ಮನರಂಜನೆ

ಘೋಷಣೆಯಾಯ್ತು #NTRNeel ಚಿತ್ರದ ಬಿಡುಗಡೆ ದಿನಾಂಕ

ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್‍.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್‍ ನೀಲ್‍ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್‍ ಎನ್‍.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ ಹೊರಬಿದ್ದಿದೆ. ಅದೇನೆಂದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡದವರು ಬಹಿರಂಗಗೊಳಿಸಿದ್ದಾರೆ. ಚ

ಇನ್ನೂ ಹೆಸರು ಘೋಷಣೆಯಾಗದ ಈ ಹೊಸ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ನಿರ್ಮಿಸುತ್ತಿದ್ದಾರೆ.

ಈ ಚಿತ್ರವು ತೆಲುಗಿನಲ್ಲಿ ನಿರ್ಮಾಣವಾಗುತ್ತಿದ್ದು, ಕನ್ನಡ, ತಮಿಳು, ಹಿಂದಿ, ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್‍ ಆಗಿ ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ಈ ಹಿಂದೆ ಪ್ರಶಾಂತ್‍ ನೀಲ್‍ ಜೊತೆಗೆ ಕೆಲಸ ಮಾಡಿದ್ದ ಛಾಯಾಗ್ರಾಹಕ ಭುವನ್‍ ಗೌಡ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ವಿಶೇಷವೆಂದರೆ, ಕನ್ನಡದ ರುಕ್ಮಿಣಿ ವಸಂತ್‍ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರತಂಡದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈಗಾಗಲೇ ಜ್ಯೂನಿಯರ್‍ ಎನ್‌.ಟಿ.ಆರ್‌ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸದ್ಯಕ್ಕೆ ಚಿತ್ರದ ಹೆಸರನ್ನು ಚಿತ್ರತಂಡದವರು ಇನ್ನೂ ಅಧಿಕೃತವಾಗೊ ಘೋಷಿಸಲಾಗಿಲ್ಲ. ಆದರೆ, ಮೂಲಗಳ ಪ್ರಕಾರ, ಚಿತ್ರಕ್ಕೆ ‘ಡ್ರ್ಯಾಗನ್‍’ ಎಂಬ ಹೆಸರನ್ನು ಇಡುವ ಸಾಧ್ಯತೆ ಇದೆಯಂತೆ.

ಜ್ಯೂನಿಯರ್ ಎನ್‍.ಟಿ.ಆರ್ ತಮ್ಮ ಹುಟ್ಟುಹಬ್ಬವನ್ನು ಇದೇ ಮೇ 20ರಂದು ಆಚರಿಸಿಕೊಳ್ಳುತ್ತಿದ್ದು, ಅಂದು ಚಿತ್ರದ ಮೊದಲ ನೋಟ ಅಥವಾ ಟೀಸರ್‍ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಆಂದೋಲನ ಡೆಸ್ಕ್

Recent Posts

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

14 mins ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

33 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

2 hours ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

2 hours ago