ಮನರಂಜನೆ

ಕಲಿಯುಗ ಕೃಷ್ಣನ ‘ಮಿಡಲ್ ಕ್ಲಾಸ್ ರಾಮಾಯಣ’; ಟ್ರೇಲರ್ ಬಿಡುಗಡೆ

ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ ಚಿತ್ರ ಸೇರಿದೆ. ಈ ಚಿತ್ರವು ಸೆ. 12ಕ್ಕೆ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಈ ರಾಮಾಯಣ ಏನು ಎಂದು ಹೇಳುವುದಕ್ಕೆ ಚಿತ್ರತಂಡ ಒಂದು ಟ್ರೇಲರ್‍ ಬಿಡುಗಡೆ ಮಾಡಿದೆ.

‘ಮಿಡಲ್‍ ಕ್ಲಾಸ್ ರಾಮಾಯಣ’ ಚಿತ್ರವನ್ನು ಅಂಜನಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಜಯರಾಮ್ ಗಂಗಪ್ಪನಹಳ್ಳಿ ನಿರ್ಮಿಸಿದ್ದು, ಧನುಶ್‍ ಗೌಡ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ವಿನು ಗೌಡ, ’ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ, ಯುಕ್ತಾ ರಣಧೀರ್‍ ಪೆರ್ವಿ, ಜಗ್ಗಪ್ಪ, ವೀಣಾ ಸುಂದರ್‍, ವಿಜಯ್‍ ಚೆಂಡೂರ್‍, ಎಸ್‍.ನಾರಾಯಣ್‍, ಬಲರಾಜ್‍ ವಾಡಿ ಮುಂತಾದವರು ನಟಿಸಿದ್ದಾರೆ.

ಇದನ್ನು ಓದಿ:ಚಾಮುಂಡಿಬೆಟ್ಟದಲ್ಲಿ ಶಿವಣ್ಣ ಅಭಿನಯದ ‘ಡ್ಯಾಡ್‍’ ಚಿತ್ರಕ್ಕೆ ಚಾಲನೆ

ಈ ಹಿಂದೆ ‘ರೆಬಲ್ ಹುಡುಗರು’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ಧನುಶ್ ಗೌಡ ಈ ಚಿತ್ರ ಮಾಡಿದ್ದಾರೆ. ‘ಒಬ್ಬ ಮಿಡಲ್‍ ಕ್ಲಾಸ್ ಹುಡುಗನ ಕಥೆಯೇ ‘ಮಿಡಲ್ ಕ್ಲಾಸ್ ರಾಮಾಯಣ’. ಎಲ್ಲರ ಜೀವನದಲ್ಲೂ ಒಂದೊಂದು ಕಥೆ ಇರುತ್ತದೆ. ಅದನ್ನು ಹೇಳುವ ಪ್ರಯತ್ನ ಮಾಡಿದ್ದೇವೆ. ಈ ಚಿತ್ರ ಕೋವಿಡ್‍ಗೂ ಮೊದಲೇ ಶುರು ಮಾಡಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ವಲ್ಪ ತಡವಾಗಿ, ಇದೀಗ ಬಿಡುಗಡೆಯಾಗುತ್ತಿದೆ’ ಎಂದರು.

ಮೋಕ್ಷಿತಾ ಪೈಗೆ ಇದು ಮೊದಲನೆಯ ಚಿತ್ರ. ಅವರಿಗೆ ಹೊಟ್ಟೆಯಲ್ಲಿ ಚಿಟ್ಟೆ ಬಿಟ್ಟ ಫೀಲ್ ಆಗ್ತಾ ಇತ್ತಂತೆ. ‘ನಾವೆಲ್ಲರೂ ತೆರೆಯ ಮೇಲೆ ಕಾಣಿಸುತ್ತೇವೆ. ಆದರೆ, ತೆರೆಯ ಹಿಂದೆ ಒಂದಷ್ಟು ಜನರು ಹಾಕಿದ ಶ್ರಮದಿಂದ ಈ ಸಿನಿಮಾ ಬಿಡುಗಡೆ ಹಂತಕ್ಕೆ ಬಂದಿದೆ. ಈ ಚಿತ್ರದಲ್ಲಿ ಸೌಂದರ್ಯ ಎಂಬ ಪಾತ್ರ ಮಾಡಿದ್ದೀನಿ. ಆದರೆ, ಸಿನಿಮಾದಲ್ಲಿ ಬೇರೆಯದೇ ರೀತಿ ಕಾಣುತ್ತೇನೆ. ನನಗೆ ನಾಯಕಿ ಅಂತ ಅನಿಸಿಕೊಳ್ಳುವುದಕ್ಕಿಂತ ಕಲಾವಿದೆ ಅಂತ ಅನಿಸಿಕೊಳ್ಳೋದು ಬಹಳ ಮುಖ್ಯ. ನನ್ನ ಪಾತ್ರಕ್ಕೆ ಸ್ಕೋಪ್‍ ಇದ್ದಿದ್ದರಿಂದ ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ’ ಎಂದರು.

ನಟ ವಿನು ಗೌಡ ಈ ಸಿನಿಮಾ ಖಂಡಿತ ಎಲ್ಲರಿಗೂ ಇಷ್ಟವಾಗುತ್ತದೆ ಎಂದರು. ಹೊಸ ಪ್ರತಿಭೆಗಳನ್ನು ಬೆಳೆಸಿ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

10 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

10 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

15 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

19 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

19 hours ago