manju vishnuvardhan
ಬೆಂಗಳೂರು : ವಿಷ್ಣುವರ್ಧನ್ ಅವರ ಸ್ಮಾರಕ ಮತ್ತು ಪುಣ್ಯಭೂಮಿಯ ಕುರಿತು ದಿನಕ್ಕೊಂದು ಬೆಳವಣಿಗೆಗಳಾಗುತ್ತಿವೆ.
ಸೋಮವಾರವಷ್ಟೇ, ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮಾತನಾಡಿ, ಕೆಂಗೇರಿ ಬಳಿಯಲ್ಲೇ ವಿಷ್ಣುವರ್ಧನ್ ಅವರ ಸ್ಮಾರಕ ಕಟ್ಟಲಾಗುವುದು ಮತ್ತು ಸೆ.18ರಂದು ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದ್ದರು. ಅದರ ಜೊತೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಪುಣ್ಯಭೂಮಿಯನ್ನು ವಾಪಸ್ಸು ಪಡೆಯುವುದಕ್ಕೆ ಕಾನೂನು ರೀತಿ ಹೋರಾಟ ಮಾಡುವುದಾಗಿ ತಿಳಿಸಿದ್ದರು. ಈಗ ಹಿರಿಯ ನಿರ್ಮಾಪಕ ಕೆ. ಮಂಜು ಸಹ ಆ ಜಾಗಕ್ಕಾಗಿ ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.
ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರವ ಕೆ.ಮಂಜು, ‘ಸಮಾಧಿ ಜಾಗ ನಮಗೆ ಬೇಕೇ ಬೇಕು. ಕಾನೂನು ರೀತಿಯಲ್ಲಿ ಆ ಜಾಗಕ್ಕೆ ಹೋರಾಟ ಮಾಡುತ್ತೇವೆ. ಸರಕಾರದ ಗಮನಕ್ಕೆ ತಂದು ನಾವು ಹೋರಾಟ ಮಾಡುತ್ತೇವೆ. ಬಾಲಣ್ಣ ಅವರ ಮೊಮ್ಮಗ ಕಾರ್ತಿಕ್ ಅವರನ್ನ ಭೇಟಿ ಆಗಿ ಮಾತಾಡಿದ್ದೇನೆ. ನಮಗೆ ಆ 10 ಗುಂಟೆ ಜಾಗ ಬೇಕೇಬೇಕು ಅಂತ ಮನವಿ ಮಾಡಿದ್ದೇನೆ. ಅಂತ್ಯಕ್ರಿಯೆ ಆದ ಜಾಗ ನಮಗೆ ಪವಿತ್ರವಾದ ಜಾಗ ಅಂತ ಕೇಳಿಕೊಂಡಿದ್ದೇನೆ. ಅಭಿಮಾನ್ ಸ್ಟುಡಿಯೋ ಸರಕಾರದ ಜಾಗ. ನಮಗೆ 10 ಗುಂಟೆ ಜಾಗ ಬೇಕು’ ಎಂದರು. ವಿಷ್ಣುವರ್ಧನ್ ಮನೆಯ ಅನ್ನ ತಿಂದಿದ್ದೇನೆ ಎಂದಿರುವ ಅವರು, ‘ಅಭಿಮಾನಿಗಳ ಅಭಿಮಾನ ನೋಡಿ ವಿಷ್ಣುವರ್ಧನ್ ಕಣ್ಣೀರು ಹಾಕುತ್ತಿದ್ದರು. ನಾನು ಇದುವರೆಗೂ ಮೈಸೂರಿಗೆ ಹೋಗಿಲ್ಲ. ಪ್ರತೀ ವರ್ಷ ಹೋಗೋದೇ ಅಭಿಮಾನ್ ಸ್ಟುಡಿಯೋಗೆ. ಹಾಗಾಗಿ, ನಮಗೆ ಅಲ್ಲೇ ಜಾಗ ಬೇಕು ಮತ್ತು ಅದಕ್ಕೆ ಏನೆಲ್ಲಾ ಹೋರಾಟ ಮಾಡಬೇಕೋ, ಕಾನೂನು ರೀತಿಯಲ್ಲಿ ಖಂಡಿತಾ ಹೋರಾಡುತ್ತೇವೆ’ ಎಂದು ಹೇಳಿದರು.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…