ಒಂದು ಕಡೆ ಕನ್ನಡದ ‘ಬಿಗ್ ಬಾಸ್’ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುತ್ತಾರೋ ಇಲ್ಲವೋ ಎಂಬ ಚರ್ಚೆ ನಡೆಯುತ್ತಿರುವಾಗಲೇ, ಅತ್ತ ತಮಿಳಿನಲ್ಲಿ ಹಿರಿಯ ನಟ ಕಮಲ್ ಹಾಸನ್, ಈ ಬಾರಿ ಕಾರ್ಯಕ್ರಮ ನಡೆಸಿಕೊಡುತ್ತಿಲ್ಲ, ತಮ್ಮ ಬದಲಿಗೆ ಬೇರೆಯವರು ನಿರೂಪಣೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
2017ರಲ್ಲಿ ಸ್ಟಾರ್ ವಿಜಯ್ ಚಾನಲ್ನಲ್ಲಿ ಕಮಲ್ ಹಾಸನ್ ಅವರ ನಿರೂಪಣೆಯಲ್ಲಿ ಈ ಕಾರ್ಯಕ್ರಮ ಪ್ರಾರಂಭವಾಗಿತ್ತು. ಕಾರ್ಯಕ್ರಮವು ಅತ್ಯಂತ ಯಶಸ್ವಿಯೂ ಆಗಿತ್ತು. ಇದುವರೆಗಿ ಏಳು ಸೀಸನ್ಗಳನ್ನು ಕಮಲ್ ಹಾಸನ್ ನಡೆಸಿಕೊಟ್ಟಿದ್ದರು. ಈಗ ಎಂಟನೆಯ ಅವತರಣಿಕೆಯನ್ನು ನಡೆಸಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪತ್ರ ಬರೆದಿರುವ ಅವರು, ಕಾರ್ಯಕ್ರಮದಿಂದ ಬ್ರೇಕ್ ಪಡೆಯುತ್ತಿರುವುದಾಗಿ ಹೇಳಿದ್ದಾರೆ.
‘ಭಾರದ ಹೃದಯದಿಂದ, ಈ ಬಾರಿಯ ‘ಬಿಗ್ ಬಾಸ್’ ಕಾರ್ಯಕ್ರಮವನ್ನು ನಡೆಸಿಕೊಡುವುದಕ್ಕೆ ಆಗುತ್ತಿಲ್ಲ, ಒಂದು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳುವುದಕ್ಕೆ ವಿಷಾಧಿಸುತ್ತಿದ್ದೇನೆ. ಕೆಲವು ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವುದರಿಂದ, ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಏಳು ವರ್ಷಗಳ ಕಾಲ ‘ಬಿಗ್ ಬಾಸ್’ ಕಾರ್ಯಕ್ರಮದ ಮೂಲಕ ನಿಮ್ಮೆಲ್ಲರ ಮನೆಗಳಿಗೆ ಬರುವ ಅವಕಾಶ ಸಿಕ್ಕಿತ್ತು. ಇದರಿಂದ ಸಾಕಷ್ಟು ಪ್ರೀತಿಯೂ ಸಿಕ್ಕಿದ್ದು, ಇದಕ್ಕೆ ಚಿರಋಣಿಯಾಗಿದ್ದೇನೆ. ಈ ಕಾರ್ಯಕ್ರಮ ನಡೆಸಿಕೊಡುವುದು ಒಂದು ಅದ್ಭುತ ಅನುಭವವಾಗಿದ್ದು, ಇಂಥದ್ದೊಂದು ಅವಕಾಶ ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳನ್ನು ಹೇಳುವುದಕ್ಕೆ ಬಯಸುತ್ತೇನೆ’ ಎಂದು ಹೇಳಿದ್ದಾರೆ.
ಸರಿ, ಕಮಲ್ ಹಾಸನ್ ಬಿಟ್ಟು ಹೋದ ಜಾಗವನ್ನು ಯಾರು ತುಂಬಲಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ, ನಟ ಸೂರ್ಯ, ವಿಜಯ್ ಸೇತುಪತಿ, ನಯನತಾರಾ, ರಮ್ಯಾ ಕೃಷ್ಣನ್ ಮುಂತಾದವರ ಹೆಸರುಗಳು ಕೇಳಿಬಂದಿತ್ತು. ಇದೀಗ ಬಂದಿರುವ ಸುದ್ದಿಯ ಪ್ರಕಾರ, ಹಿರಿಯ ನಟ ಶರತ್ ಕುಮಾರ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…