ಮನರಂಜನೆ

‘ಲೈಫ್ ಟುಡೇ’ ಚಿತ್ರದ ಹಾಡಿಗೆ ಧ್ವನಿಯಾದ ‘ಜೋಗಿ’ ಪ್ರೇಮ್‍

ಕನ್ನಡ ಚಿತ್ರರಂಗದಲ್ಲಿ ತಾಯಿ ಸೆಂಟಿಮೆಂಟ್‍ ಹಾಡುಗಳನ್ನು ಹಾಡುವುದರಲ್ಲಿ ‘ಜೋಗಿ’ ಪ್ರೇಮ್‍ ಜನಪ್ರಿಯರು. ‘ಬ್ರಹ್ಮ ವಿಷ್ಣು …’, ‘ಬೇಡುವೆನು ವರವನ್ನು …’ ಮುಂತಾದ ಕೆಲವು ಜನಪ್ರಿಯ ಹಾಡುಗಳನ್ನು ಹಾಡಿರುವ ಪ್ರೇಮ್‍, ಇದೀಗ ಬೇರೆ ತರಹದ ಹಾಡನ್ನು ಹಾಡಿದ್ದಾರೆ.

‘ಲೈಫ್‍ ಟುಡೇ’ ಎಂಬ ಚಿತ್ರಕ್ಕೆ ಪ್ರೇಮ್‍, ‘ಸಿಕ್ಕರೇ ಸಿಕ್ಕರೇ …’ ಎಂಬ ಹಾಡನ್ನು ಹಾಡಿದ್ದಾರೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರದ ತಮಿಳು ಅವತರಣಿಕೆಗೆ ಅಲ್ಲಿನ ಖ್ಯಾತ ಸಂಗೀತ ನಿರ್ದೇಶ ಜಿ.ವಿ. ಪ್ರಕಾಶ್ ಕುಮಾರ್ ಧ್ವನಿಯಾಗಿದ್ದರು. ಈಗ ಕನ್ನಡ ಅವತರಣಿಕೆಯ ‘ಸಿಕ್ಕರೆ ಸಿಕ್ಕರೆ ಒಳ್ಳೆಯ ಹುಡುಗರು ಸಿಕ್ಕರೆ …’ ಎಂಬ ಹಾಡನ್ನು ಪ್ರೇಮ್‍ ಹಾಡಿದ್ದಾರೆ. ಶ್ರೀಧರ್ ವಿ. ಸಂಭ್ರಮ್ ಸಂಗೀತ ಸಂಯೋಜಿಸಿದ್ದು, ರಾಮನಾರಾಯಣ್‍ ಸಾಹಿತ್ಯ ರಚಿಸಿದ್ದಾರೆ. ಇತ್ತೀಚೆಗೆ ಈ ಹಾಡಿನ ರೆಕಾರ್ಡಿಂಗ್‍ ಆಗಿದೆ.

ಇತ್ತೀಚೆಗೆ ಪ್ರೇಮ್ ಒಂದು ಹಾಡು ಹಾಡೋದಕ್ಕೆ ಐದು ಲಕ್ಷ ಸಂಭಾವನೆ ತೆಗೆದುಕೊಳ್ಳುತ್ತಾರೆ ಎಂಬ ಸುದ್ದಿಯಾಗಿತ್ತು. ಹೀಗಿರುವಾಗಲೇ, ‘ಲೈಫ್‍ ಟುಡೇ’ ಚಿತ್ರಕ್ಕೆ ಪ್ರೇಮ್‍ ಎಷ್ಟು ಸಂಭಾವನೆ ಪಡೆದರು ಎಂಬ ಪ್ರಶ್ನೆ ಸಹಜವಾಗಿಯೇ ಎದುರಾಗುತ್ತದೆ. ಮುಂಬೈನ ಗಾಯಕ-ಗಾಯಕಿಯರಿಗೆ ಅಷ್ಟು ದುಡ್ಡು ಕೊಡುವಾಗ, ತಮಗೇಕೆ ಕೊಡುವುದಿಲ್ಲ ಎಂದು ಪ್ರೇಮ್‍ ಪ್ರಶ್ನಿಸುತ್ತಾರೆ.

ಈ ಕುರಿತು ಮಾತನಾಡುವ ಅವರು, ‘ನಾನು 10ಲಕ್ಷ ಸಂಭಾವನೆ ಕೇಳುತ್ತೇನೆ. ಮುಂಬೈಯವರಿಗೆ ಕೊಡುವಾಗ, ಕನ್ನಡಿಗರಿಗೆ ಯಾಕೆ ಕೊಡಬಾರದು? ನಾನು ಹಾಡುವ ಹಾಡಿನ ಸಂಭಾವನೆ ಟ್ರಸ್ಟ್ ಸೇರುತ್ತೆ. ಅಮ್ಮನ ಟ್ರಸ್ಟ್ ಮೂಲಕ ಅನೇಕ ಸಾಮಾಜಿಕ ಸೇವೆಗೆ ಬಳಕೆಯಾಗುತ್ತದೆ’ ಎನ್ನುತ್ತಾರೆ.

ಪ್ರೇಮ್‍ ತಮ್ಮ ಸಂಯೋಜನೆಯ ಹಾಡನ್ನು ಹಾಡಿರುವುದು ತಮ್ಮ ಪುಣ್ಯ ಎನ್ನುವ ಶ್ರೀಧರ್ ವಿ. ಸಂಭ್ರಮ್‍, ‘ನಾನು ಅವರ ದೊಡ್ಡ ಅಭಿಮಾನಿ. ಅವರ ಧ್ವನಿಯಲ್ಲಿರುವ ಮುಗ್ಧತೆ ಮತ್ತು ನೋವಿನ ಗಾಢತೆ ಈ ಹಾಡಿಗೆ ಬೇಕಿತ್ತು. ಅದು ಸಿಕ್ಕಿದೆ. ಈ ಹಾಡು ದೊಡ್ಡ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎನ್ನುತ್ತಾರೆ.

‘ಲೈಫ್‍ ಟುಡೇ’ ಚಿತ್ರವನ್ನು ಕಾಂತ ಕನ್ನಲ್ಲಿ ನಿರ್ದೇಶಿಸುತ್ತಿದ್ದು, ಪ್ರದೀಪ್‍ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಕಿರಣ್‍ ಆದಿತ್ಯ ನಾಯಕನಾಗಿ ಅಭಿನಯಿಸಿದ್ದು, ಲೇಖಚಂದ್ರ ನಾಯಕಿಯಾಗಿ ಅಭಿನಯಿಸಿದ್ದಾರೆ. ಮಿಕ್ಕಂತೆ ತಬಲ ನಾಣಿ, ಅಪೂರ್ವ, ಕಾಕ್ರೋಚ್ ಸುಧಿ, ಜಗ್ಗಪ್ಪ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago