ಮನರಂಜನೆ

1000 ಸಾವಿರ ಕೋಟಿ ಕ್ಲಬ್ ಸೇರಿದ ‘ಕಲ್ಕಿ 2898 AD’!

ಪ್ರಭಾಸ್‍ ಅಭಿನಯದ ಬಹುನಿರೀಕ್ಷಿತ ಪ್ಯಾನ್‍ ಇಂಡಿಯಾ ಬಿಡುಗಡೆಯಾಗಿ ಎರಡು ವಾರಗಳಾಗಿವೆ. ಚಿತ್ರ ಬಿಡಗುಡೆಯಾಗಿ 13ನೇ ದಿನದ ಅಂತ್ಯಕ್ಕೆ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ 1000 ಕೋಟಿ ರೂ. ಕ್ಲಬ್‍ ಸೇರಿದೆ.

ನಟ ಪ್ರಭಾಸ್‍ಗೆ ಸಾವಿರ ಕೋಟಿ ಕ್ಲಬ್‍ ಹೊಸದೇನಲ್ಲ. ಈ ಹಿಂದೆ, ಅವರ ‘ಬಾಹುಬಲಿ’ ಚಿತ್ರವು ಸಾವಿರ ಕೋಟಿ ಕ್ಲಬ್‍ಗೆ ಹೋಗಿತ್ತು. 250 ಕೋಟಿ ರೂ. ಬಜೆಟ್‍ನಲ್ಲಿ ನಿರ್ಮಾಣವಾದ ಚಿತ್ರವು ಜಗತ್ತಿನಾದ್ಯಮತ 1,810 ಕೋಟಿ ರೂ. ಸಂಗ್ರಹಿಸಿತ್ತು. ಈಗ 600 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಕಲ್ಕಿ 2898 ಎಡಿ’ 1000 ಕೋಟಿ ರೂ. ಸಂಗ್ರಹಿಸಿದೆ. ಈ ಚಿತ್ರವು ಇನ್ನೂ 200-300 ಕೋಟಿ ರೂ. ಸಂಗ್ರಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಚಿತ್ರವು ಮೊದಲ ದಿನವೇ 200 ಕೋಟಿ ರೂ. ಸಂಗ್ರಹಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಅದಕ್ಕೆ ಸರಿಯಾಗಿ ಮೊದಲ ದಿನವು 191 ಕೋಟಿ ರೂ ಜಾಗತಿಕವಾಗಿ ಗಳಿಕೆ ಮಾಡಿತ್ತು. ಆ ನಂತರ ಕ್ರಮೇಣ ಗಳಿಕೆ ಕಡಿಮೆಯಾದರೂ ಒಟ್ಟಾರೆ, ಚಿತ್ರ ಬಿಡುಗಡೆಯಾದ 16ನೇ ದಿನಕ್ಕೆ ಚಿತ್ರವು 1000 ಕೋಟಿ ರೂ ಸಂಗ್ರಹ ಮಾಡಿದೆ.

ಈ ಚಿತ್ರಕ್ಕೆ ನಾಗ್‍ ಅಶ್ವಿನ್‍ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ. ಪುರಾಣ ಮತ್ತು ಸೈನ್ಸ್ ಫಿಕ್ಷನ್‍ ಆಧರಿಸಿ ಮಾಡಲಾದ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಮಿತಾಭ್‍ ಬಚ್ಚನ್‍ ಅವರು ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರ ಮಾಡಿದರೆ, ಕರ್ಣ ಮತ್ತು ಭೈರವನಾಗಿ ಪ್ರಭಾಸ್‍ ಕಾಣಿಸಿಕೊಂಡಿದ್ದಾರೆ. ದುಲ್ಕರ್ ಸಲ್ಮಾನ್‍, ವಿಜಯ್‍ ದೇವರಕೊಂಡ, ಮೃಣಾಲ್‍ ಠಾಕೂರ್ ಮುಂತಾದವರು ಈ ಚಿತ್ರದಲ್ಲಿ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಲ್ಕಿ 2898 AD’ ಚಿತ್ರದಲ್ಲಿ ಪ್ರಭಾಸ್‍, ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್‍ ಬ್ಯಾನರ್‍ ಅಡಿ ಅಶ್ವಿನಿ ದತ್‍ ನಿರ್ಮಿಸಿದ್ದಾರೆ.

ಭೂಮಿಕಾ

Recent Posts

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

36 mins ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

57 mins ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

58 mins ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

2 hours ago

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌

ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್‌ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…

2 hours ago

ಎಚ್ಚರಿಕೆಯ ಘಂಟೆ ಬಾರಿಸಿದ ಅಕಾಲಿಕ ಮಳೆ

ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…

2 hours ago