ಬೆಂಗಳೂರು: ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್ಪೇ ಸಂಸ್ಥೆ ಈಗ ಭಾರೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ.
ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್ಪೇ ಸಂಸ್ಥೆ ಈಗ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ನಟ ಕಿಚ್ಚ ಸುದೀಪ್ ಕೂಡ ಫೋನ್ಪೇಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆ ಬಗ್ಗೆ ಫೋನ್ಪೇ ಸಿಇಓ ಸಮೀರ್ ನಿಗಮ್ ಬಾಯಿಗೆ ಬಂದಂತೆ ಮಾತನಾಡಿದ್ದರು. ಈ ಬೆನ್ನಲ್ಲೇ ಫೋನ್ಪೇ ಸಿಇಓ ವಿರುದ್ಧ ರಾಜ್ಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಫೋನ್ಪೇ ವಿರುದ್ಧ ಭಾರೀ ಆಕ್ರೋಶ ಹೊರಹಾಕಿರುವ ನಟ ಕಿಚ್ಚ ಸುದೀಪ್ ಅವರು, ಫೋನ್ಪೇ ಇನ್ನು ಒಂದು ದಿನದ ಒಳಗೆ ಕನ್ನಡಿಗರ ಬಳಿ ಕ್ಷಮೆ ಕೇಳಬೇಕು. ರಾಜ್ಯ ಸರ್ಕಾರದ ನಿಲುವಿಗೆ ಬದ್ಧವಾಗಿ ಇರಬೇಕು. ಇಲ್ಲದೇ ಹೋದರೆ ತಾವು ಫೋನ್ಪೇ ಬ್ರಾಂಡ್ನ ಅಂಬಾಸಿಡರ್ ಆಗಿ ಮುಂದುವರಿಯದೇ ಇರಲು ನಿರ್ಧರಿಸಿದ್ದಾರೆ.
ಈ ಮೂಲಕ ನಟ ಕಿಚ್ಚ ಸುದೀಪ್ ಕನ್ನಡಿಗರ ಪರ ನಿಂತಿದ್ದು, ಅಭಿಮಾನಿಗಳಿಗೆ ಭಾರೀ ಸಂತಸ ತರಿಸಿದ್ದಾರೆ. ಈ ತಕ್ಷಣಕ್ಕೆ ಫೋನ್ಪೇ ಸಿಇಓ ಬುದ್ಧಿ ಕಲಿತು, ಕನ್ನಡಿಗರ ಬಳಿ ಕ್ಷಮೆ ಕೇಳದೇ ಹೋದರೆ ಪರಿಸ್ಥಿತಿ ಇನ್ನಷ್ಟು ಕೈಮೀರಿ ಹೋಗುವ ಸಾಧ್ಯತೆಯಿದೆ.
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…