ಮನರಂಜನೆ

‘ಲೈಫ್ ಟುಡೇ’ ಚಿತ್ರದ ಹಾಡಿಗೆ ಧ್ವನಿಯಾದ ‘ಜೋಗಿ’ ಪ್ರೇಮ್‍

ಕನ್ನಡ ಚಿತ್ರರಂಗದಲ್ಲಿ ತಾಯಿ ಸೆಂಟಿಮೆಂಟ್‍ ಹಾಡುಗಳನ್ನು ಹಾಡುವುದರಲ್ಲಿ ‘ಜೋಗಿ’ ಪ್ರೇಮ್‍ ಜನಪ್ರಿಯರು. ‘ಬ್ರಹ್ಮ ವಿಷ್ಣು …’, ‘ಬೇಡುವೆನು ವರವನ್ನು …’ ಮುಂತಾದ ಕೆಲವು ಜನಪ್ರಿಯ ಹಾಡುಗಳನ್ನು ಹಾಡಿರುವ ಪ್ರೇಮ್‍, ಇದೀಗ ಬೇರೆ ತರಹದ ಹಾಡನ್ನು ಹಾಡಿದ್ದಾರೆ.

‘ಲೈಫ್‍ ಟುಡೇ’ ಎಂಬ ಚಿತ್ರಕ್ಕೆ ಪ್ರೇಮ್‍, ‘ಸಿಕ್ಕರೇ ಸಿಕ್ಕರೇ …’ ಎಂಬ ಹಾಡನ್ನು ಹಾಡಿದ್ದಾರೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರದ ತಮಿಳು ಅವತರಣಿಕೆಗೆ ಅಲ್ಲಿನ ಖ್ಯಾತ ಸಂಗೀತ ನಿರ್ದೇಶ ಜಿ.ವಿ. ಪ್ರಕಾಶ್ ಕುಮಾರ್ ಧ್ವನಿಯಾಗಿದ್ದರು. ಈಗ ಕನ್ನಡ ಅವತರಣಿಕೆಯ ‘ಸಿಕ್ಕರೆ ಸಿಕ್ಕರೆ ಒಳ್ಳೆಯ ಹುಡುಗರು ಸಿಕ್ಕರೆ …’ ಎಂಬ ಹಾಡನ್ನು ಪ್ರೇಮ್‍ ಹಾಡಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಸಂಗೀತ ಸಂಯೋಜಿಸಿದ್ದು, ರಾಮನಾರಾಯಣ್‍ ಸಾಹಿತ್ಯ ರಚಿಸಿದ್ದಾರೆ. ಇತ್ತೀಚೆಗೆ ಈ ಹಾಡಿನ ರೆಕಾರ್ಡಿಂಗ್‍ ಆಗಿದೆ.

ಇತ್ತೀಚೆಗೆ ಪ್ರೇಮ್ ಒಂದು ಹಾಡು ಹಾಡೋದಕ್ಕೆ ಐದು ಲಕ್ಷ ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಸುದ್ದಿಯಾಗಿತ್ತು. ಹೀಗಿರುವಾಗಲೇ, ‘ಲೈಫ್‍ ಟುಡೇ’ ಚಿತ್ರಕ್ಕೆ ಪ್ರೇಮ್‍ ಎಷ್ಟು ಸಂಭಾವನೆ ಪಡೆದರು ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ. ಮುಂಬೈನ ಗಾಯಕ-ಗಾಯಕಿಯರಿಗೆ ಅಷ್ಟು ದುಡ್ಡು ಕೊಡುವಾಗ, ತಮಗೇಕೆ ಕೊಡುವುದಿಲ್ಲ ಎಂದು ಪ್ರೇಮ್‍ ಪ್ರಶ್ನಿಸುತ್ತಾರೆ.

ಈ ಕುರಿತು ಮಾತನಾಡುವ ಅವರು, ‘ನಾನು 10ಲಕ್ಷ ಸಂಭಾವನೆ ಕೇಳುತ್ತೇನೆ. ಮುಂಬೈಯವರಿಗೆ ಕೊಡುವಾಗ, ಕನ್ನಡಿಗರಿಗೆ ಯಾಕೆ ಕೊಡಬಾರದು? ನಾನು ಹಾಡುವ ಹಾಡಿನ ಸಂಭಾವನೆ ಟ್ರಸ್ಟ್ ಸೇರುತ್ತೆ. ಅಮ್ಮನ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಸೇವೆಗೆ ಬಳಕೆಯಾಗುತ್ತದೆ’ ಎನ್ನುತ್ತಾರೆ.

ಪ್ರೇಮ್‍ ತಮ್ಮ ಸಂಯೋಜನೆಯ ಹಾಡನ್ನು ಹಾಡಿರುವುದು ತಮ್ಮ ಪುಣ್ಯ ಎನ್ನುವ ಶ್ರೀಧರ್ ವಿ. ಸಂಭ್ರಮ್‍, ‘ನಾನು ಅವರ ದೊಡ್ಡ ಅಭಿಮಾನಿ. ಅವರ ಧ್ವನಿಯಲ್ಲಿರುವ ಮುಗ್ಧತೆ ಮತ್ತು ನೋವಿನ ಗಾಢತೆ ಈ ಹಾಡಿಗೆ ಬೇಕಿತ್ತು. ಅದು ಸಿಕ್ಕಿದೆ. ಈ ಹಾಡು ದೊಡ್ಡ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎನ್ನುತ್ತಾರೆ.

‘ಲೈಫ್‍ ಟುಡೇ’ ಚಿತ್ರವನ್ನು ಕಾಂತ ಕನ್ನಲ್ಲಿ ನಿರ್ದೇಶಿಸುತ್ತಿದ್ದು, ಪ್ರದೀಪ್‍ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಿರಣ್‍ ಆದಿತ್ಯ ನಾಯಕನಾಗಿ ಅಭಿನಯಿಸಿದ್ದು, ಲೇಖಚಂದ್ರ ನಾಯಕಿಯಾಗಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಬಲ ನಾಣಿ, ಅಪೂರ್ವ, ಕಾಕ್ರೋಚ್ ಸುಧಿ, ಜಗ್ಗಪ್ಪ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ: ಕೈ ಶಾಸಕ ಮಂಥರ್‌ ಗೌಡ ಖಂಡನೆ

ಕೊಡಗು: ಅನ್ಯಕೋಮಿನ ಯುವಕರು ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣವನ್ನು ಕಾಂಗ್ರೆಸ್‌ ಶಾಸಕ ಮಂಥರ್‌ ಗೌಡ ಖಂಡಿಸಿದ್ದಾರೆ. ಈ…

22 mins ago

ಚಂದ್ರಗ್ರಹಣದ ವೇಳೆ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಸಮಯ ಬದಲಾವಣೆ

ಮಂಗಳೂರು: ಮಾರ್ಚ್.‌3ರಂದು ಈ ವರ್ಷದ ಮೊದಲ ಚಂದ್ರಗ್ರಹಣ ಸಂಭವಿಸಲಿದೆ. ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ದರ್ಶನ ಸಮಯ…

2 hours ago

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.…

2 hours ago

ಶಾಸಕರ ಡಿನ್ನರ್‌ ಮೀಟಿಂಗ್‌: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ…

2 hours ago

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

3 hours ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

3 hours ago