ಸಿನಿಮಾ ಪತ್ರಿಕೋದ್ಯಮದಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿರುವ ಹಲವರು ನಟನೆ, ನಿರ್ದೇಶನ, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಪಬ್ಲಿಕ್ ಟಿವಿಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಹರೀಶ್ ಸೀನಪ್ಪ ಸಹ ಸೇರಿದ್ದಾರೆ. ಹರೀಶ್, ಇದೀಗ ‘ಕ್ರೆಡಿಟ್ ಕುಮಾರ’ ಎಂಬ ಸಿನಿಮಾಗೆ ನಾಯಕನಾಗಿ, ಈ ಚಿತ್ರ ಬುಧವಾರ ಪ್ರಾರಂಭವಾಗಿದೆ.
ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ನಿರ್ದೇಶಕ ಎಸ್. ಮಹೇಂದರ್, ನಿರ್ಮಾಪಕ ಉದಯ್ ಮೆಹ್ತಾ, ‘ಬಾಂಡ್ ರವಿ’ ಖ್ಯಾತಿಯ ಪ್ರಮೋದ್ ಮುಂತಾದವರು ಹಾಜರಿದ್ದು, ಚಿತ್ರತಂಡಕ್ಕೆ ಶುಭ ಕೋರಿದರು.
ಈ ಹಿಂದೆ ‘ಬಾಂಡ್ ರವಿ’ ಚಿತ್ರವನ್ನು ನಿರ್ದೇಶಿಸಿದ್ದ ಪ್ರಜ್ವಲ್, ಈಗ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಪ್ರಜ್ವಲ್ ಈ ಹಿಂದೆ ಎಸ್. ಮಹೇಂದರ್ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರಂತೆ. ಚಿತ್ರದ ಕುರಿತು ಮಾತನಾಡುವ ಪ್ರಜ್ವಲ್, ‘’ಬಾಂಡ್ ರವಿ’ ಚಿತ್ರಕ್ಕೆ ಸಿಕ್ಕ ಉತ್ತೇಜನದಿಂದ ಈ ಚಿತ್ರ ಮಾಡುತ್ತಿದ್ದೇನೆ. ಸಾಲ ಮಾಡಿಕೊಂಡು ಬದುಕುವ ಒಬ್ಬ ಯುವಕನ ಕಥೆ ಇದು. ಹರೀಶ್ ಅವರಿಗಂತನೇ ಈ ಕಥೆ ಮಾಡಿದ್ದು. ಕಥೆ ಬಹಳ ಚೆನ್ನಾಗಿ ಮೂಡಿಬಂದಿದೆ’ ಎಂದರು.
ನಾಯಕ ಹರೀಶ್ ಮಾತನಾಡಿ, ‘ನಟನಾಗಿ ಇದು ನನ್ನ ಮೊದಲ ಹೆಜ್ಜೆ. 2009ರಲ್ಲಿ ಮೊದಲು ಕೇಬಲ್ ಚಾನಲ್ ನಲ್ಲಿ ಕೆಲಸ ಮಾಡುವಾಗ ಬಣ್ಣ ಹಚ್ಚಿದ್ದೆ. ಅಂದು ಒಬ್ಬ ನಟನಾಗಬೇಕು ಅಂತ ಅಂದುಕೊಂಡಿದ್ದೆ. ಈಗ ಆ ಕನಸು ನನಸಾಗಿದೆ. ಈ ಅನುಭವ ನನಗೆ ಬೇಕಿತ್ತು, ಈ ಅನುಭವ ಇಲ್ಲ ಅಂದಿದ್ದರೆ ನನ್ನ ಜೀವನ ಅಪೂರ್ಣ ಆಗುತ್ತಿತ್ತು’ ಎಂದರು.
ಹರೀಶ್ಗೆ ನಾಯಕಿಯಾಗಿ ಪಾಯಲ್ ಚೆಂಗಪ್ಪ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಕಿರುಚಿತ್ರಗಳಲ್ಲಿ ನಟಿಸಿದ್ದ ಪಾಯಲ್, ಇದೇ ಮೊದಲ ಬಾರಿಗೆ ಚಲನಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ‘ಈ ಚಿತ್ರದಲ್ಲಿ ಭೂಮಿ ಎನ್ನುವ ಪಾತ್ರದಲ್ಲಿ ಮಾಡುತ್ತಿದ್ದೇನೆ. ಮಿಡ್ಲ್ ಕ್ಲಾಸ್ ಹುಡುಗಿಯಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರದಲ್ಲಿ ನನ್ನದು ಬ್ಯೂಟಿಶಿಯನ್ ನಟಿಸುತ್ತಿದ್ದೇನೆ’ ಎಂದರು.
‘ಕ್ರೆಡಿಟ್ ಕುಮಾರ’ ಚಿತ್ರಕ್ಕೆ ಧರ್ಮ ವಿಶ್ ಸಂಗೀತ ಸಂಯೋಜಿಸತ್ತಿದ್ದಾರೆ. ಈ ಚಿತ್ರದಲ್ಲಿ ಮೂರು ಹಾಡುಗಳಿದ್ದು, ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರುವಂತೆ ಹಾಗೂ ‘ಭರ್ಜರಿ’ ಚೇತನ್ ಸಾಹಿತ್ಯ ಬರೆಯುತ್ತಿದ್ದಾರೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…