ಮನರಂಜನೆ

ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು ಎಂದ ‘ಜೋಗಿ’ ಪ್ರೇಮ್‍

ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್‌, ಯಶ್‍, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ಈಗ ನಟ-ನಿರ್ದೇಶಕ ‘ಜೋಗಿ’ ಪ್ರೇಮ್‍, ಈ ದಾಳಿಯನ್ನು ಖಂಡಿಸುವುದರ ಜೊತೆಗೆ, ಉಗ್ರರನ್ನು ಕತ್ತರಿಸಿ ಪೀಸ್‍ ಪೀಸ್‍ ಮಾಡಿ ಎಸೆಯಬೇಕು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ನಮ್ಮ ಮೇಲೆ ಯುದ್ಧ ಸಾರಲು ಬಂದವರ ವಿರುದ್ಧ ಯುದ್ಧ ಮಾಡಲೇಬೇಕು ಎಂದು ಹೇಳಿದ್ದಾರೆ.

ಸೋಮವಾರ ಸಂಜೆ, ‘ನಾನು ಮತ್ತು ಗುಂಡ 2’ ಚಿತ್ರದ ಹಾಡು ಬಿಡುಗಡೆ ಮಾಡುವುದಕ್ಕೆ ಬಂದಿದ್ದ ಪ್ರೇಮ್‍, ಈ ಸಂದರ್ಭದಲ್ಲಿ ಪೆಹಲ್ಗಾಮ್‍ ದಾಳಿಯ ಕುರಿತು ಹಲವು ವಿಷಯಗಳನ್ನು ಮಾತನಾಡಿದ್ದಾರೆ. ಉಗ್ರರಿಗೆ ಯಾವುದೇ ಸೆಂಟಿಮೆಂಟ್‍ ತೋರಿಸಬಾರದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ‘ಸೆಂಟಿಮೆಂಟ್‍ ಇರಲೇ ಬಾರದು. ಹೊಡಿ ಕಡಿ ಅಂತ ಇರಬೇಕು. ಅಷ್ಟು ಅಮಾಯಕ ಜೀವಗಳನ್ನು ತೆಗೆದಿದ್ದಾರೆ ಎಂದರೆ ಸೆಂಟಿಮೆಂಟ್‍ ನೋಡಲೇಬಾರದು. ಅವನ್ಯಾವನೋ ಹೋಗಿ ಮೋದಿಗೆ ಹೇಳು ಅಂತಾನೆ ಅಂದರೆ, ಅವರನ್ನೆಲ್ಲಾ ಕತ್ತರಿಸಿ ಪೀಸ್‍ ಪೀಸ್ ಮಾಡಿ ಎಸೆಯಬೇಕು. ಅಷ್ಟು ಕ್ರೂರತನ ಅದು. ಅವರು ಹೇಡಿಗಳು. ಅವರಿಗೆ ಎಮೋಷನ್ಸ್ ತೋರಿಸುವುದು ತಪ್ಪು. ಯುದ್ಧ ಬೇಡ ಎಂದು ಕೆಲವರು ಹೇಳುತ್ತಾರೆ. ಯುದ್ಧ ಮಾಡಲೇಬೇಕು. ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು. ನಮ್ಮ ಮೇಲೆ ಯುದ್ಧ ಮಾಡುತ್ತಾರೆ, ನಮ್ಮ ಜನರನ್ನು ಸಾಯಿಸುತ್ತಾರೆ ಎಂದರೆ ನಾವು ಯುದ್ಧ ಮಾಡಲೇಬೇಕು. ಅವರು ಮಾಡಿದ್ದು ಹೀನ ಕೃತ್ಯ.

ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ ಎನ್ನುವ ಪ್ರೇಮ್‍, ‘ಪ್ರಧಾನಿ ಮೋದಿ ಇದ್ದಾರೆ. 100 ಪರ್ಸೆಂಟ್‍ ಅವರು ಈ ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಹೊಡೆದೇ ಹೊಡೆಯುತ್ತಾರೆ. ನಮ್ಮ ಮಿಲಿಟ್ರಿಯವರೇನು ಸಾಮಾನ್ಯರಲ್ಲ. ನಮ್ಮ ಸೈನ್ಯದವರು ಸಹ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಹೊಡೆದೇ ಹೊಡೆಯುತ್ತಾರೆ. ಹೊಡೆಯಲಿ ಅಂತ ನಾನೂ ಕಾಯುತ್ತಿದ್ದೇನೆ. ಯಾರೂ ಹೆದರುವ ಅವಶ್ಯಕತೆ ಇಲ್ಲ. ಕೇಂದ್ರದಲ್ಲಿ ಮೋದಿ ಇರುವುದರಿಂದ ಯಾರು ಯಾರಿಗೂ ಹೆದರುವ ಹಾಗಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago