ಮನರಂಜನೆ

1000 ಸಾವಿರ ಕೋಟಿ ಕ್ಲಬ್ ಸೇರಿದ ‘ಕಲ್ಕಿ 2898 AD’!

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಚಿತ್ರ ಬಿಡಗುಡೆಯಾಗಿ 13ನೇ ದಿನದ ಅಂತ್ಯಕ್ಕೆ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ 1000 ಕೋಟಿ ರೂ. ಕ್ಲಬ್‍ ಸೇರಿದೆ.

ನಟ ಪ್ರಭಾಸ್‍ಗೆ ಸಾವಿರ ಕೋಟಿ ಕ್ಲಬ್‍ ಹೊಸದೇನಲ್ಲ. ಈ ಹಿಂದೆ, ಅವರ ‘ಬಾಹುಬಲಿ’ ಚಿತ್ರವು ಸಾವಿರ ಕೋಟಿ ಕ್ಲಬ್‍ಗೆ ಹೋಗಿತ್ತು. 250 ಕೋಟಿ ರೂ. ಬಜೆಟ್‍ನಲ್ಲಿ ನಿರ್ಮಾಣವಾದ ಚಿತ್ರವು ಜಗತ್ತಿನಾದ್ಯಮತ 1,810 ಕೋಟಿ ರೂ. ಸಂಗ್ರಹಿಸಿತ್ತು. ಈಗ 600 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಕಲ್ಕಿ 2898 ಎಡಿ’ 1000 ಕೋಟಿ ರೂ. ಸಂಗ್ರಹಿಸಿದೆ. ಈ ಚಿತ್ರವು ಇನ್ನೂ 200-300 ಕೋಟಿ ರೂ. ಸಂಗ್ರಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚಿತ್ರವು ಮೊದಲ ದಿನವೇ 200 ಕೋಟಿ ರೂ. ಸಂಗ್ರಹಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಅದಕ್ಕೆ ಸರಿಯಾಗಿ ಮೊದಲ ದಿನವು 191 ಕೋಟಿ ರೂ ಜಾಗತಿಕವಾಗಿ ಗಳಿಕೆ ಮಾಡಿತ್ತು. ಆ ನಂತರ ಕ್ರಮೇಣ ಗಳಿಕೆ ಕಡಿಮೆಯಾದರೂ ಒಟ್ಟಾರೆ, ಚಿತ್ರ ಬಿಡುಗಡೆಯಾದ 16ನೇ ದಿನಕ್ಕೆ ಚಿತ್ರವು 1000 ಕೋಟಿ ರೂ ಸಂಗ್ರಹ ಮಾಡಿದೆ.

ಈ ಚಿತ್ರಕ್ಕೆ ನಾಗ್‍ ಅಶ್ವಿನ್‍ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ. ಪುರಾಣ ಮತ್ತು ಸೈನ್ಸ್ ಫಿಕ್ಷನ್‍ ಆಧರಿಸಿ ಮಾಡಲಾದ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಮಿತಾಭ್‍ ಬಚ್ಚನ್‍ ಅವರು ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರ ಮಾಡಿದರೆ, ಕರ್ಣ ಮತ್ತು ಭೈರವನಾಗಿ ಪ್ರಭಾಸ್‍ ಕಾಣಿಸಿಕೊಂಡಿದ್ದಾರೆ. ದುಲ್ಕರ್ ಸಲ್ಮಾನ್‍, ವಿಜಯ್‍ ದೇವರಕೊಂಡ, ಮೃಣಾಲ್‍ ಠಾಕೂರ್ ಮುಂತಾದವರು ಈ ಚಿತ್ರದಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago