ಮನರಂಜನೆ

ಕಮಲ್ ಶ್ರೀದೇವಿ’ ಟೀಸರ್ ಬಂತು

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್‍ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರಕ್ಕೆ ‘ಕಮಲ್‍ ಶ್ರೀದೇವಿ’ ಎಂಬ ಹೆಸರಿಡಲಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

‘ಕಮಲ್‍ ಶ್ರೀದೇವಿ’ ಚಿತ್ರದಲ್ಲಿ ಸಚಿನ್‍ ಜೊತೆಗೆ ಸಂಗೀತಾ ಭಟ್‍, ಕಿಶೋರ್, ರಮೇಶ್‍ ಇಂದಿರಾ, ಮಿತ್ರ, ಎಂ.ಎಸ್‍. ಉಮೇಶ್‍ ಮುಂತಾದವರು ನಟಿಸಿದ್ದು, ‘ಗಜರಾಮ’ ಚಿತ್ರವನ್ನು ನಿರ್ದೇಶನ ಮಾಡಿದ್ದ ವಿ.ಎ. ಸುನೀಲ್‍ ಕುಮಾರ್ ನಿರ್ದೇಶನ ಮಾಡಿದ್ದಾರೆ. ಹಿರಿಯ ನಟ ಎಂ.ಎಸ್‍. ಉಮೇಶ್‍ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇದೊಂದು ಮರ್ಡರ್ ಮಿಸ್ಟ್ರಿ ಚಿತ್ರವಾಗಿದ್ದು, ಈ ಚಿತ್ರಕ್ಕೂ ಕಮಲ್‍ ಹಾಸನ್‍ ಮತ್ತು ಶ್ರೀದೇವಿ ಅವರಿಗೂ ಯಾವದೇ ಸಂಬಂಧವಿಲ್ಲವಂತೆ. ಒಂದು ಕ್ರೈಮ್‍ ನಡೆಯುತ್ತದೆ. ಅದನ್ನು ಯಾರು ಮಾಡಿದರು ಎಂಬುದೇ ಚಿತ್ರದ ಕಥೆ. ಚಿತ್ರದಲ್ಲೊಂದು ಚಿತ್ರವಿದ್ದು, ಆ ಚಿತ್ರದ ನಿರ್ದೇಶಕನಾಗಿ ಸಚಿನ್‍ ಕಾಣಿಸಿಕೊಂಡಿದ್ದಾರೆ.

ವಿಶೇಷವೆಂದರೆ, ಈ ಚಿತ್ರಕ್ಕೆ ‘ಮಮ್ಮಿ’ ಚಿತ್ರದ ನಿರ್ದೇಶಕ ಲೋಹಿತ್‍ ಕಥೆ ಕೊಟ್ಟರಂತೆ. ಇನ್ನು, ‘ಗೊಂಬೆಗಳ ಲವ್‍’ ಖ್ಯಾತಿಯ ಸಂತು ಶೀರ್ಷಿಕೆ ಕೊಟ್ಟದ್ದಾರೆ. ‘ಕಮಲ್‍ ಶ್ರೀದೇವಿ’ ಚಿತ್ರಕ್ಕೆ ಕೀರ್ತನ್‍ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ ಮತ್ತು ಜ್ಞಾನೇಶ್‍ ಅವರ ಸಂಕಲನವಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

11 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

13 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

13 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

13 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

14 hours ago