ಮನರಂಜನೆ

ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ: ಕಮಲ್‍ ಹಾಸನ್‍

ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ ಎಂದಿರುವ ನಟ ಕಮಲ್‍ ಹಾಸನ್‍, ಈ ಮೂಲಕ ತಾವು ಕ್ಷಮೆ ಕೇಳುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಇತ್ತೀಚೆಗೆ, ಚೆನ್ನೈನಲ್ಲಿ ಕಮಲ್‍ ಹಾಸನ್‍ ಅಭಿನಯದ ‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕನ್ನಡದ ಶಿವರಾಜಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಡಾ. ರಾಜಕುಮಾರ್ ಮತ್ತು ಶಿವರಾಜಕುಮಾರ್ ಅವರೊಂದಿಗಿನ ಒಡನಾಟದ ಬಗ್ಗೆ ಮಾತನಾಡುವ ಸಂದರ್ಭದಲ್ಲಿ, ‘ಕನ್ನಡವು ತಮಿಳಿನಿಂದ ಹುಟ್ಟಿತು …’ ಎಂಬ ಹೇಳಿಕೆಯನ್ನು ನೀಡಿದ್ದರು.

ಈ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗುವುದರ ಜೊತೆಗೆ, ತಮಿಳು ಭಾಷೆಯು ಕನ್ನಡಕ್ಕಿಂತ ಶ್ರೇಷ್ಠ ಎಂಬ ಭಾವನೆಯನ್ನು ಕಮಲ್‍ ಹಾಸನ್‍ ಬಿತ್ತುವುದಕ್ಕೆ ಹೊರಟಿದ್ದಾರೆ ಎಂದು ಸೋಷಿಯಲ್‍ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಶಿವರಾಜ ತಂಗಡಗಿ ಸೇರಿದಂತೆ ಹಲವರು ಕಮಲ್‍ ಹಾಸನ್‍ ಹೇಳಿಕೆಯನ್ನು ಖಂಡಿಸಿದ್ದರು. ಕಮಲ್ ಹಾಸನ್‍ ಕ್ಷಮೆ ಕೇಳದಿದ್ದರೆ, ಮುಂದಿನ ವಾರ ಬಿಡುಗಡೆಯಾಗಬೇಕಿರುವ ಅವರ ‘ಥಗ್‍ ಲೈಫ್‍’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್‍ ಮಾಡಬೇಕು ಎಂದು ಆಗ್ರಹಿಸಿದ್ದರು.

ಇಷ್ಟೆಲ್ಲಾ ಟೀಕೆಗಳು ವ್ಯಕ್ತವಾದರೂ, ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ‍ಹಾಸನ್‍ ಹೇಳಿದ್ದಾರೆ. ತಿರುವನಂತಪುರದಲ್ಲಿ ಬುಧವಾರ ಈ ಕುರಿತು ಮಾತನಾಡಿರುವ ಅವರು, ‘ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ. ತಮಿಳುನಾಡು ರಾಜ್ಯವು ಎಲ್ಲಾ ಭಾಷಿಕರಿಗೂ ಗೌರವ ನೀಡಿದೆ. ಕೇರಳದ ಮೆನನ್, ಆಂಧ್ರದ ರೆಡ್ಡಿ ಹಾಗೂ ಕರ್ನಾಟಕದ ಅಯ್ಯಂಗಾರ್ ಸಮುದಾಯದ ಮಹಿಳೆಯೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕನ್ನಡಿಗರು ನನಗೆ ತುಂಬಾ ಪ್ರೀತಿಯನ್ನು ನೀಡಿದ್ದಾರೆ. ತಮಿಳುನಾಡಿನಲ್ಲಿ ಸಮಸ್ಯೆಯಾದಾಗ ಕನ್ನಡದಲ್ಲಿ ಸಾಕಷ್ಟು ಅವಕಾಶ ನೀಡಿದ್ದಾರೆ. ಪ್ರೀತಿಯಲ್ಲಿ ಕ್ಷಮೆಯ ಮಾತು ಬರುವುದಿಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

15 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

15 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

15 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

15 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

15 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

15 hours ago