ಮನರಂಜನೆ

ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ

ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ ಚಿತ್ರ ಸೇರಿದೆ. ಈ ಚಿತ್ರವು ಸೆ. 12ಕ್ಕೆ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಈ ರಾಮಾಯಣ ಏನು ಎಂದು ಹೇಳುವುದಕ್ಕೆ ಚಿತ್ರತಂಡ ಒಂದು ಟ್ರೇಲರ್‍ ಬಿಡುಗಡೆ ಮಾಡಿದೆ.

‘ಮಿಡಲ್‍ ಕ್ಲಾಸ್ ರಾಮಾಯಣ’ ಚಿತ್ರವನ್ನು ಅಂಜನಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಜಯರಾಮ್ ಗಂಗಪ್ಪನಹಳ್ಳಿ ನಿರ್ಮಿಸಿದ್ದು, ಧನುಶ್‍ ಗೌಡ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿನು ಗೌಡ, ’ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ಯುಕ್ತಾ ರಣಧೀರ್‍ ಪೆರ್ವಿ, ಜಗ್ಗಪ್ಪ, ವೀಣಾ ಸುಂದರ್‍, ವಿಜಯ್‍ ಚೆಂಡೂರ್‍, ಎಸ್‍.ನಾರಾಯಣ್‍, ಬಲರಾಜ್‍ ವಾಡಿ ಮುಂತಾದವರು ನಟಿಸಿದ್ದಾರೆ.

ಇದನ್ನು ಓದಿ:ಚಾಮುಂಡಿಬೆಟ್ಟದಲ್ಲಿ ಶಿವಣ್ಣ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಚಾಲನೆ

ಈ ಹಿಂದೆ ‘ರೆಬಲ್ ಹುಡುಗರು’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಧನುಶ್ ಗೌಡ ಈ ಚಿತ್ರ ಮಾಡಿದ್ದಾರೆ. ‘ಒಬ್ಬ ಮಿಡಲ್‍ ಕ್ಲಾಸ್ ಹುಡುಗನ ಕಥೆಯೇ ‘ಮಿಡಲ್ ಕ್ಲಾಸ್ ರಾಮಾಯಣ’. ಎಲ್ಲರ ಜೀವನದಲ್ಲೂ ಒಂದೊಂದು ಕಥೆ ಇರುತ್ತದೆ. ಅದನ್ನು ಹೇಳುವ ಪ್ರಯತ್ನ ಮಾಡಿದ್ದೇವೆ. ಈ ಚಿತ್ರ ಕೋವಿಡ್‍ಗೂ ಮೊದಲೇ ಶುರು ಮಾಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ವಲ್ಪ ತಡವಾಗಿ, ಇದೀಗ ಬಿಡುಗಡೆಯಾಗುತ್ತಿದೆ’ ಎಂದರು.

ಮೋಕ್ಷಿತಾ ಪೈಗೆ ಇದು ಮೊದಲನೆಯ ಚಿತ್ರ. ಅವರಿಗೆ ಹೊಟ್ಟೆಯಲ್ಲಿ ಚಿಟ್ಟೆ ಬಿಟ್ಟ ಫೀಲ್ ಆಗ್ತಾ ಇತ್ತಂತೆ. ‘ನಾವೆಲ್ಲರೂ ತೆರೆಯ ಮೇಲೆ ಕಾಣಿಸುತ್ತೇವೆ. ಆದರೆ, ತೆರೆಯ ಹಿಂದೆ ಒಂದಷ್ಟು ಜನರು ಹಾಕಿದ ಶ್ರಮದಿಂದ ಈ ಸಿನಿಮಾ ಬಿಡುಗಡೆ ಹಂತಕ್ಕೆ ಬಂದಿದೆ. ಈ ಚಿತ್ರದಲ್ಲಿ ಸೌಂದರ್ಯ ಎಂಬ ಪಾತ್ರ ಮಾಡಿದ್ದೀನಿ. ಆದರೆ, ಸಿನಿಮಾದಲ್ಲಿ ಬೇರೆಯದೇ ರೀತಿ ಕಾಣುತ್ತೇನೆ. ನನಗೆ ನಾಯಕಿ ಅಂತ ಅನಿಸಿಕೊಳ್ಳುವುದಕ್ಕಿಂತ ಕಲಾವಿದೆ ಅಂತ ಅನಿಸಿಕೊಳ್ಳೋದು ಬಹಳ ಮುಖ್ಯ. ನನ್ನ ಪಾತ್ರಕ್ಕೆ ಸ್ಕೋಪ್‍ ಇದ್ದಿದ್ದರಿಂದ ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದರು.

ನಟ ವಿನು ಗೌಡ ಈ ಸಿನಿಮಾ ಖಂಡಿತ ಎಲ್ಲರಿಗೂ ಇಷ್ಟವಾಗುತ್ತದೆ ಎಂದರು. ಹೊಸ ಪ್ರತಿಭೆಗಳನ್ನು ಬೆಳೆಸಿ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago