ಉಡುಪಿ: ಶ್ರಾವಣ ಶನಿವಾರದ ಪ್ರಯುಕ್ತ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್ಟಿಆರ್ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದರು.
ತಾಯಿ ಶಾಲಿನಿ ನಂದಾಮೂರಿ ಅವರೊಂದಿಗೆ ಉಡುಪಿಗೆ ಭೇಟಿ ನೀಡಿದ್ದ ಜ್ಯೂನಿಯರ್ ಎನ್ಟಿಆರ್ ಅವರು, ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ,, ಕೋಟಿಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕರಿಸಿದರು.
ಶಾಲಿನಿ ನಂದಮೂರಿ ಅವರು ಸುಮಾರು 40 ವರ್ಷಗಳ ಹಿಂದೆ ಪುತ್ರನನ್ನು ಉಡುಪಿ ಶ್ರೀಕೃಷ್ಣ ದೇವರ ದರ್ಶನಕ್ಕೆ ಕರೆದುಕೊಂಡು ಬರಬೇಕು ಎಂಬ ಕನಸು ಕಂಡಿದ್ದರು. ಈ ಬಗ್ಗೆ ಅವರೇ ಹೇಳಿಕೆ ನೀಡಿದ್ದರು. ಇದೀಗ ಈ ಕನಸು ನೆರವೇರಿದೆ ಎಂದು ಮಠದ ಪ್ರಸನ್ನ ಆಚಾರ್ಯ ತಿಳಿಸಿದ್ದಾರೆ.
ನನ್ನ ತಾಯಿ ಮೂತಹಃ ಕುಂದಾಪುರದವರಾಗಿದ್ದು, ನನ್ನ ತಾಯಿ ಕನ್ನಡತಿ ಎಂದು ಹಲವು ಬಾರಿ ಜ್ಯೂನಿಯರ್ ಎನ್ಟಿಆರ್ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಹುಟ್ಟೂರಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದು ತಾಯಿಯ ಆಸೆ ಈಡೇರಿಸಿದ್ದಾರೆ.
ಜ್ಯೂನಿಯರ್ ಎನ್ಟಿಆರ್ಗೆ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಸೇರಿದಂತೆ ಹಲವರು ಸಾಥ್ ನೀಡಿದರು.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…