ಮನರಂಜನೆ

ಘೋಷಣೆಯಾಯ್ತು #NTRNeel ಚಿತ್ರದ ಬಿಡುಗಡೆ ದಿನಾಂಕ

ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್‍.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್‍ ನೀಲ್‍ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್‍ ಎನ್‍.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ ಹೊರಬಿದ್ದಿದೆ. ಅದೇನೆಂದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡದವರು ಬಹಿರಂಗಗೊಳಿಸಿದ್ದಾರೆ. ಚ

ಇನ್ನೂ ಹೆಸರು ಘೋಷಣೆಯಾಗದ ಈ ಹೊಸ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ನಿರ್ಮಿಸುತ್ತಿದ್ದಾರೆ.

ಈ ಚಿತ್ರವು ತೆಲುಗಿನಲ್ಲಿ ನಿರ್ಮಾಣವಾಗುತ್ತಿದ್ದು, ಕನ್ನಡ, ತಮಿಳು, ಹಿಂದಿ, ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್‍ ಆಗಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ಈ ಹಿಂದೆ ಪ್ರಶಾಂತ್‍ ನೀಲ್‍ ಜೊತೆಗೆ ಕೆಲಸ ಮಾಡಿದ್ದ ಛಾಯಾಗ್ರಾಹಕ ಭುವನ್‍ ಗೌಡ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ವಿಶೇಷವೆಂದರೆ, ಕನ್ನಡದ ರುಕ್ಮಿಣಿ ವಸಂತ್‍ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರತಂಡದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈಗಾಗಲೇ ಜ್ಯೂನಿಯರ್‍ ಎನ್‌.ಟಿ.ಆರ್‌ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸದ್ಯಕ್ಕೆ ಚಿತ್ರದ ಹೆಸರನ್ನು ಚಿತ್ರತಂಡದವರು ಇನ್ನೂ ಅಧಿಕೃತವಾಗೊ ಘೋಷಿಸಲಾಗಿಲ್ಲ. ಆದರೆ, ಮೂಲಗಳ ಪ್ರಕಾರ, ಚಿತ್ರಕ್ಕೆ ‘ಡ್ರ್ಯಾಗನ್‍’ ಎಂಬ ಹೆಸರನ್ನು ಇಡುವ ಸಾಧ್ಯತೆ ಇದೆಯಂತೆ.

ಜ್ಯೂನಿಯರ್ ಎನ್‍.ಟಿ.ಆರ್ ತಮ್ಮ ಹುಟ್ಟುಹಬ್ಬವನ್ನು ಇದೇ ಮೇ 20ರಂದು ಆಚರಿಸಿಕೊಳ್ಳುತ್ತಿದ್ದು, ಅಂದು ಚಿತ್ರದ ಮೊದಲ ನೋಟ ಅಥವಾ ಟೀಸರ್‍ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

2 mins ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

7 mins ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

12 mins ago

ನಗರಪಾಲಿಕೆ ಆರ್ಥಿಕ ಬರ ನೀಗಿಸಿದ ತೆರಿಗೆ ಸಂಗ್ರಹ

ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…

18 mins ago

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

11 hours ago