ಮನರಂಜನೆ

ಮತ್ತೆ ಬಂದ ಸಚಿನ್‍ ಚೆಲುವರಾಯಸ್ವಾಮಿ ; ಚಿತ್ರದಲ್ಲೊಂದು ಚಿತ್ರ

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್‍ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಕಮಲ್‍ ಶ್ರೀದೇವಿ’ ಎಂಬ ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.

‘ಕಮಲ್‍ ಶ್ರೀದೇವಿ’ ಚಿತ್ರದಲ್ಲಿ ಸಚಿನ್‍ ಜೊತೆಗೆ ಸಂಗೀತಾ ಭಟ್‍, ಕಿಶೋರ್‌, ರಮೇಶ್‍ ಇಂದಿರಾ, ಮಿತ್ರ, ಎಂ.ಎಸ್‍ ಉಮೇಶ್‍ ಮುಂತಾದವರು ನಟಿಸಿದ್ದು, ‘ಗಜರಾಮ’ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಎ. ಸುನೀಲ್‍ ಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸುನೀಲ್‍, ‘ಇದೊಂದು ಮರ್ಡರ್‌ ಮಿಸ್ಟ್ರಿ ಚಿತ್ರ. ಪೋಸ್ಟರ್‍ನಲ್ಲಿರುವ ಏಳು ಪ್ರಾಣಿ-ಪಕ್ಷಿಗಳು ಒಂದೊಂದು ಪಾತ್ರವನ್ನು ಪ್ರತಿನಿಧಿಸುತ್ತದೆ. ಕೊನೆಯವರೆಗೂ ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತಾಗುವುದಿಲ್ಲ. ಪ್ರೇಕ್ಷಕರನ್ನು ಸೀಟಿನಂಚಿನಡಿ ಕೂರಿಸುವಂತಹ ಒಂದು ಚಿತ್ರ ಇದು. ಯಾರಿಗೂ ಬೇಸರವಾಗದಂತೆ, ಖುಷಿಯಾಗುವಂತಹ ಚಿತ್ರ’ ಎಂದು ಹೇಳಿದರು.

ಈ ಚಿತ್ರಕ್ಕೂ, ಕಮಲ್‍ ಹಾಸನ್‍ ಮತ್ತು ಶ್ರೀದೇವಿ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಸಚಿನ್, ‘ಚಿತ್ರದಲ್ಲಿ ಕಮಲ್ ‍ಮತ್ತು ಶ್ರೀದೇವಿ ಪಾತ್ರಗಳು ಪ್ರಮುಖ ಪಾತ್ರ ವಹಿಸುವುದರಿಂದ, ಆ ಹೆಸರನ್ನು ಇಟ್ಟಿದ್ದೇವೆ. ಇದು ಬಯೋಪಿಕ್ ಅಲ್ಲ. ಕಮಲ್‍ ಮತ್ತು ಶ್ರೀದೇವಿ ಎಂಬುದು ಪಾತ್ರಗಳ ಹೆಸರು. ಒಂದು ಕ್ರೈಮ್‍ ನಡೆಯುತ್ತದೆ. ಅದನ್ನು ಯಾರು ಮಾಡಿದರು ಎಂಬುದೇ ಚಿತ್ರದ ಕಥೆ. ಚಿತ್ರದಲ್ಲೊಂದು ಚಿತ್ರವಿದೆ. ಆ ಚಿತ್ರದ ನಿರ್ದೇಶಕನಾಗಿ ನಾನು ಅಭಿನಯಿಸುತ್ತಿದ್ದೇನೆ. ಈ ಮಧ್ಯೆ ಒಂದು ಕೊಲೆ ಆಗಿ, ಅದರಿಂದ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆ. ಈಗಾಗಲೇ ಶೇ. 70ರಷ್ಟು ಚಿತ್ರೀಕರಣ ಮುಗಿದಿದೆ. ಬಾಕಿ ಇರುವ ಚಿತ್ರೀಕರಣ ಸದ್ಯದಲ್ಲೇ ಮುಗಿಯಲಿದೆ’ ಎಂದರು.

ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್‍ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್‍’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟರು ಎನ್ನುವ ರಾಜವರ್ಧನ್‍, ‘ಈ ಕಥೆ ನನಗಿಂತ ಸಚಿನ್‍ಗೆ ಹೆಚ್ಚು ಹೊಂದುತ್ತದೆ ಎಂದನಿಸಿತು. ಹಾಗಾಗಿ, ಅವರಿಗೆ ಹೇಳಿದೆ. ‘ಗಜರಾಮ’ ಚಿತ್ರದಲ್ಲಿ ಕೆಲಸ ಮಾಡುವಾಗ ಸುನೀಲ್‍ ಅವರ ಕೆಲಸ ನೋಡಿದ್ದೆ. ಅವರ ಕೆಲಸ ಇಷ್ಟವಾಗಿ, ಚಿತ್ರ ನಿರ್ದೇಶಿಸುವುದಕ್ಕೆ ಅವರನ್ನು ಕೇಳಿದೆ. ಇದೊಂದು ಕಂಟೆಂಟ್ ಇರುವ ಚಿತ್ರ. ಹೀರೋಯಿಸಂ ಇಲ್ಲದ, ಕಥೆಗೆ ಏನು ಬೇಕೋ ಅಷ್ಟು ಮಾತ್ರ ಇರುವ ಚಿತ್ರ ಇದು. ಏಳು ಪಾತ್ರಗಳ ಸುತ್ತ ಸುತ್ತುವ ಚಿತ್ರ ಇದು. ಈ ಪೋಸ್ಟರ್‍ನಲ್ಲೇ ಚಿತ್ರದ ಕಥೆ ಇದೆ. ಈಗಾಗಲೇ 56 ದಿನಗಳ ಕಾಲ ಚಿತ್ರೀಕರಣ ಮುಗಿದಿದೆ. 10 ದಿನಗಳ ಚಿತ್ರೀಕರಣ ಬಾಕಿ ಇದೆ’ ಎಂದರು.

‘ಕಮಲ್‍ ಶ್ರೀದೇವಿ’ ಚಿತ್ರಕ್ಕೆ ಕೀರ್ತನ್‍ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ ಮತ್ತು ಜ್ಞಾನೇಶ್‍ ಅವರ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

2 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

2 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

2 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

2 hours ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

2 hours ago