ಮನರಂಜನೆ

ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು ಎಂದ ‘ಜೋಗಿ’ ಪ್ರೇಮ್‍

ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್‌, ಯಶ್‍, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಈಗ ನಟ-ನಿರ್ದೇಶಕ ‘ಜೋಗಿ’ ಪ್ರೇಮ್‍, ಈ ದಾಳಿಯನ್ನು ಖಂಡಿಸುವುದರ ಜೊತೆಗೆ, ಉಗ್ರರನ್ನು ಕತ್ತರಿಸಿ ಪೀಸ್‍ ಪೀಸ್‍ ಮಾಡಿ ಎಸೆಯಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ನಮ್ಮ ಮೇಲೆ ಯುದ್ಧ ಸಾರಲು ಬಂದವರ ವಿರುದ್ಧ ಯುದ್ಧ ಮಾಡಲೇಬೇಕು ಎಂದು ಹೇಳಿದ್ದಾರೆ.

ಸೋಮವಾರ ಸಂಜೆ, ‘ನಾನು ಮತ್ತು ಗುಂಡ 2’ ಚಿತ್ರದ ಹಾಡು ಬಿಡುಗಡೆ ಮಾಡುವುದಕ್ಕೆ ಬಂದಿದ್ದ ಪ್ರೇಮ್‍, ಈ ಸಂದರ್ಭದಲ್ಲಿ ಪೆಹಲ್ಗಾಮ್‍ ದಾಳಿಯ ಕುರಿತು ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಉಗ್ರರಿಗೆ ಯಾವುದೇ ಸೆಂಟಿಮೆಂಟ್‍ ತೋರಿಸಬಾರದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಸೆಂಟಿಮೆಂಟ್‍ ಇರಲೇ ಬಾರದು. ಹೊಡಿ ಕಡಿ ಅಂತ ಇರಬೇಕು. ಅಷ್ಟು ಅಮಾಯಕ ಜೀವಗಳನ್ನು ತೆಗೆದಿದ್ದಾರೆ ಎಂದರೆ ಸೆಂಟಿಮೆಂಟ್‍ ನೋಡಲೇಬಾರದು. ಅವನ್ಯಾವನೋ ಹೋಗಿ ಮೋದಿಗೆ ಹೇಳು ಅಂತಾನೆ ಅಂದರೆ, ಅವರನ್ನೆಲ್ಲಾ ಕತ್ತರಿಸಿ ಪೀಸ್‍ ಪೀಸ್ ಮಾಡಿ ಎಸೆಯಬೇಕು. ಅಷ್ಟು ಕ್ರೂರತನ ಅದು. ಅವರು ಹೇಡಿಗಳು. ಅವರಿಗೆ ಎಮೋಷನ್ಸ್ ತೋರಿಸುವುದು ತಪ್ಪು. ಯುದ್ಧ ಬೇಡ ಎಂದು ಕೆಲವರು ಹೇಳುತ್ತಾರೆ. ಯುದ್ಧ ಮಾಡಲೇಬೇಕು. ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು. ನಮ್ಮ ಮೇಲೆ ಯುದ್ಧ ಮಾಡುತ್ತಾರೆ, ನಮ್ಮ ಜನರನ್ನು ಸಾಯಿಸುತ್ತಾರೆ ಎಂದರೆ ನಾವು ಯುದ್ಧ ಮಾಡಲೇಬೇಕು. ಅವರು ಮಾಡಿದ್ದು ಹೀನ ಕೃತ್ಯ.

ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ ಎನ್ನುವ ಪ್ರೇಮ್‍, ‘ಪ್ರಧಾನಿ ಮೋದಿ ಇದ್ದಾರೆ. 100 ಪರ್ಸೆಂಟ್‍ ಅವರು ಈ ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಹೊಡೆದೇ ಹೊಡೆಯುತ್ತಾರೆ. ನಮ್ಮ ಮಿಲಿಟ್ರಿಯವರೇನು ಸಾಮಾನ್ಯರಲ್ಲ. ನಮ್ಮ ಸೈನ್ಯದವರು ಸಹ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಹೊಡೆದೇ ಹೊಡೆಯುತ್ತಾರೆ. ಹೊಡೆಯಲಿ ಅಂತ ನಾನೂ ಕಾಯುತ್ತಿದ್ದೇನೆ. ಯಾರೂ ಹೆದರುವ ಅವಶ್ಯಕತೆ ಇಲ್ಲ. ಕೇಂದ್ರದಲ್ಲಿ ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

8 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

9 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

10 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago