ಮನರಂಜನೆ

ಮತ್ತೆ ಬಂದ ಸಚಿನ್‍ ಚೆಲುವರಾಯಸ್ವಾಮಿ ; ಚಿತ್ರದಲ್ಲೊಂದು ಚಿತ್ರ

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್‍ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಕಮಲ್‍ ಶ್ರೀದೇವಿ’ ಎಂಬ ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.

‘ಕಮಲ್‍ ಶ್ರೀದೇವಿ’ ಚಿತ್ರದಲ್ಲಿ ಸಚಿನ್‍ ಜೊತೆಗೆ ಸಂಗೀತಾ ಭಟ್‍, ಕಿಶೋರ್‌, ರಮೇಶ್‍ ಇಂದಿರಾ, ಮಿತ್ರ, ಎಂ.ಎಸ್‍ ಉಮೇಶ್‍ ಮುಂತಾದವರು ನಟಿಸಿದ್ದು, ‘ಗಜರಾಮ’ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಎ. ಸುನೀಲ್‍ ಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸುನೀಲ್‍, ‘ಇದೊಂದು ಮರ್ಡರ್‌ ಮಿಸ್ಟ್ರಿ ಚಿತ್ರ. ಪೋಸ್ಟರ್‍ನಲ್ಲಿರುವ ಏಳು ಪ್ರಾಣಿ-ಪಕ್ಷಿಗಳು ಒಂದೊಂದು ಪಾತ್ರವನ್ನು ಪ್ರತಿನಿಧಿಸುತ್ತದೆ. ಕೊನೆಯವರೆಗೂ ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತಾಗುವುದಿಲ್ಲ. ಪ್ರೇಕ್ಷಕರನ್ನು ಸೀಟಿನಂಚಿನಡಿ ಕೂರಿಸುವಂತಹ ಒಂದು ಚಿತ್ರ ಇದು. ಯಾರಿಗೂ ಬೇಸರವಾಗದಂತೆ, ಖುಷಿಯಾಗುವಂತಹ ಚಿತ್ರ’ ಎಂದು ಹೇಳಿದರು.

ಈ ಚಿತ್ರಕ್ಕೂ, ಕಮಲ್‍ ಹಾಸನ್‍ ಮತ್ತು ಶ್ರೀದೇವಿ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಸಚಿನ್, ‘ಚಿತ್ರದಲ್ಲಿ ಕಮಲ್ ‍ಮತ್ತು ಶ್ರೀದೇವಿ ಪಾತ್ರಗಳು ಪ್ರಮುಖ ಪಾತ್ರ ವಹಿಸುವುದರಿಂದ, ಆ ಹೆಸರನ್ನು ಇಟ್ಟಿದ್ದೇವೆ. ಇದು ಬಯೋಪಿಕ್ ಅಲ್ಲ. ಕಮಲ್‍ ಮತ್ತು ಶ್ರೀದೇವಿ ಎಂಬುದು ಪಾತ್ರಗಳ ಹೆಸರು. ಒಂದು ಕ್ರೈಮ್‍ ನಡೆಯುತ್ತದೆ. ಅದನ್ನು ಯಾರು ಮಾಡಿದರು ಎಂಬುದೇ ಚಿತ್ರದ ಕಥೆ. ಚಿತ್ರದಲ್ಲೊಂದು ಚಿತ್ರವಿದೆ. ಆ ಚಿತ್ರದ ನಿರ್ದೇಶಕನಾಗಿ ನಾನು ಅಭಿನಯಿಸುತ್ತಿದ್ದೇನೆ. ಈ ಮಧ್ಯೆ ಒಂದು ಕೊಲೆ ಆಗಿ, ಅದರಿಂದ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆ. ಈಗಾಗಲೇ ಶೇ. 70ರಷ್ಟು ಚಿತ್ರೀಕರಣ ಮುಗಿದಿದೆ. ಬಾಕಿ ಇರುವ ಚಿತ್ರೀಕರಣ ಸದ್ಯದಲ್ಲೇ ಮುಗಿಯಲಿದೆ’ ಎಂದರು.

ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್‍ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್‍’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟರು ಎನ್ನುವ ರಾಜವರ್ಧನ್‍, ‘ಈ ಕಥೆ ನನಗಿಂತ ಸಚಿನ್‍ಗೆ ಹೆಚ್ಚು ಹೊಂದುತ್ತದೆ ಎಂದನಿಸಿತು. ಹಾಗಾಗಿ, ಅವರಿಗೆ ಹೇಳಿದೆ. ‘ಗಜರಾಮ’ ಚಿತ್ರದಲ್ಲಿ ಕೆಲಸ ಮಾಡುವಾಗ ಸುನೀಲ್‍ ಅವರ ಕೆಲಸ ನೋಡಿದ್ದೆ. ಅವರ ಕೆಲಸ ಇಷ್ಟವಾಗಿ, ಚಿತ್ರ ನಿರ್ದೇಶಿಸುವುದಕ್ಕೆ ಅವರನ್ನು ಕೇಳಿದೆ. ಇದೊಂದು ಕಂಟೆಂಟ್ ಇರುವ ಚಿತ್ರ. ಹೀರೋಯಿಸಂ ಇಲ್ಲದ, ಕಥೆಗೆ ಏನು ಬೇಕೋ ಅಷ್ಟು ಮಾತ್ರ ಇರುವ ಚಿತ್ರ ಇದು. ಏಳು ಪಾತ್ರಗಳ ಸುತ್ತ ಸುತ್ತುವ ಚಿತ್ರ ಇದು. ಈ ಪೋಸ್ಟರ್‍ನಲ್ಲೇ ಚಿತ್ರದ ಕಥೆ ಇದೆ. ಈಗಾಗಲೇ 56 ದಿನಗಳ ಕಾಲ ಚಿತ್ರೀಕರಣ ಮುಗಿದಿದೆ. 10 ದಿನಗಳ ಚಿತ್ರೀಕರಣ ಬಾಕಿ ಇದೆ’ ಎಂದರು.

‘ಕಮಲ್‍ ಶ್ರೀದೇವಿ’ ಚಿತ್ರಕ್ಕೆ ಕೀರ್ತನ್‍ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ ಮತ್ತು ಜ್ಞಾನೇಶ್‍ ಅವರ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

7 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

8 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

8 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

9 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

9 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

9 hours ago