ಮನರಂಜನೆ

ಅಭಿಮಾನ್‍ ಸ್ಟುಡಿಯೋದಲ್ಲಿ 10 ಗುಂಟೆ ಜಾಗ ಬೇಕು ಎಂದ ಕೆ. ಮಂಜು

ಬೆಂಗಳೂರು : ವಿಷ್ಣುವರ್ಧನ್‍ ಅವರ ಸ್ಮಾರಕ ಮತ್ತು ಪುಣ್ಯಭೂಮಿಯ ಕುರಿತು ದಿನಕ್ಕೊಂದು ಬೆಳವಣಿಗೆಗಳಾಗುತ್ತಿವೆ.

ಸೋಮವಾರವಷ್ಟೇ, ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍ ಮಾತನಾಡಿ, ಕೆಂಗೇರಿ ಬಳಿಯಲ್ಲೇ ವಿಷ್ಣುವರ್ಧನ್‍ ಅವರ ಸ್ಮಾರಕ ಕಟ್ಟಲಾಗುವುದು ಮತ್ತು ಸೆ.18ರಂದು ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದ್ದರು. ಅದರ ಜೊತೆಗೆ ಅಭಿಮಾನ್‍ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‍ ಅವರ ಪುಣ್ಯಭೂಮಿಯನ್ನು ವಾಪಸ್ಸು ಪಡೆಯುವುದಕ್ಕೆ ಕಾನೂನು ರೀತಿ ಹೋರಾಟ ಮಾಡುವುದಾಗಿ ತಿಳಿಸಿದ್ದರು. ಈಗ ಹಿರಿಯ ನಿರ್ಮಾಪಕ ಕೆ. ಮಂಜು ಸಹ ಆ ಜಾಗಕ್ಕಾಗಿ ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರವ ಕೆ.ಮಂಜು, ‘ಸಮಾಧಿ ಜಾಗ ನಮಗೆ ಬೇಕೇ ಬೇಕು. ಕಾನೂನು ರೀತಿಯಲ್ಲಿ ಆ ಜಾಗಕ್ಕೆ ಹೋರಾಟ ಮಾಡುತ್ತೇವೆ. ಸರಕಾರದ ಗಮನಕ್ಕೆ ತಂದು ನಾವು ಹೋರಾಟ ಮಾಡುತ್ತೇವೆ. ಬಾಲಣ್ಣ ಅವರ ಮೊಮ್ಮಗ ಕಾರ್ತಿಕ್ ಅವರನ್ನ ಭೇಟಿ ಆಗಿ ಮಾತಾಡಿದ್ದೇನೆ. ನಮಗೆ ಆ 10 ಗುಂಟೆ ಜಾಗ ಬೇಕೇಬೇಕು ಅಂತ ಮನವಿ ಮಾಡಿದ್ದೇನೆ. ಅಂತ್ಯಕ್ರಿಯೆ ಆದ ಜಾಗ ನಮಗೆ ಪವಿತ್ರವಾದ ಜಾಗ ಅಂತ ಕೇಳಿಕೊಂಡಿದ್ದೇನೆ. ಅಭಿಮಾನ್ ಸ್ಟುಡಿಯೋ ಸರಕಾರದ ಜಾಗ. ನಮಗೆ 10 ಗುಂಟೆ ಜಾಗ ಬೇಕು’ ಎಂದರು. ವಿಷ್ಣುವರ್ಧನ್‍ ಮನೆಯ ಅನ್ನ ತಿಂದಿದ್ದೇನೆ ಎಂದಿರುವ ಅವರು, ‘ಅಭಿಮಾನಿಗಳ ಅಭಿಮಾನ ನೋಡಿ ವಿಷ್ಣುವರ್ಧನ್‍ ಕಣ್ಣೀರು ಹಾಕುತ್ತಿದ್ದರು. ನಾನು ಇದುವರೆಗೂ ಮೈಸೂರಿಗೆ ಹೋಗಿಲ್ಲ. ಪ್ರತೀ ವರ್ಷ ಹೋಗೋದೇ ಅಭಿಮಾನ್‍ ಸ್ಟುಡಿಯೋಗೆ. ಹಾಗಾಗಿ, ನಮಗೆ ಅಲ್ಲೇ ಜಾಗ ಬೇಕು ಮತ್ತು ಅದಕ್ಕೆ ಏನೆಲ್ಲಾ ಹೋರಾಟ ಮಾಡಬೇಕೋ, ಕಾನೂನು ರೀತಿಯಲ್ಲಿ ಖಂಡಿತಾ ಹೋರಾಡುತ್ತೇವೆ’ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

2 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

4 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

5 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

5 hours ago