ಮನರಂಜನೆ

1000 ಸಾವಿರ ಕೋಟಿ ಕ್ಲಬ್ ಸೇರಿದ ‘ಕಲ್ಕಿ 2898 AD’!

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಚಿತ್ರ ಬಿಡಗುಡೆಯಾಗಿ 13ನೇ ದಿನದ ಅಂತ್ಯಕ್ಕೆ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ 1000 ಕೋಟಿ ರೂ. ಕ್ಲಬ್‍ ಸೇರಿದೆ.

ನಟ ಪ್ರಭಾಸ್‍ಗೆ ಸಾವಿರ ಕೋಟಿ ಕ್ಲಬ್‍ ಹೊಸದೇನಲ್ಲ. ಈ ಹಿಂದೆ, ಅವರ ‘ಬಾಹುಬಲಿ’ ಚಿತ್ರವು ಸಾವಿರ ಕೋಟಿ ಕ್ಲಬ್‍ಗೆ ಹೋಗಿತ್ತು. 250 ಕೋಟಿ ರೂ. ಬಜೆಟ್‍ನಲ್ಲಿ ನಿರ್ಮಾಣವಾದ ಚಿತ್ರವು ಜಗತ್ತಿನಾದ್ಯಮತ 1,810 ಕೋಟಿ ರೂ. ಸಂಗ್ರಹಿಸಿತ್ತು. ಈಗ 600 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಕಲ್ಕಿ 2898 ಎಡಿ’ 1000 ಕೋಟಿ ರೂ. ಸಂಗ್ರಹಿಸಿದೆ. ಈ ಚಿತ್ರವು ಇನ್ನೂ 200-300 ಕೋಟಿ ರೂ. ಸಂಗ್ರಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚಿತ್ರವು ಮೊದಲ ದಿನವೇ 200 ಕೋಟಿ ರೂ. ಸಂಗ್ರಹಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಅದಕ್ಕೆ ಸರಿಯಾಗಿ ಮೊದಲ ದಿನವು 191 ಕೋಟಿ ರೂ ಜಾಗತಿಕವಾಗಿ ಗಳಿಕೆ ಮಾಡಿತ್ತು. ಆ ನಂತರ ಕ್ರಮೇಣ ಗಳಿಕೆ ಕಡಿಮೆಯಾದರೂ ಒಟ್ಟಾರೆ, ಚಿತ್ರ ಬಿಡುಗಡೆಯಾದ 16ನೇ ದಿನಕ್ಕೆ ಚಿತ್ರವು 1000 ಕೋಟಿ ರೂ ಸಂಗ್ರಹ ಮಾಡಿದೆ.

ಈ ಚಿತ್ರಕ್ಕೆ ನಾಗ್‍ ಅಶ್ವಿನ್‍ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ. ಪುರಾಣ ಮತ್ತು ಸೈನ್ಸ್ ಫಿಕ್ಷನ್‍ ಆಧರಿಸಿ ಮಾಡಲಾದ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಮಿತಾಭ್‍ ಬಚ್ಚನ್‍ ಅವರು ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರ ಮಾಡಿದರೆ, ಕರ್ಣ ಮತ್ತು ಭೈರವನಾಗಿ ಪ್ರಭಾಸ್‍ ಕಾಣಿಸಿಕೊಂಡಿದ್ದಾರೆ. ದುಲ್ಕರ್ ಸಲ್ಮಾನ್‍, ವಿಜಯ್‍ ದೇವರಕೊಂಡ, ಮೃಣಾಲ್‍ ಠಾಕೂರ್ ಮುಂತಾದವರು ಈ ಚಿತ್ರದಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

26 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago