ಉಡುಪಿ: ಟಾಲಿವುಡ್ ಸ್ಟಾರ್ ಜೂನಿಯರ್ ಎನ್ಟಿಆರ್ ಅವರು ಕುಂದಾಪುರದ ಕೆರಾಡಿ ಗ್ರಾಮದಲ್ಲಿರುವ ಮೂಡುಕಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿ, ಅಮ್ಮನ ಆಸೆ ತೀರಿಸಿದ್ದಾರೆ.
ಕರಾವಳಿಯ ಸಸ್ಯಕಾಶಿ, ಬೆಟ್ಟ-ಗುಡ್ಡಗಳು ಸೇರಿದಂತೆ ನದಿ-ತೊರೆಗಳಿಗೆ ನೋಡಿ ಮನಸೋತಿರುವ ಜೂನಿಯರ್ ಎನ್ಟಿಆರ್ ಅವರು, ಎರಡು ದಿನಗಳ ಕಾಲ ಉಡುಪಿಯ ದೇವಸ್ಥಾನಗಳೀಗೆ ಭೇಟಿಕೊಟ್ಟು ಗೆಳೆಯರ ಜೊತೆ ಸುತ್ತಾಡುತ್ತಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಜೂನಿಯರ್ ಎನ್ಟಿಆರ್ ಅವರು, ಕೃಷ್ಣಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಅಮ್ಮನ ಆಸೆ ಈಡೇರಿಸಲು ಕುಂದಾಪುರದ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕೆರಾಡಿ, ನಟ ರಿಷಬ್ ಶೆಟ್ಟಿ ಊರಾಗಿದ್ದು, ಅಲ್ಲಿಗೆ ಜೂನಿಯರ್ ಎನ್ಟಿಆರ್ ಭೇಟಿ ನೀಡಿದ್ದು ವಿಶೇಷವೆನಿಸಿತ್ತು. ಈ ವೇಳೆ ನಟ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಸೇರಿದಂತೆ ಹಲವರು ಕೂಡ ದೇಗುಲಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸುಳ್ಳು. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ…