ಮನರಂಜನೆ

ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ

ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ ಚಿತ್ರ ಸೇರಿದೆ. ಈ ಚಿತ್ರವು ಸೆ. 12ಕ್ಕೆ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಈ ರಾಮಾಯಣ ಏನು ಎಂದು ಹೇಳುವುದಕ್ಕೆ ಚಿತ್ರತಂಡ ಒಂದು ಟ್ರೇಲರ್‍ ಬಿಡುಗಡೆ ಮಾಡಿದೆ.

‘ಮಿಡಲ್‍ ಕ್ಲಾಸ್ ರಾಮಾಯಣ’ ಚಿತ್ರವನ್ನು ಅಂಜನಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಜಯರಾಮ್ ಗಂಗಪ್ಪನಹಳ್ಳಿ ನಿರ್ಮಿಸಿದ್ದು, ಧನುಶ್‍ ಗೌಡ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿನು ಗೌಡ, ’ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ಯುಕ್ತಾ ರಣಧೀರ್‍ ಪೆರ್ವಿ, ಜಗ್ಗಪ್ಪ, ವೀಣಾ ಸುಂದರ್‍, ವಿಜಯ್‍ ಚೆಂಡೂರ್‍, ಎಸ್‍.ನಾರಾಯಣ್‍, ಬಲರಾಜ್‍ ವಾಡಿ ಮುಂತಾದವರು ನಟಿಸಿದ್ದಾರೆ.

ಇದನ್ನು ಓದಿ:ಚಾಮುಂಡಿಬೆಟ್ಟದಲ್ಲಿ ಶಿವಣ್ಣ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಚಾಲನೆ

ಈ ಹಿಂದೆ ‘ರೆಬಲ್ ಹುಡುಗರು’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಧನುಶ್ ಗೌಡ ಈ ಚಿತ್ರ ಮಾಡಿದ್ದಾರೆ. ‘ಒಬ್ಬ ಮಿಡಲ್‍ ಕ್ಲಾಸ್ ಹುಡುಗನ ಕಥೆಯೇ ‘ಮಿಡಲ್ ಕ್ಲಾಸ್ ರಾಮಾಯಣ’. ಎಲ್ಲರ ಜೀವನದಲ್ಲೂ ಒಂದೊಂದು ಕಥೆ ಇರುತ್ತದೆ. ಅದನ್ನು ಹೇಳುವ ಪ್ರಯತ್ನ ಮಾಡಿದ್ದೇವೆ. ಈ ಚಿತ್ರ ಕೋವಿಡ್‍ಗೂ ಮೊದಲೇ ಶುರು ಮಾಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ವಲ್ಪ ತಡವಾಗಿ, ಇದೀಗ ಬಿಡುಗಡೆಯಾಗುತ್ತಿದೆ’ ಎಂದರು.

ಮೋಕ್ಷಿತಾ ಪೈಗೆ ಇದು ಮೊದಲನೆಯ ಚಿತ್ರ. ಅವರಿಗೆ ಹೊಟ್ಟೆಯಲ್ಲಿ ಚಿಟ್ಟೆ ಬಿಟ್ಟ ಫೀಲ್ ಆಗ್ತಾ ಇತ್ತಂತೆ. ‘ನಾವೆಲ್ಲರೂ ತೆರೆಯ ಮೇಲೆ ಕಾಣಿಸುತ್ತೇವೆ. ಆದರೆ, ತೆರೆಯ ಹಿಂದೆ ಒಂದಷ್ಟು ಜನರು ಹಾಕಿದ ಶ್ರಮದಿಂದ ಈ ಸಿನಿಮಾ ಬಿಡುಗಡೆ ಹಂತಕ್ಕೆ ಬಂದಿದೆ. ಈ ಚಿತ್ರದಲ್ಲಿ ಸೌಂದರ್ಯ ಎಂಬ ಪಾತ್ರ ಮಾಡಿದ್ದೀನಿ. ಆದರೆ, ಸಿನಿಮಾದಲ್ಲಿ ಬೇರೆಯದೇ ರೀತಿ ಕಾಣುತ್ತೇನೆ. ನನಗೆ ನಾಯಕಿ ಅಂತ ಅನಿಸಿಕೊಳ್ಳುವುದಕ್ಕಿಂತ ಕಲಾವಿದೆ ಅಂತ ಅನಿಸಿಕೊಳ್ಳೋದು ಬಹಳ ಮುಖ್ಯ. ನನ್ನ ಪಾತ್ರಕ್ಕೆ ಸ್ಕೋಪ್‍ ಇದ್ದಿದ್ದರಿಂದ ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದರು.

ನಟ ವಿನು ಗೌಡ ಈ ಸಿನಿಮಾ ಖಂಡಿತ ಎಲ್ಲರಿಗೂ ಇಷ್ಟವಾಗುತ್ತದೆ ಎಂದರು. ಹೊಸ ಪ್ರತಿಭೆಗಳನ್ನು ಬೆಳೆಸಿ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

44 mins ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

1 hour ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

1 hour ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

2 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

2 hours ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

12 hours ago