ಮನರಂಜನೆ

‘ಲೈಫ್ ಟುಡೇ’ ಚಿತ್ರದ ಹಾಡಿಗೆ ಧ್ವನಿಯಾದ ‘ಜೋಗಿ’ ಪ್ರೇಮ್‍

ಕನ್ನಡ ಚಿತ್ರರಂಗದಲ್ಲಿ ತಾಯಿ ಸೆಂಟಿಮೆಂಟ್‍ ಹಾಡುಗಳನ್ನು ಹಾಡುವುದರಲ್ಲಿ ‘ಜೋಗಿ’ ಪ್ರೇಮ್‍ ಜನಪ್ರಿಯರು. ‘ಬ್ರಹ್ಮ ವಿಷ್ಣು …’, ‘ಬೇಡುವೆನು ವರವನ್ನು …’ ಮುಂತಾದ ಕೆಲವು ಜನಪ್ರಿಯ ಹಾಡುಗಳನ್ನು ಹಾಡಿರುವ ಪ್ರೇಮ್‍, ಇದೀಗ ಬೇರೆ ತರಹದ ಹಾಡನ್ನು ಹಾಡಿದ್ದಾರೆ.

‘ಲೈಫ್‍ ಟುಡೇ’ ಎಂಬ ಚಿತ್ರಕ್ಕೆ ಪ್ರೇಮ್‍, ‘ಸಿಕ್ಕರೇ ಸಿಕ್ಕರೇ …’ ಎಂಬ ಹಾಡನ್ನು ಹಾಡಿದ್ದಾರೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರದ ತಮಿಳು ಅವತರಣಿಕೆಗೆ ಅಲ್ಲಿನ ಖ್ಯಾತ ಸಂಗೀತ ನಿರ್ದೇಶ ಜಿ.ವಿ. ಪ್ರಕಾಶ್ ಕುಮಾರ್ ಧ್ವನಿಯಾಗಿದ್ದರು. ಈಗ ಕನ್ನಡ ಅವತರಣಿಕೆಯ ‘ಸಿಕ್ಕರೆ ಸಿಕ್ಕರೆ ಒಳ್ಳೆಯ ಹುಡುಗರು ಸಿಕ್ಕರೆ …’ ಎಂಬ ಹಾಡನ್ನು ಪ್ರೇಮ್‍ ಹಾಡಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಸಂಗೀತ ಸಂಯೋಜಿಸಿದ್ದು, ರಾಮನಾರಾಯಣ್‍ ಸಾಹಿತ್ಯ ರಚಿಸಿದ್ದಾರೆ. ಇತ್ತೀಚೆಗೆ ಈ ಹಾಡಿನ ರೆಕಾರ್ಡಿಂಗ್‍ ಆಗಿದೆ.

ಇತ್ತೀಚೆಗೆ ಪ್ರೇಮ್ ಒಂದು ಹಾಡು ಹಾಡೋದಕ್ಕೆ ಐದು ಲಕ್ಷ ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಸುದ್ದಿಯಾಗಿತ್ತು. ಹೀಗಿರುವಾಗಲೇ, ‘ಲೈಫ್‍ ಟುಡೇ’ ಚಿತ್ರಕ್ಕೆ ಪ್ರೇಮ್‍ ಎಷ್ಟು ಸಂಭಾವನೆ ಪಡೆದರು ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ. ಮುಂಬೈನ ಗಾಯಕ-ಗಾಯಕಿಯರಿಗೆ ಅಷ್ಟು ದುಡ್ಡು ಕೊಡುವಾಗ, ತಮಗೇಕೆ ಕೊಡುವುದಿಲ್ಲ ಎಂದು ಪ್ರೇಮ್‍ ಪ್ರಶ್ನಿಸುತ್ತಾರೆ.

ಈ ಕುರಿತು ಮಾತನಾಡುವ ಅವರು, ‘ನಾನು 10ಲಕ್ಷ ಸಂಭಾವನೆ ಕೇಳುತ್ತೇನೆ. ಮುಂಬೈಯವರಿಗೆ ಕೊಡುವಾಗ, ಕನ್ನಡಿಗರಿಗೆ ಯಾಕೆ ಕೊಡಬಾರದು? ನಾನು ಹಾಡುವ ಹಾಡಿನ ಸಂಭಾವನೆ ಟ್ರಸ್ಟ್ ಸೇರುತ್ತೆ. ಅಮ್ಮನ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಸೇವೆಗೆ ಬಳಕೆಯಾಗುತ್ತದೆ’ ಎನ್ನುತ್ತಾರೆ.

ಪ್ರೇಮ್‍ ತಮ್ಮ ಸಂಯೋಜನೆಯ ಹಾಡನ್ನು ಹಾಡಿರುವುದು ತಮ್ಮ ಪುಣ್ಯ ಎನ್ನುವ ಶ್ರೀಧರ್ ವಿ. ಸಂಭ್ರಮ್‍, ‘ನಾನು ಅವರ ದೊಡ್ಡ ಅಭಿಮಾನಿ. ಅವರ ಧ್ವನಿಯಲ್ಲಿರುವ ಮುಗ್ಧತೆ ಮತ್ತು ನೋವಿನ ಗಾಢತೆ ಈ ಹಾಡಿಗೆ ಬೇಕಿತ್ತು. ಅದು ಸಿಕ್ಕಿದೆ. ಈ ಹಾಡು ದೊಡ್ಡ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎನ್ನುತ್ತಾರೆ.

‘ಲೈಫ್‍ ಟುಡೇ’ ಚಿತ್ರವನ್ನು ಕಾಂತ ಕನ್ನಲ್ಲಿ ನಿರ್ದೇಶಿಸುತ್ತಿದ್ದು, ಪ್ರದೀಪ್‍ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಿರಣ್‍ ಆದಿತ್ಯ ನಾಯಕನಾಗಿ ಅಭಿನಯಿಸಿದ್ದು, ಲೇಖಚಂದ್ರ ನಾಯಕಿಯಾಗಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಬಲ ನಾಣಿ, ಅಪೂರ್ವ, ಕಾಕ್ರೋಚ್ ಸುಧಿ, ಜಗ್ಗಪ್ಪ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

11 hours ago