‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್ ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಕಮಲ್ ಶ್ರೀದೇವಿ’ ಎಂಬ ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
‘ಕಮಲ್ ಶ್ರೀದೇವಿ’ ಚಿತ್ರದಲ್ಲಿ ಸಚಿನ್ ಜೊತೆಗೆ ಸಂಗೀತಾ ಭಟ್, ಕಿಶೋರ್, ರಮೇಶ್ ಇಂದಿರಾ, ಮಿತ್ರ, ಎಂ.ಎಸ್. ಉಮೇಶ್ ಮುಂತಾದವರು ನಟಿಸಿದ್ದು, ‘ಗಜರಾಮ’ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಎ. ಸುನೀಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಹಿರಿಯ ನಟ ಎಂ.ಎಸ್. ಉಮೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಇದೊಂದು ಮರ್ಡರ್ ಮಿಸ್ಟ್ರಿ ಚಿತ್ರವಾಗಿದ್ದು, ಈ ಚಿತ್ರಕ್ಕೂ ಕಮಲ್ ಹಾಸನ್ ಮತ್ತು ಶ್ರೀದೇವಿ ಅವರಿಗೂ ಯಾವದೇ ಸಂಬಂಧವಿಲ್ಲವಂತೆ. ಒಂದು ಕ್ರೈಮ್ ನಡೆಯುತ್ತದೆ. ಅದನ್ನು ಯಾರು ಮಾಡಿದರು ಎಂಬುದೇ ಚಿತ್ರದ ಕಥೆ. ಚಿತ್ರದಲ್ಲೊಂದು ಚಿತ್ರವಿದ್ದು, ಆ ಚಿತ್ರದ ನಿರ್ದೇಶಕನಾಗಿ ಸಚಿನ್ ಕಾಣಿಸಿಕೊಂಡಿದ್ದಾರೆ.
ವಿಶೇಷವೆಂದರೆ, ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟದ್ದಾರೆ. ‘ಕಮಲ್ ಶ್ರೀದೇವಿ’ ಚಿತ್ರಕ್ಕೆ ಕೀರ್ತನ್ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ ಮತ್ತು ಜ್ಞಾನೇಶ್ ಅವರ ಸಂಕಲನವಿದೆ.
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…