ಮನರಂಜನೆ

ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿ ಯಾತ್ರೆ ಮಾಡುತ್ತಿರುವ ಜಿಮ್ ರವಿ

ಕನ್ನಡದ ಹಲವು ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ‘ಪುರುಷೋತ್ತಮ’ ಚಿತ್ರದ ಹೀರೋ ಮತ್ತು ನಿರ್ಮಾಪಕರಾದ ಕೋಲಾರ ಮೂಲದ ಎ.ಕೆ‌.ರವಿ ಅಲಿಯಾಸ್‍ ಜಿಮ್ ರವಿ ಈಗ ಒಂದು ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರುವಾಸಿಯಾಗಿರುವ ರವಿ, ಒಂದು ಮಾದರಿಯ ಕೆಲಸವನ್ನು ಮಾಡುವುದಕ್ಕೆ ಮುಂದಾಗಿದ್ದಾರೆ.

ಇಂದು ರಾಜ್ಯದ ವಿವಿಧ ಕಡೆಗಳಿಂದ ಸುಮಾರು 80 ಜನ ಅಶಕ್ತರನ್ನು ಅವರು ಕಾಶಿಯಾತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಸುಮಾರು 101 ಜನರ ತಂಡ ಇಂದು ಬೆಂಗಳೂರು ವಿಮಾನ ನಿಲ್ದಾಣದಿಂದ ರಾಮ ಜನ್ಮಭೂಮಿ ಅಯೋಧ್ಯೆಗೆ ಪಯಣ ಮಾಡಲಿದ್ದು, ಅಲ್ಲಿಂದ ಪ್ರಯಾಗರಾಜ್, ಕಾಶಿಗೆ ಹೋಗಲಿದ್ದಾರೆ. ಒಟ್ಟು ಮೂರು ದಿನಗಳ ಯಾತ್ರೆ ಇದು. ಎಲ್ಲಾ ಕಡೆ ಎಸಿ ವಾಹನ ಹಾಗೂ ಎಸಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ‌. ಇಡೀ ತಂಡದ ಸಂಪೂರ್ಣ ವೆಚ್ಚವನ್ನು ಜಿಮ್‍ ರವಿ ಭರಿಸಲಿದ್ದಾರೆ.

ಈ ಕುರಿತು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ‘ನನ್ನ ತಾಯಿ ನನಗೆ ತುಂಬಾ ಆದರ್ಶ. ಜೀವನದ ಪಾಠ ಕಲಿಸಿದ ಮಹಾತಾಯಿ‌ ಅವರು. ಒಬ್ಬರ ಸುಖಕ್ಕೆ ನೀನು ಆಗದಿದ್ದರೂ ‌ಪರವಾಗಿಲ್ಲ, ಕಷ್ಟದಲ್ಲಿ ಅವರ ಜೊತೆಗಿರು, ಹಿರಿಯರ ಮುಂದೆ ಕೈ ಕಟ್ಟಿ ನಿಲ್ಲು‌ ಅಂತ‌ ಅಮ್ಮ ಹೇಳಿಕೊಟ್ಟಿದ್ದರು. ಅಮ್ಮನ ನಿಧನದ ಕೆಲವು ತಿಂಗಳ ನಂತರ ಅಪ್ಪ, ನನ್ನ ಹತ್ತಿರ ಬಂದು, ಕಾಶಿ‌ಯಾತ್ರೆಗೆ ಕರೆದುಕೊಂಡು ಹೋಗು ಎಂದರು.

ನನ್ನ ಹತ್ತಿರ ಆಗ ಅಷ್ಟು ದುಡ್ಡು ಇರಲಿಲ್ಲ. ಅಪ್ಪನಿಗೆ ಏರು ದ್ವನಿಯಲ್ಲಿ ಈಗ ಅದೆಲಾ ಆಗಲ್ಲ ಅಂದು ಬಿಟ್ಟಿದ್ದೆ. ಅದಾದ ಕೆಲವು ತಿಂಗಳ ನಂತರ ಮತ್ತೆ ಕೇಳಿದರು. ನಾನು ಅವರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುತ್ತೇನೆ ಅಂತ ಹೇಳಿ ಸಮಾಧಾನ ಮಾಡಿದೆ.‌ ಕೆಲವು ದಿನಗಳ ನಂತರ ಗೆಳೆಯರ ಹತ್ತಿರ ಸಾಲ ಮಾಡಿ ಅಪ್ಪನ ಕಾಶಿಯಾತ್ರೆಗೆ ವಿಮಾನದ ಟಿಕೇಟ್ ಬುಕ್ ಮಾಡಿದೆ.‌ ಆ ವಿಷಯ ಅಪ್ಪನಿಗೆ ಫೋನ್ ಮಾಡು ಹೇಳಿ, ಅವರು ಖುಷಿಯಾದರು.

ಆದರೆ, ವಿಧಿ ಆಟ ಬೇರೆ ಇತ್ತು. ನಾನು ಈ ವಿಷಯ ತಿಳಿಸಿದ ಕೆಲವೇ ಗಂಟೆಗಳಲ್ಲೇ ಅಪ್ಪನ್ನು ನಮ್ಮನ್ನು ಬಿಟ್ಟು ಹೋಗಿಬಿಟ್ಟರು. ಅವರ ಕಾಶಿಯಾತ್ರೆಯ ಆಸೆ ಅವರ ಜೊತೆಗೆ ಹೋಯಿತು. ಕಾಶಿಯಾತ್ರೆ ಮಾಡಲು ಸಾಧ್ಯವಿಲ್ಲದ ಕೆಲವು ಅಶಕ್ತರಿಗೆ ನಮ್ಮ ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ ಮಾಡಿಸಬೇಕು ಎಂದು ಅಂದೇ ತೀರ್ಮಾನ ಮಾಡಿದೆ’ ಎಂದರು.

ಅದಕ್ಕಾಗಿ 14 ವರ್ಷಗಳ ಕಾಲ ಹಣ ಕೂಡಿಟ್ಟಿರುವುದಾಗಿ ಹೇಳಿದ ಅವರು, ‘ನಮ್ಮ ಅಪ್ಪ ನಿಧನರಾಗಿ 14 ವರ್ಷಗಳಾಯಿತು. ಅಂದಿನಿಂದ ಇಂದಿನವರೆಗೂ ಅದಕೋಸ್ಕರ ಹುಂಡಿ ಇಟ್ಟು ದುಡ್ಡು ಕೂಡಿ ಹಾಕುತ್ತಿದ್ದೆ. ಯಾವುದೇ ದುಂದು ವೆಚ್ವ‌‌ ಮಾಡದೇ 10, 20 ರೂಪಾಯಿಯಿಂದ ಹಿಡಿದು ಸಾವಿರ ರೂಪಾಯಿಗಳವರೆಗೂ ಹುಂಡಿಯಲ್ಲಿ ಹಾಕುತ್ತಿದ್ದೆ. ಈಗ ಅದಕ್ಕೆ ಕಾಲ ಕೂಡಿ ಬಂದಿದೆ. ವಾಣಿಜ್ಯ ತೆರೆಗೆ ಅಧಿಕಾರಿಗಳಾದ ಜಗನ್ನಾಥ್ ಹಾಗೂ ಕುಟುಂಬದವರ ಮಾರ್ಗದರ್ಶನದಲ್ಲಿ ಈಗ ಅಶಕ್ತರನ್ನು ಕರೆದುಕೊಂಡು ಹೊರಟಿದ್ದೇನೆ’ ಎಂದರು.

ಆಂದೋಲನ ಡೆಸ್ಕ್

Recent Posts

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

1 hour ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

1 hour ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

2 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

2 hours ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

2 hours ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

3 hours ago