ಮನರಂಜನೆ

ರಜನಿಕಾಂತ್ ಅಭಿನಯದ 173ನೇ ಸಿನಿಮಾ ನಿರ್ಮಿಸಲಿದ್ದಾರೆ ಕಮಲ್ ಹಾಸನ್

ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಮೊದಲು ಈ ಚಿತ್ರವನ್ನು ಲೋಕೇಶ್‍ ಕನಕರಾಜ್‍ ನಿರ್ದೇಶಿಸುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ನಂತರ ನೆಲ್ಸನ್‍ ದಿಲೀಪ್‍ ಕುಮಾರ್ ನಿರ್ದೇಶಿಸುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಅವರಿಬ್ಬರನ್ನೂ ಬಿಟ್ಟು, ಮೂರನೆಯ ವ್ಯಕ್ತಿಯೊಬ್ಬರು ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ರಜನಿಕಾಂತ್‍ ಅಭಿನಯದ 173ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸುಂದರ್‍ ಸಿ. ಖುಷ್ಬೂ ಅವರ ಪತಿಯಾಗಿರುವ ಸುಂದರ್, ಈ ಹಿಂದೆ ರಜನಿಕಾಂತ್‍ ಅಭಿನಯದಲ್ಲಿ ‘ಅರುಣಾಚಲಂ’ ಚಿತ್ರವನ್ನು ನಿರ್ದೇಶಿಸಿದ್ದರು. ಈ ಚಿತ್ರ 1997ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್‍ ಆಗಿತ್ತು. ಇದೀಗ 28 ವರ್ಷಗಳ ನಂತರ ರಜನಿಕಾಂತ್‍ ಅಭಿನಯದಲ್ಲಿ ಸುಂದರ್ ಹೊಸ ಚಿತ್ರ ನಿರ್ದೇಶಿಸಲಿದ್ದಾರೆ.

ಇದನ್ನು ಓದಿ: ಸಿನಿ ಪಯಣಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ವಿದಾಯ?

ವಿಶೇಷವೆಂದರೆ, ಈ ಚಿತ್ರವನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ಚಿತ್ರ ನಿರ್ಮಿಸುತ್ತಿದ್ದಾರೆ. ಈ ಹಿಂದೆ ರಾಜ್‍ ಕಮಲ್‍ ಸಂಸ್ಥೆಯು ಕಮಲ್‍ ಹಾಸನ್‍ ಸೇರಿದಂತೆ ತಮಿಳು ಚಿತ್ರರಂಗದ ಹಲವು ಜನಪ್ರಿಯ ನಟರ ಚಿತ್ರಗಳನ್ನು ನಿರ್ಮಿಸಿತ್ತು. ಇದೇ ಮೊದಲ ಬಾರಿಗೆ ರಜನಿಕಾಂತ್‍ ಅಭಿನಯದ ಚಿತ್ರವನ್ನು ರಾಜ್‍ ಕಮಲ್‍ ನಿರ್ಮಿಸುತ್ತಿದೆ.

ಈ ಚಿತ್ರಕ್ಕೆ ‘ತಲೈವರ್ 173’ ಎಂಬ ಹೆಸರಿಡಲಾಗಿದ್ದು, ಇಲ್ಲಿ ರಜನಿಕಾಂತ್‍ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಮಲ್‍ ಹಾಸನ್‍ ಚಿತ್ರದಲ್ಲಿ ಅತಿಥಿಯಾಗಿ ನಟಿಸಲಿದ್ದಾರೆ. ಈ ಹಿಂದೆ ರಜನಿಕಾಂತ್ ಅಭಿನಯದ ‘ತಿಲ್ಲುಮುಲ್ಲು’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕಮಲ್‍ ಹಾಸನ್‍ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಈಗ ‘ತಲೈವರ್ 173’ ಚಿತ್ರದಲ್ಲೂ ರಜನಿಕಾಂತ್ ಜೊತೆಗೆ ಕಮಲ್‍ ಹಾಸನ್‍ ನಟಿಸಲಿದ್ದಾರಂತೆ.

ಸದ್ಯಕ್ಕೆ ಈ ಚಿತ್ರದ ಘೋಷಣೆಯಾಗಿದ್ದು, ಮುಂದಿನ ವರ್ಷ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ವಿಶೇಷವೆಂದರೆ, ಚಿತ್ರದ ಬಿಡುಗಡೆಯನ್ನೂ ಘೋಷಿಸಲಾಗಿದ್ದು, 2027ರ ಸಂಕ್ರಾಂತಿ ಹಬ್ಬಕ್ಕೆ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.‌

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

8 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

8 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

14 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

14 hours ago