ಮನರಂಜನೆ

ಮತ್ತೆ ಬಂದ ಸಚಿನ್‍ ಚೆಲುವರಾಯಸ್ವಾಮಿ ; ಚಿತ್ರದಲ್ಲೊಂದು ಚಿತ್ರ

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್‍ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಕಮಲ್‍ ಶ್ರೀದೇವಿ’ ಎಂಬ ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ.

‘ಕಮಲ್‍ ಶ್ರೀದೇವಿ’ ಚಿತ್ರದಲ್ಲಿ ಸಚಿನ್‍ ಜೊತೆಗೆ ಸಂಗೀತಾ ಭಟ್‍, ಕಿಶೋರ್‌, ರಮೇಶ್‍ ಇಂದಿರಾ, ಮಿತ್ರ, ಎಂ.ಎಸ್‍ ಉಮೇಶ್‍ ಮುಂತಾದವರು ನಟಿಸಿದ್ದು, ‘ಗಜರಾಮ’ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಎ. ಸುನೀಲ್‍ ಕುಮಾರ್‌ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸುನೀಲ್‍, ‘ಇದೊಂದು ಮರ್ಡರ್‌ ಮಿಸ್ಟ್ರಿ ಚಿತ್ರ. ಪೋಸ್ಟರ್‍ನಲ್ಲಿರುವ ಏಳು ಪ್ರಾಣಿ-ಪಕ್ಷಿಗಳು ಒಂದೊಂದು ಪಾತ್ರವನ್ನು ಪ್ರತಿನಿಧಿಸುತ್ತದೆ. ಕೊನೆಯವರೆಗೂ ಯಾರು ಕೊಲೆ ಮಾಡಿದ್ದಾರೆ ಎಂದು ಗೊತ್ತಾಗುವುದಿಲ್ಲ. ಪ್ರೇಕ್ಷಕರನ್ನು ಸೀಟಿನಂಚಿನಡಿ ಕೂರಿಸುವಂತಹ ಒಂದು ಚಿತ್ರ ಇದು. ಯಾರಿಗೂ ಬೇಸರವಾಗದಂತೆ, ಖುಷಿಯಾಗುವಂತಹ ಚಿತ್ರ’ ಎಂದು ಹೇಳಿದರು.

ಈ ಚಿತ್ರಕ್ಕೂ, ಕಮಲ್‍ ಹಾಸನ್‍ ಮತ್ತು ಶ್ರೀದೇವಿ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಸಚಿನ್, ‘ಚಿತ್ರದಲ್ಲಿ ಕಮಲ್ ‍ಮತ್ತು ಶ್ರೀದೇವಿ ಪಾತ್ರಗಳು ಪ್ರಮುಖ ಪಾತ್ರ ವಹಿಸುವುದರಿಂದ, ಆ ಹೆಸರನ್ನು ಇಟ್ಟಿದ್ದೇವೆ. ಇದು ಬಯೋಪಿಕ್ ಅಲ್ಲ. ಕಮಲ್‍ ಮತ್ತು ಶ್ರೀದೇವಿ ಎಂಬುದು ಪಾತ್ರಗಳ ಹೆಸರು. ಒಂದು ಕ್ರೈಮ್‍ ನಡೆಯುತ್ತದೆ. ಅದನ್ನು ಯಾರು ಮಾಡಿದರು ಎಂಬುದೇ ಚಿತ್ರದ ಕಥೆ. ಚಿತ್ರದಲ್ಲೊಂದು ಚಿತ್ರವಿದೆ. ಆ ಚಿತ್ರದ ನಿರ್ದೇಶಕನಾಗಿ ನಾನು ಅಭಿನಯಿಸುತ್ತಿದ್ದೇನೆ. ಈ ಮಧ್ಯೆ ಒಂದು ಕೊಲೆ ಆಗಿ, ಅದರಿಂದ ಏನೆಲ್ಲಾ ಆಗುತ್ತದೆ ಎಂಬುದು ಚಿತ್ರದ ಕಥೆ. ಈಗಾಗಲೇ ಶೇ. 70ರಷ್ಟು ಚಿತ್ರೀಕರಣ ಮುಗಿದಿದೆ. ಬಾಕಿ ಇರುವ ಚಿತ್ರೀಕರಣ ಸದ್ಯದಲ್ಲೇ ಮುಗಿಯಲಿದೆ’ ಎಂದರು.

ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್‍ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್‍’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟರು ಎನ್ನುವ ರಾಜವರ್ಧನ್‍, ‘ಈ ಕಥೆ ನನಗಿಂತ ಸಚಿನ್‍ಗೆ ಹೆಚ್ಚು ಹೊಂದುತ್ತದೆ ಎಂದನಿಸಿತು. ಹಾಗಾಗಿ, ಅವರಿಗೆ ಹೇಳಿದೆ. ‘ಗಜರಾಮ’ ಚಿತ್ರದಲ್ಲಿ ಕೆಲಸ ಮಾಡುವಾಗ ಸುನೀಲ್‍ ಅವರ ಕೆಲಸ ನೋಡಿದ್ದೆ. ಅವರ ಕೆಲಸ ಇಷ್ಟವಾಗಿ, ಚಿತ್ರ ನಿರ್ದೇಶಿಸುವುದಕ್ಕೆ ಅವರನ್ನು ಕೇಳಿದೆ. ಇದೊಂದು ಕಂಟೆಂಟ್ ಇರುವ ಚಿತ್ರ. ಹೀರೋಯಿಸಂ ಇಲ್ಲದ, ಕಥೆಗೆ ಏನು ಬೇಕೋ ಅಷ್ಟು ಮಾತ್ರ ಇರುವ ಚಿತ್ರ ಇದು. ಏಳು ಪಾತ್ರಗಳ ಸುತ್ತ ಸುತ್ತುವ ಚಿತ್ರ ಇದು. ಈ ಪೋಸ್ಟರ್‍ನಲ್ಲೇ ಚಿತ್ರದ ಕಥೆ ಇದೆ. ಈಗಾಗಲೇ 56 ದಿನಗಳ ಕಾಲ ಚಿತ್ರೀಕರಣ ಮುಗಿದಿದೆ. 10 ದಿನಗಳ ಚಿತ್ರೀಕರಣ ಬಾಕಿ ಇದೆ’ ಎಂದರು.

‘ಕಮಲ್‍ ಶ್ರೀದೇವಿ’ ಚಿತ್ರಕ್ಕೆ ಕೀರ್ತನ್‍ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ ಮತ್ತು ಜ್ಞಾನೇಶ್‍ ಅವರ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

36 mins ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

2 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

5 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

9 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

9 hours ago