‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಕಮಲ್ ಶ್ರೀದೇವಿ’ ಎಂಬ ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.
‘ಕಮಲ್ ಶ್ರೀದೇವಿ’ ಚಿತ್ರದಲ್ಲಿ ಸಚಿನ್ ಜೊತೆಗೆ ಸಂಗೀತಾ ಭಟ್, ಕಿಶೋರ್, ರಮೇಶ್ ಇಂದಿರಾ, ಮಿತ್ರ, ಎಂ.ಎಸ್ ಉಮೇಶ್ ಮುಂತಾದವರು ನಟಿಸಿದ್ದು, ‘ಗಜರಾಮ’ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಎ. ಸುನೀಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸುನೀಲ್, ‘ಇದೊಂದು ಮರ್ಡರ್ ಮಿಸ್ಟ್ರಿ ಚಿತ್ರ. ಪೋಸ್ಟರ್ನಲ್ಲಿರುವ ಏಳು ಪ್ರಾಣಿ-ಪಕ್ಷಿಗಳು ಒಂದೊಂದು ಪಾತ್ರವನ್ನು ಪ್ರತಿನಿಧಿಸುತ್ತದೆ. ಕೊನೆಯವರೆಗೂ ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತಾಗುವುದಿಲ್ಲ. ಪ್ರೇಕ್ಷಕರನ್ನು ಸೀಟಿನಂಚಿನಡಿ ಕೂರಿಸುವಂತಹ ಒಂದು ಚಿತ್ರ ಇದು. ಯಾರಿಗೂ ಬೇಸರವಾಗದಂತೆ, ಖುಷಿಯಾಗುವಂತಹ ಚಿತ್ರ’ ಎಂದು ಹೇಳಿದರು.
ಈ ಚಿತ್ರಕ್ಕೂ, ಕಮಲ್ ಹಾಸನ್ ಮತ್ತು ಶ್ರೀದೇವಿ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಸಚಿನ್, ‘ಚಿತ್ರದಲ್ಲಿ ಕಮಲ್ ಮತ್ತು ಶ್ರೀದೇವಿ ಪಾತ್ರಗಳು ಪ್ರಮುಖ ಪಾತ್ರ ವಹಿಸುವುದರಿಂದ, ಆ ಹೆಸರನ್ನು ಇಟ್ಟಿದ್ದೇವೆ. ಇದು ಬಯೋಪಿಕ್ ಅಲ್ಲ. ಕಮಲ್ ಮತ್ತು ಶ್ರೀದೇವಿ ಎಂಬುದು ಪಾತ್ರಗಳ ಹೆಸರು. ಒಂದು ಕ್ರೈಮ್ ನಡೆಯುತ್ತದೆ. ಅದನ್ನು ಯಾರು ಮಾಡಿದರು ಎಂಬುದೇ ಚಿತ್ರದ ಕಥೆ. ಚಿತ್ರದಲ್ಲೊಂದು ಚಿತ್ರವಿದೆ. ಆ ಚಿತ್ರದ ನಿರ್ದೇಶಕನಾಗಿ ನಾನು ಅಭಿನಯಿಸುತ್ತಿದ್ದೇನೆ. ಈ ಮಧ್ಯೆ ಒಂದು ಕೊಲೆ ಆಗಿ, ಅದರಿಂದ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆ. ಈಗಾಗಲೇ ಶೇ. 70ರಷ್ಟು ಚಿತ್ರೀಕರಣ ಮುಗಿದಿದೆ. ಬಾಕಿ ಇರುವ ಚಿತ್ರೀಕರಣ ಸದ್ಯದಲ್ಲೇ ಮುಗಿಯಲಿದೆ’ ಎಂದರು.
ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟರು ಎನ್ನುವ ರಾಜವರ್ಧನ್, ‘ಈ ಕಥೆ ನನಗಿಂತ ಸಚಿನ್ಗೆ ಹೆಚ್ಚು ಹೊಂದುತ್ತದೆ ಎಂದನಿಸಿತು. ಹಾಗಾಗಿ, ಅವರಿಗೆ ಹೇಳಿದೆ. ‘ಗಜರಾಮ’ ಚಿತ್ರದಲ್ಲಿ ಕೆಲಸ ಮಾಡುವಾಗ ಸುನೀಲ್ ಅವರ ಕೆಲಸ ನೋಡಿದ್ದೆ. ಅವರ ಕೆಲಸ ಇಷ್ಟವಾಗಿ, ಚಿತ್ರ ನಿರ್ದೇಶಿಸುವುದಕ್ಕೆ ಅವರನ್ನು ಕೇಳಿದೆ. ಇದೊಂದು ಕಂಟೆಂಟ್ ಇರುವ ಚಿತ್ರ. ಹೀರೋಯಿಸಂ ಇಲ್ಲದ, ಕಥೆಗೆ ಏನು ಬೇಕೋ ಅಷ್ಟು ಮಾತ್ರ ಇರುವ ಚಿತ್ರ ಇದು. ಏಳು ಪಾತ್ರಗಳ ಸುತ್ತ ಸುತ್ತುವ ಚಿತ್ರ ಇದು. ಈ ಪೋಸ್ಟರ್ನಲ್ಲೇ ಚಿತ್ರದ ಕಥೆ ಇದೆ. ಈಗಾಗಲೇ 56 ದಿನಗಳ ಕಾಲ ಚಿತ್ರೀಕರಣ ಮುಗಿದಿದೆ. 10 ದಿನಗಳ ಚಿತ್ರೀಕರಣ ಬಾಕಿ ಇದೆ’ ಎಂದರು.
‘ಕಮಲ್ ಶ್ರೀದೇವಿ’ ಚಿತ್ರಕ್ಕೆ ಕೀರ್ತನ್ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ ಮತ್ತು ಜ್ಞಾನೇಶ್ ಅವರ ಸಂಕಲನವಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…