ಮನರಂಜನೆ

ಅಭಿಮಾನ್‍ ಸ್ಟುಡಿಯೋದಲ್ಲಿ 10 ಗುಂಟೆ ಜಾಗ ಬೇಕು ಎಂದ ಕೆ. ಮಂಜು

ಬೆಂಗಳೂರು : ವಿಷ್ಣುವರ್ಧನ್‍ ಅವರ ಸ್ಮಾರಕ ಮತ್ತು ಪುಣ್ಯಭೂಮಿಯ ಕುರಿತು ದಿನಕ್ಕೊಂದು ಬೆಳವಣಿಗೆಗಳಾಗುತ್ತಿವೆ.

ಸೋಮವಾರವಷ್ಟೇ, ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್‍ ಮಾತನಾಡಿ, ಕೆಂಗೇರಿ ಬಳಿಯಲ್ಲೇ ವಿಷ್ಣುವರ್ಧನ್‍ ಅವರ ಸ್ಮಾರಕ ಕಟ್ಟಲಾಗುವುದು ಮತ್ತು ಸೆ.18ರಂದು ಅಡಿಗಲ್ಲು ಹಾಕಲಾಗುವುದು ಎಂದು ಹೇಳಿದ್ದರು. ಅದರ ಜೊತೆಗೆ ಅಭಿಮಾನ್‍ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‍ ಅವರ ಪುಣ್ಯಭೂಮಿಯನ್ನು ವಾಪಸ್ಸು ಪಡೆಯುವುದಕ್ಕೆ ಕಾನೂನು ರೀತಿ ಹೋರಾಟ ಮಾಡುವುದಾಗಿ ತಿಳಿಸಿದ್ದರು. ಈಗ ಹಿರಿಯ ನಿರ್ಮಾಪಕ ಕೆ. ಮಂಜು ಸಹ ಆ ಜಾಗಕ್ಕಾಗಿ ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರವ ಕೆ.ಮಂಜು, ‘ಸಮಾಧಿ ಜಾಗ ನಮಗೆ ಬೇಕೇ ಬೇಕು. ಕಾನೂನು ರೀತಿಯಲ್ಲಿ ಆ ಜಾಗಕ್ಕೆ ಹೋರಾಟ ಮಾಡುತ್ತೇವೆ. ಸರಕಾರದ ಗಮನಕ್ಕೆ ತಂದು ನಾವು ಹೋರಾಟ ಮಾಡುತ್ತೇವೆ. ಬಾಲಣ್ಣ ಅವರ ಮೊಮ್ಮಗ ಕಾರ್ತಿಕ್ ಅವರನ್ನ ಭೇಟಿ ಆಗಿ ಮಾತಾಡಿದ್ದೇನೆ. ನಮಗೆ ಆ 10 ಗುಂಟೆ ಜಾಗ ಬೇಕೇಬೇಕು ಅಂತ ಮನವಿ ಮಾಡಿದ್ದೇನೆ. ಅಂತ್ಯಕ್ರಿಯೆ ಆದ ಜಾಗ ನಮಗೆ ಪವಿತ್ರವಾದ ಜಾಗ ಅಂತ ಕೇಳಿಕೊಂಡಿದ್ದೇನೆ. ಅಭಿಮಾನ್ ಸ್ಟುಡಿಯೋ ಸರಕಾರದ ಜಾಗ. ನಮಗೆ 10 ಗುಂಟೆ ಜಾಗ ಬೇಕು’ ಎಂದರು. ವಿಷ್ಣುವರ್ಧನ್‍ ಮನೆಯ ಅನ್ನ ತಿಂದಿದ್ದೇನೆ ಎಂದಿರುವ ಅವರು, ‘ಅಭಿಮಾನಿಗಳ ಅಭಿಮಾನ ನೋಡಿ ವಿಷ್ಣುವರ್ಧನ್‍ ಕಣ್ಣೀರು ಹಾಕುತ್ತಿದ್ದರು. ನಾನು ಇದುವರೆಗೂ ಮೈಸೂರಿಗೆ ಹೋಗಿಲ್ಲ. ಪ್ರತೀ ವರ್ಷ ಹೋಗೋದೇ ಅಭಿಮಾನ್‍ ಸ್ಟುಡಿಯೋಗೆ. ಹಾಗಾಗಿ, ನಮಗೆ ಅಲ್ಲೇ ಜಾಗ ಬೇಕು ಮತ್ತು ಅದಕ್ಕೆ ಏನೆಲ್ಲಾ ಹೋರಾಟ ಮಾಡಬೇಕೋ, ಕಾನೂನು ರೀತಿಯಲ್ಲಿ ಖಂಡಿತಾ ಹೋರಾಡುತ್ತೇವೆ’ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

11 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

13 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

16 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

20 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

24 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

24 hours ago