junior ntr new movie
ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್ ನೀಲ್ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್ ಎನ್.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ.
ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ ಹೊರಬಿದ್ದಿದೆ. ಅದೇನೆಂದರೆ, ಚಿತ್ರದ ಬಿಡುಗಡೆ ಯಾವಾಗ ಎಂಬ ವಿಷಯವನ್ನು ಚಿತ್ರತಂಡದವರು ಬಹಿರಂಗಗೊಳಿಸಿದ್ದಾರೆ. ಚ
ಇನ್ನೂ ಹೆಸರು ಘೋಷಣೆಯಾಗದ ಈ ಹೊಸ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಮತ್ತು NTR ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ನಿರ್ಮಿಸುತ್ತಿದ್ದಾರೆ.
ಈ ಚಿತ್ರವು ತೆಲುಗಿನಲ್ಲಿ ನಿರ್ಮಾಣವಾಗುತ್ತಿದ್ದು, ಕನ್ನಡ, ತಮಿಳು, ಹಿಂದಿ, ಮತ್ತು ಮಲಯಾಳಂ ಭಾಷೆಗಳಲ್ಲಿ ಡಬ್ ಆಗಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ವಿಶೇಷವೆಂದರೆ, ಈ ಹಿಂದೆ ಪ್ರಶಾಂತ್ ನೀಲ್ ಜೊತೆಗೆ ಕೆಲಸ ಮಾಡಿದ್ದ ಛಾಯಾಗ್ರಾಹಕ ಭುವನ್ ಗೌಡ ಮತ್ತು ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ. ವಿಶೇಷವೆಂದರೆ, ಕನ್ನಡದ ರುಕ್ಮಿಣಿ ವಸಂತ್ ಈ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಚಿತ್ರತಂಡದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಈಗಾಗಲೇ ಜ್ಯೂನಿಯರ್ ಎನ್.ಟಿ.ಆರ್ ಅಭಿಮಾನಿಗಳ ವಲಯದಲ್ಲಿ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ಸದ್ಯಕ್ಕೆ ಚಿತ್ರದ ಹೆಸರನ್ನು ಚಿತ್ರತಂಡದವರು ಇನ್ನೂ ಅಧಿಕೃತವಾಗೊ ಘೋಷಿಸಲಾಗಿಲ್ಲ. ಆದರೆ, ಮೂಲಗಳ ಪ್ರಕಾರ, ಚಿತ್ರಕ್ಕೆ ‘ಡ್ರ್ಯಾಗನ್’ ಎಂಬ ಹೆಸರನ್ನು ಇಡುವ ಸಾಧ್ಯತೆ ಇದೆಯಂತೆ.
ಜ್ಯೂನಿಯರ್ ಎನ್.ಟಿ.ಆರ್ ತಮ್ಮ ಹುಟ್ಟುಹಬ್ಬವನ್ನು ಇದೇ ಮೇ 20ರಂದು ಆಚರಿಸಿಕೊಳ್ಳುತ್ತಿದ್ದು, ಅಂದು ಚಿತ್ರದ ಮೊದಲ ನೋಟ ಅಥವಾ ಟೀಸರ್ ಬಿಡುಗಡೆ ಆಗುವ ನಿರೀಕ್ಷೆ ಇದೆ.
ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…
ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…
ಎಚ್.ಡಿ.ಕೋಟೆ: ಕೇರಳ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ…
ನವದೆಹಲಿ: ಇಂದಿನಿಂದ ಆರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಇಂಡೋನೇಷ್ಯಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದಾರೆ. ಈ…
ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…
ಎಚ್.ಎಸ್.ದಿನೇಶ್ ಕುಮಾರ್ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…