ಮನರಂಜನೆ

‘ಲೈಫ್ ಟುಡೇ’ ಚಿತ್ರದ ಹಾಡಿಗೆ ಧ್ವನಿಯಾದ ‘ಜೋಗಿ’ ಪ್ರೇಮ್‍

ಕನ್ನಡ ಚಿತ್ರರಂಗದಲ್ಲಿ ತಾಯಿ ಸೆಂಟಿಮೆಂಟ್‍ ಹಾಡುಗಳನ್ನು ಹಾಡುವುದರಲ್ಲಿ ‘ಜೋಗಿ’ ಪ್ರೇಮ್‍ ಜನಪ್ರಿಯರು. ‘ಬ್ರಹ್ಮ ವಿಷ್ಣು …’, ‘ಬೇಡುವೆನು ವರವನ್ನು …’ ಮುಂತಾದ ಕೆಲವು ಜನಪ್ರಿಯ ಹಾಡುಗಳನ್ನು ಹಾಡಿರುವ ಪ್ರೇಮ್‍, ಇದೀಗ ಬೇರೆ ತರಹದ ಹಾಡನ್ನು ಹಾಡಿದ್ದಾರೆ.

‘ಲೈಫ್‍ ಟುಡೇ’ ಎಂಬ ಚಿತ್ರಕ್ಕೆ ಪ್ರೇಮ್‍, ‘ಸಿಕ್ಕರೇ ಸಿಕ್ಕರೇ …’ ಎಂಬ ಹಾಡನ್ನು ಹಾಡಿದ್ದಾರೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರದ ತಮಿಳು ಅವತರಣಿಕೆಗೆ ಅಲ್ಲಿನ ಖ್ಯಾತ ಸಂಗೀತ ನಿರ್ದೇಶ ಜಿ.ವಿ. ಪ್ರಕಾಶ್ ಕುಮಾರ್ ಧ್ವನಿಯಾಗಿದ್ದರು. ಈಗ ಕನ್ನಡ ಅವತರಣಿಕೆಯ ‘ಸಿಕ್ಕರೆ ಸಿಕ್ಕರೆ ಒಳ್ಳೆಯ ಹುಡುಗರು ಸಿಕ್ಕರೆ …’ ಎಂಬ ಹಾಡನ್ನು ಪ್ರೇಮ್‍ ಹಾಡಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಸಂಗೀತ ಸಂಯೋಜಿಸಿದ್ದು, ರಾಮನಾರಾಯಣ್‍ ಸಾಹಿತ್ಯ ರಚಿಸಿದ್ದಾರೆ. ಇತ್ತೀಚೆಗೆ ಈ ಹಾಡಿನ ರೆಕಾರ್ಡಿಂಗ್‍ ಆಗಿದೆ.

ಇತ್ತೀಚೆಗೆ ಪ್ರೇಮ್ ಒಂದು ಹಾಡು ಹಾಡೋದಕ್ಕೆ ಐದು ಲಕ್ಷ ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಸುದ್ದಿಯಾಗಿತ್ತು. ಹೀಗಿರುವಾಗಲೇ, ‘ಲೈಫ್‍ ಟುಡೇ’ ಚಿತ್ರಕ್ಕೆ ಪ್ರೇಮ್‍ ಎಷ್ಟು ಸಂಭಾವನೆ ಪಡೆದರು ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ. ಮುಂಬೈನ ಗಾಯಕ-ಗಾಯಕಿಯರಿಗೆ ಅಷ್ಟು ದುಡ್ಡು ಕೊಡುವಾಗ, ತಮಗೇಕೆ ಕೊಡುವುದಿಲ್ಲ ಎಂದು ಪ್ರೇಮ್‍ ಪ್ರಶ್ನಿಸುತ್ತಾರೆ.

ಈ ಕುರಿತು ಮಾತನಾಡುವ ಅವರು, ‘ನಾನು 10ಲಕ್ಷ ಸಂಭಾವನೆ ಕೇಳುತ್ತೇನೆ. ಮುಂಬೈಯವರಿಗೆ ಕೊಡುವಾಗ, ಕನ್ನಡಿಗರಿಗೆ ಯಾಕೆ ಕೊಡಬಾರದು? ನಾನು ಹಾಡುವ ಹಾಡಿನ ಸಂಭಾವನೆ ಟ್ರಸ್ಟ್ ಸೇರುತ್ತೆ. ಅಮ್ಮನ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಸೇವೆಗೆ ಬಳಕೆಯಾಗುತ್ತದೆ’ ಎನ್ನುತ್ತಾರೆ.

ಪ್ರೇಮ್‍ ತಮ್ಮ ಸಂಯೋಜನೆಯ ಹಾಡನ್ನು ಹಾಡಿರುವುದು ತಮ್ಮ ಪುಣ್ಯ ಎನ್ನುವ ಶ್ರೀಧರ್ ವಿ. ಸಂಭ್ರಮ್‍, ‘ನಾನು ಅವರ ದೊಡ್ಡ ಅಭಿಮಾನಿ. ಅವರ ಧ್ವನಿಯಲ್ಲಿರುವ ಮುಗ್ಧತೆ ಮತ್ತು ನೋವಿನ ಗಾಢತೆ ಈ ಹಾಡಿಗೆ ಬೇಕಿತ್ತು. ಅದು ಸಿಕ್ಕಿದೆ. ಈ ಹಾಡು ದೊಡ್ಡ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎನ್ನುತ್ತಾರೆ.

‘ಲೈಫ್‍ ಟುಡೇ’ ಚಿತ್ರವನ್ನು ಕಾಂತ ಕನ್ನಲ್ಲಿ ನಿರ್ದೇಶಿಸುತ್ತಿದ್ದು, ಪ್ರದೀಪ್‍ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಿರಣ್‍ ಆದಿತ್ಯ ನಾಯಕನಾಗಿ ಅಭಿನಯಿಸಿದ್ದು, ಲೇಖಚಂದ್ರ ನಾಯಕಿಯಾಗಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಬಲ ನಾಣಿ, ಅಪೂರ್ವ, ಕಾಕ್ರೋಚ್ ಸುಧಿ, ಜಗ್ಗಪ್ಪ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

40 mins ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

54 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

2 hours ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

2 hours ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

3 hours ago