆರೆ ಮೇಲೆ ತರಲು ಉತ್ತೇಜನೆ ನೀಡಿದ್ದು, ಪುನೀತ್‌ ಚಿತ್ರ ಮಾತ್ರವಲ್ಲದೇ ಇನ್ನುಳಿದ ಸ್ಟಾರ್‌ ನಟರ ವಿಂಟೇಜ್‌ ಚಿತ್ರಗಳನ್ನು ಮರು ಬಿಡುಗಡೆ ಮಾಡುವ ಯೋಚನೆಯನ್ನು ನಿರ್ಮಾಪಕರಲ್ಲಿ ಮೂಡಿಸಿದೆ.

ಜಾಕಿ ಚಿತ್ರದ ಒಟ್ಟು 14 ಸಾವಿರ ಟಿಕೆಟ್‌ಗಳು ಮುಂಗಡ ಬುಕಿಂಗ್‌ ಮೂಲಕ ಮಾರಾಟವಾಗಿದ್ದು, ಇದು ಇತ್ತೀಚೆಗೆ ಬಿಡುಗಡೆಗೊಂಡ ಹೊಸ ಚಿತ್ರಗಳಿಗಿಂತ ಹೆಚ್ಚಿನ ಮಟ್ಟದ್ದಾಗಿದೆ. ಇನ್ನು ಚಿತ್ರಮಂದಿರಗಳ ಪರದೆಗಳ ಮುಂದೆ ಹೊಸ ಚಿತ್ರಕ್ಕೆ ಇರುವಂತಹ ಸೆಲಬ್ರೇಷನ್‌ ಈ ಚಿತ್ರಕ್ಕೂ ದಕ್ಕಿದೆ. ಎವರ್‌ಗ್ರೀನ್‌ ಹಿಟ್‌ ಹಾಡುಗಳನ್ನು ಚಿತ್ರಮಂದಿರದಲ್ಲಿ ಹಾಡುವ ಮೂಲಕ ಅಭಿಮಾನಿಗಳು ಕನ್ಸರ್ಟ್‌ ರೀತಿ ಜಾಕಿ ಚಿತ್ರವನ್ನು ಎಂಜಾಯ್‌ ಮಾಡಿದ್ದಾರೆ. ಮತ್ತೊಮ್ಮೆ ಅಪ್ಪುವನ್ನು ಸಂಭ್ರಮಿಸಿದ್ದಾರೆ. ಹೀಗೆ ದೊಡ್ಡದಾಗಿ ಮರುಬಿಡುಗಡೆಯಾಗುವ ಮೂಲಕ ಜಾಕಿ ದಾಖಲೆಗಳ ಪುಟ ಸೇರಿದೆ.

andolana

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

4 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

4 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

6 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

6 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

6 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

8 hours ago