ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಕಲಾವಿದರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸಮಿತಿ ರಚಿಸುವಂತೆ ಮನವಿ ಮಾಡಿದರು.
ಸಾಮಾಜಿಕ ಕಾರ್ಯಕರ್ತ ಹಾಗೂ ನಟ ಚೇತನ್ ನೇತೃತ್ವದಲ್ಲಿ ಫೈರ್ ನಿಯೋಗವು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿತು.
ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟಕದಲ್ಲೂ ಕನ್ನಡ ಚಿತ್ರೋದ್ಯಮ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿದೆ.
ಚೇತನ್ ಜೊತೆಗೆ ನಟಿ ಶೃತಿ ಹರಿಹರನ್ ಕೂಡ ಇದ್ದರು. ಕನ್ನಡ ಚಿತ್ರರಂಗದ ಮಹಿಳೆಯರ ಸಮಸ್ಯೆ ಅಧ್ಯಯನಕ್ಕೆ ಸಮಿತಿ ರಚನೆ ಮಾಡಬೇಕು. ಚಿತ್ರರಂಗದಲ್ಲಿನ ಲೈಂಗಿಕ ಶೋಷಣೆ ತಡೆಗಟ್ಟುವ ಸಲುವಾಗಿ ಸಮಿತಿ ರಚಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.
ಈಗಾಗಲೇ ಫೈರ್ ಸಂಸ್ಥೆಯು 130ಕ್ಕೂ ಮಂದಿ ಸಹಿ ಮಾಡಿರುವ ಪತ್ರವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಸರ್ಕಾರ ಈ ಬಗ್ಗೆ ಏನೆಲ್ಲಾ ಕ್ರಮ ಕೈಗೊಳ್ಳುತ್ತೆ ಎಂಬುದನ್ನು ಕಾದುನೋಡಬೇಕಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…