ಮನರಂಜನೆ

ಒಟಿಟಿಗೆ ಬಂತು ಪ್ರಭಾಸ್‌ ನಟನೆಯ ಕಲ್ಕಿ-2898AD: ಎರಡು ಒಟಿಟಿಯಲ್ಲಿ ಲಭ್ಯ!

ಪ್ಯಾನ್‌ ಇಂಡಿಯಾ ಸ್ಟಾರ್‌ ಡಾರ್ಲಿಂಗ್‌ ಪ್ರಭಾಸ್‌ ನಟನೆಯ, ನಾಗ್‌ ಅಶ್ವಿನ್‌ ನಿರ್ದೇಶನದ ಕಲ್ಕಿ-2898AD ಚಿತ್ರ ಕೊನೆಗೂ ಒಟಿಟಿಗೆ ಲಗ್ಗೆಯಿಟ್ಟಿದೆ.

ಸೈನ್ಸ್‌ ಫಿಕ್ಷನ್‌ ಸಿನಿಮಾವಾದ ಕಲ್ಕಿ-2898AD ಏಕಕಾಲಕ್ಕೆ ಎರಡು ಒಟಿಟಿ ಫ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಿದೆ. ಅದುವೇ ಅಮೇಜಾನ್‌ ಪ್ರೈಮ್‌ ಹಾಗೂ ನೆಟ್‌ಫ್ಲಿಕ್ಸ್‌ ಎರಡೂ ಫ್ಲಾಟ್‌ಫಾರ್ಮ್‌ನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಸಲಾರ್‌ ಬಳಿಕ ರಿಲೀಸ್‌ ಆದ ಪ್ರಭಾಸ್‌ ಅವರ ಚಿತ್ರ ಕಲ್ಕಿ-2898AD, ಜನರನ್ನು ತಲುಪುವಲ್ಲಿ ಯಶಸ್ವಿಯಾಯಿತು. ಈವರೆಗೆ 1200 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡುವ ಸದ್ದು ಮಾಡಿತ್ತು.

ಕಲ್ಕಿ-2898AD ಚಿತ್ರದ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಅವತರಣಿಕೆಯೂ ಅಮೇಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾದರೇ, ಹಿಂದಿ ಭಾಷೆಯ ಅವತರಣಿಕೆ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಜೂನ್‌.27 ರಂದು ರಿಲೀಸ್‌ ಆಗಿದ್ದ ಕಲ್ಕಿ-2898AD ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಪ್ರಭಾಸ್‌ ನಟಿಸಿದ್ದರು. ಅಮಿತಾಭ್‌ ಬಚ್ಚನ್‌, ದೀಪಿಕಾ ಪಡುಕೋಣೆ, ಕಮಲ್‌ ಹಾಸನ್‌, ದಿಶಾ ಪಠಾಣಿ, ಮೃಣಾಲ್‌ ಠಾಕೂರ್‌ ಸೇರಿದಂತೆ ದೊಡ್ಡ ತಾರಾ ಬಣವೇ ಈ ಚಿತ್ರದಲ್ಲಿದೆ. ಇನ್ನು ಈ ಚಿತ್ರವನ್ನು ಅಶ್ವಿನಿ ದತ್‌ ನಿರ್ಮಿಸಿದ್ದು, ಸಂತೋಷ್‌ ನಾರಾಯಣ್‌ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಈ ಚಿತ್ರಕ್ಕೆ ನಾಗ್‌ ಅಶ್ವಿನ್‌ ಆಕ್ಷನ್‌ ಕಟ್‌ ಹೇಳಿದ್ದಾರೆ.

https://x.com/Kalki2898AD/status/1826334940780527846

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

7 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

7 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

7 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 hours ago