ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಕಲಾವಿದರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಮಿತಿ ರಚಿಸುವಂತೆ ಮನವಿ ಮಾಡಿದರು.
ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್ ನೇತೃತ್ವದಲ್ಲಿ ಫೈರ್ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿತು.
ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕನ್ನಡ ಚಿತ್ರೋದ್ಯಮ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿದೆ.
ಚೇತನ್ ಜೊತೆಗೆ ನಟಿ ಶೃತಿ ಹರಿಹರನ್ ಕೂಡ ಇದ್ದರು. ಕನ್ನಡ ಚಿತ್ರರಂಗದ ಮಹಿಳೆಯರ ಸಮಸ್ಯೆ ಅಧ್ಯಯನಕ್ಕೆ ಸಮಿತಿ ರಚನೆ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿ ಸಮಿತಿ ರಚಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.
ಈಗಾಗಲೇ ಫೈರ್ ಸಂಸ್ಥೆಯು 130ಕ್ಕೂ ಮಂದಿ ಸಹಿ ಮಾಡಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಸರ್ಕಾರ ಈ ಬಗ್ಗೆ ಏನೆಲ್ಲಾ ಕ್ರಮ ಕೈಗೊಳ್ಳುತ್ತೆ ಎಂಬುದನ್ನು ಕಾದುನೋಡಬೇಕಿದೆ.
ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…
ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…
ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್ ವಾದ್ರಾ ಪುತ್ರ ರೈಹಾನ್ ವಾದ್ರಾ ತಮ್ಮ ಬಹುಕಾಲದ ಗೆಳತಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…
ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…
ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಾಹಿತಿ ಪ್ರಕಾರ…