ಮನರಂಜನೆ

ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು ಎಂದ ‘ಜೋಗಿ’ ಪ್ರೇಮ್‍

ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್‌, ಯಶ್‍, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಈಗ ನಟ-ನಿರ್ದೇಶಕ ‘ಜೋಗಿ’ ಪ್ರೇಮ್‍, ಈ ದಾಳಿಯನ್ನು ಖಂಡಿಸುವುದರ ಜೊತೆಗೆ, ಉಗ್ರರನ್ನು ಕತ್ತರಿಸಿ ಪೀಸ್‍ ಪೀಸ್‍ ಮಾಡಿ ಎಸೆಯಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ನಮ್ಮ ಮೇಲೆ ಯುದ್ಧ ಸಾರಲು ಬಂದವರ ವಿರುದ್ಧ ಯುದ್ಧ ಮಾಡಲೇಬೇಕು ಎಂದು ಹೇಳಿದ್ದಾರೆ.

ಸೋಮವಾರ ಸಂಜೆ, ‘ನಾನು ಮತ್ತು ಗುಂಡ 2’ ಚಿತ್ರದ ಹಾಡು ಬಿಡುಗಡೆ ಮಾಡುವುದಕ್ಕೆ ಬಂದಿದ್ದ ಪ್ರೇಮ್‍, ಈ ಸಂದರ್ಭದಲ್ಲಿ ಪೆಹಲ್ಗಾಮ್‍ ದಾಳಿಯ ಕುರಿತು ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಉಗ್ರರಿಗೆ ಯಾವುದೇ ಸೆಂಟಿಮೆಂಟ್‍ ತೋರಿಸಬಾರದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಸೆಂಟಿಮೆಂಟ್‍ ಇರಲೇ ಬಾರದು. ಹೊಡಿ ಕಡಿ ಅಂತ ಇರಬೇಕು. ಅಷ್ಟು ಅಮಾಯಕ ಜೀವಗಳನ್ನು ತೆಗೆದಿದ್ದಾರೆ ಎಂದರೆ ಸೆಂಟಿಮೆಂಟ್‍ ನೋಡಲೇಬಾರದು. ಅವನ್ಯಾವನೋ ಹೋಗಿ ಮೋದಿಗೆ ಹೇಳು ಅಂತಾನೆ ಅಂದರೆ, ಅವರನ್ನೆಲ್ಲಾ ಕತ್ತರಿಸಿ ಪೀಸ್‍ ಪೀಸ್ ಮಾಡಿ ಎಸೆಯಬೇಕು. ಅಷ್ಟು ಕ್ರೂರತನ ಅದು. ಅವರು ಹೇಡಿಗಳು. ಅವರಿಗೆ ಎಮೋಷನ್ಸ್ ತೋರಿಸುವುದು ತಪ್ಪು. ಯುದ್ಧ ಬೇಡ ಎಂದು ಕೆಲವರು ಹೇಳುತ್ತಾರೆ. ಯುದ್ಧ ಮಾಡಲೇಬೇಕು. ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು. ನಮ್ಮ ಮೇಲೆ ಯುದ್ಧ ಮಾಡುತ್ತಾರೆ, ನಮ್ಮ ಜನರನ್ನು ಸಾಯಿಸುತ್ತಾರೆ ಎಂದರೆ ನಾವು ಯುದ್ಧ ಮಾಡಲೇಬೇಕು. ಅವರು ಮಾಡಿದ್ದು ಹೀನ ಕೃತ್ಯ.

ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ ಎನ್ನುವ ಪ್ರೇಮ್‍, ‘ಪ್ರಧಾನಿ ಮೋದಿ ಇದ್ದಾರೆ. 100 ಪರ್ಸೆಂಟ್‍ ಅವರು ಈ ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಹೊಡೆದೇ ಹೊಡೆಯುತ್ತಾರೆ. ನಮ್ಮ ಮಿಲಿಟ್ರಿಯವರೇನು ಸಾಮಾನ್ಯರಲ್ಲ. ನಮ್ಮ ಸೈನ್ಯದವರು ಸಹ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಹೊಡೆದೇ ಹೊಡೆಯುತ್ತಾರೆ. ಹೊಡೆಯಲಿ ಅಂತ ನಾನೂ ಕಾಯುತ್ತಿದ್ದೇನೆ. ಯಾರೂ ಹೆದರುವ ಅವಶ್ಯಕತೆ ಇಲ್ಲ. ಕೇಂದ್ರದಲ್ಲಿ ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago