ಮನರಂಜನೆ

ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು ಎಂದ ‘ಜೋಗಿ’ ಪ್ರೇಮ್‍

ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್‌, ಯಶ್‍, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಈಗ ನಟ-ನಿರ್ದೇಶಕ ‘ಜೋಗಿ’ ಪ್ರೇಮ್‍, ಈ ದಾಳಿಯನ್ನು ಖಂಡಿಸುವುದರ ಜೊತೆಗೆ, ಉಗ್ರರನ್ನು ಕತ್ತರಿಸಿ ಪೀಸ್‍ ಪೀಸ್‍ ಮಾಡಿ ಎಸೆಯಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ನಮ್ಮ ಮೇಲೆ ಯುದ್ಧ ಸಾರಲು ಬಂದವರ ವಿರುದ್ಧ ಯುದ್ಧ ಮಾಡಲೇಬೇಕು ಎಂದು ಹೇಳಿದ್ದಾರೆ.

ಸೋಮವಾರ ಸಂಜೆ, ‘ನಾನು ಮತ್ತು ಗುಂಡ 2’ ಚಿತ್ರದ ಹಾಡು ಬಿಡುಗಡೆ ಮಾಡುವುದಕ್ಕೆ ಬಂದಿದ್ದ ಪ್ರೇಮ್‍, ಈ ಸಂದರ್ಭದಲ್ಲಿ ಪೆಹಲ್ಗಾಮ್‍ ದಾಳಿಯ ಕುರಿತು ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಉಗ್ರರಿಗೆ ಯಾವುದೇ ಸೆಂಟಿಮೆಂಟ್‍ ತೋರಿಸಬಾರದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಸೆಂಟಿಮೆಂಟ್‍ ಇರಲೇ ಬಾರದು. ಹೊಡಿ ಕಡಿ ಅಂತ ಇರಬೇಕು. ಅಷ್ಟು ಅಮಾಯಕ ಜೀವಗಳನ್ನು ತೆಗೆದಿದ್ದಾರೆ ಎಂದರೆ ಸೆಂಟಿಮೆಂಟ್‍ ನೋಡಲೇಬಾರದು. ಅವನ್ಯಾವನೋ ಹೋಗಿ ಮೋದಿಗೆ ಹೇಳು ಅಂತಾನೆ ಅಂದರೆ, ಅವರನ್ನೆಲ್ಲಾ ಕತ್ತರಿಸಿ ಪೀಸ್‍ ಪೀಸ್ ಮಾಡಿ ಎಸೆಯಬೇಕು. ಅಷ್ಟು ಕ್ರೂರತನ ಅದು. ಅವರು ಹೇಡಿಗಳು. ಅವರಿಗೆ ಎಮೋಷನ್ಸ್ ತೋರಿಸುವುದು ತಪ್ಪು. ಯುದ್ಧ ಬೇಡ ಎಂದು ಕೆಲವರು ಹೇಳುತ್ತಾರೆ. ಯುದ್ಧ ಮಾಡಲೇಬೇಕು. ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು. ನಮ್ಮ ಮೇಲೆ ಯುದ್ಧ ಮಾಡುತ್ತಾರೆ, ನಮ್ಮ ಜನರನ್ನು ಸಾಯಿಸುತ್ತಾರೆ ಎಂದರೆ ನಾವು ಯುದ್ಧ ಮಾಡಲೇಬೇಕು. ಅವರು ಮಾಡಿದ್ದು ಹೀನ ಕೃತ್ಯ.

ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ ಎನ್ನುವ ಪ್ರೇಮ್‍, ‘ಪ್ರಧಾನಿ ಮೋದಿ ಇದ್ದಾರೆ. 100 ಪರ್ಸೆಂಟ್‍ ಅವರು ಈ ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಹೊಡೆದೇ ಹೊಡೆಯುತ್ತಾರೆ. ನಮ್ಮ ಮಿಲಿಟ್ರಿಯವರೇನು ಸಾಮಾನ್ಯರಲ್ಲ. ನಮ್ಮ ಸೈನ್ಯದವರು ಸಹ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಹೊಡೆದೇ ಹೊಡೆಯುತ್ತಾರೆ. ಹೊಡೆಯಲಿ ಅಂತ ನಾನೂ ಕಾಯುತ್ತಿದ್ದೇನೆ. ಯಾರೂ ಹೆದರುವ ಅವಶ್ಯಕತೆ ಇಲ್ಲ. ಕೇಂದ್ರದಲ್ಲಿ ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago