ಮನರಂಜನೆ

ತಮಿಳಿಗೆ ಹೊರಟ ಚೈತ್ರಾ ಆಚಾರ್‍; ಶಶಿಕುಮಾರ್‍ ಚಿತ್ರಕ್ಕೆ ನಾಯಕಿ

ಇತ್ತೀಚಿನ ದಿನಗಳಲ್ಲಿ ಕನ್ನಡದ ಹಲವು ನಟಿಯರು ಬೇರೆಬೇರೆ ಭಾಷೆಗಳತ್ತ ಮುಖ ಮಾಡುತ್ತಿದ್ದಾರೆ. ಈಗ ಆ ಸಾಲಿಗೆ ‘ಸಪ್ತ ಸಾಗರದಾಚೆ ಎಲ್ಲೋ’ , ‘ಬ್ಲಿಂಕ್‍’ ಮುಂತಾದ ಚಿತ್ರಗಳ ಖ್ಯಾತಿಯ ಚೈತ್ರಾ ಆಚಾರ್‍ ಸಹ ಒಬ್ಬರು.

ಚೈತ್ರಾ ಇದೀಗ ತಮಿಳಿಗೆ ಹೊರಟಿದ್ದಾರೆ. ತಮಿಳಿನ ಜನಪ್ರಿಯ ನಟ ಶಶಿಕುಮಾರ್‍ ಅಭಿನಯದ ಚಿತ್ರದಲ್ಲಿ ಅವರಿಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ಈ ಚಿತ್ರವನ್ನು ರಾಜು ಮುರುಗನ್‍ ಎನ್ನುವವರು ನಿರ್ದೇಶನ ಮಾಡುತ್ತಿದ್ದು, ಸದ್ಯ ತಮಿಳುನಾಡಿನ ಕೋವಿಲ್‍ಪಟ್ಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ‘2.0’, ‘ವಾಲಿಮೈ’ ಮುಂತಾದ ಚಿತ್ರಗಳ ಛಾಯಾಗ್ರಾಹಕರಾದ ನೀರವ್‍ ಶಾ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡುತ್ತಿದ್ದಾರೆ.

ಚೈತ್ರಾ ಕನ್ನಡ ಚಿತ್ರರಂಗಕ್ಕೆ ಬಂದು ಐದು ವರ್ಷಗಳಾಗಿವೆ. ‘ಮಾಹಿರಾ’ ಚಿತ್ರದ ಮೂಲಕ ಕನ್ನಡದಲ್ಲಿ ನಟಿಯಾಗಿ ಗುರುತಿಸಿಕೊಂಡ ಅವರು, ‘ಗಿಲ್ಕಿ’, ‘ತಲೆದಂಡ’, ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್‍ ಬಿ’, ‘ಬ್ಲಿಂಕ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಚೈತ್ರಾ ಅಭಿನಯದ ‘ಹ್ಯಾಪಿ ಬರ್ಥ್‍ಡೇ ಟು ಮಿ’ ಎಂಬ ಚಿತ್ರವು ನೇರವಾಗಿ ಓಟಿಟಿಯಲ್ಲಿ ಬಿಡುಗಡೆಯಾಗಿದೆ.

ಇದಲ್ಲದೆ, ಶಿವರಾಜಕುಮಾರ್ ಮತ್ತು ಧನಂಜಯ್‍ ಅಭಿನಯದ ‘ಉತ್ತರಕಾಂಡ’, ರಾಜ್‍ ಬಿ ಶೆಟ್ಟಿ ಅಭಿನಯದ ‘ರೂಪಾಂತರ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ, ಅವರಿಗೆ ತೆಲುಗು ಮತ್ತು ತಮಿಳಿನಿಂದ ಹೆಚ್ಚುಹೆಚ್ಚು ಅವಕಾಶಗಳು ಬರುತ್ತಿವೆಯಂತೆ. ಆದರೆ, ಪಾತ್ರಗಳ ವಿಷಯದಲ್ಲಿ ಚ್ಯೂಸಿಯಾಗಿರುವ ಚೈತ್ರಾ, ಶಶಿಕುಮಾರ್‍ ಅಭಿನಯದ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರ. ಮುಂದಿನ ದಿನಗಳಲ್ಲಿ ನೋಡಿಕೊಂಡು ಇನ್ನಷ್ಟು ಒಳ್ಳೆಯ ಚಿತ್ರದ ಭಾಗವಾಗುವ ಆಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ನಟನೆಯ ಜೊತೆಗೆ ಒಳ್ಳೆಯ ಗಾಯಕಿಯಾಗಿಯೂ ಗುರುತಿಸಿಕೊಂಡಿರುವ ಚೈತ್ರಾ, ‘ಸಾರ್ವಜನಿಕರಿಗೆ ಸುವರ್ಣಾವಕಾಶ’, ‘ಮಾಯಬಜಾರ್‍ 2016’, ‘ಗರುಡ ಗಮನ ಋಷಭ ವಾಹನ’, ‘ಟಗರು ಪಲ್ಯ’ ಮುಂತಾದ ಚಿತ್ರಗಳಿಗೆ ಹಾಡಿದ್ದು, ಇತ್ತೀಚೆಗೆ ‘ರೂಪಾಂತರ’ ಚಿತ್ರಕ್ಕೆ ಹಾಡಿರುವ ‘ಕಿತ್ತಾಳೆ’ ಹಾಡು ಸಾಕಷ್ಟು ಜನಪ್ರಿಯವಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಲಗೂರು: ಬೆಂಕಿಗೆ ಆಹುತಿಯಾದ ತೆಂಗಿನ ತೋಟ

ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿ ರಸ್ತೆಯ ಬೈಪಾಸ್ ಬಳಿ ಭೀಮಾನದಿ ಸೇತುವೆಯ ಬಫರ್ ಜೋನ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ…

21 mins ago

ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದಲ್ಲಿ ಚಿರತೆ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಹುಲಿಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲ್ಲೂಕಿನ…

1 hour ago

ತಂಬಾಕು ಬೆಳೆಗಾರರ ಸಮಸ್ಯೆ: ಜಿಎಸ್‌ಟಿ ಮೂಲಕ ತೆರಿಗೆ ಹಾಕುವ ಕೇಂದ್ರವು ಪರಿಹಾರ ನೀಡಲಿ ಎಂದ ಎಂ.ಲಕ್ಷ್ಮಣ್

ಮೈಸೂರು: ಕಾರ್ಪೋರೇಷನ್ ನೀರಿನ ದರ ಏರಿಕೆ ಮಾಡುತ್ತಿದ್ದಾರೆ ಎಂದು ಅರ್ಧ ಪೈಸೆ ಜಾಸ್ತಿಯಾಗಿರುವುದಕ್ಕೆ ಹೋರಾಟ ಮಾಡುತ್ತಾರೆ. ಆದರೆ ರೈತರ ಸಮಸ್ಯೆಗಳ…

2 hours ago

RSS ವಿಷ ಸರ್ಪ ಎಂಬ ಖರ್ಗೆ ಹೇಳಿಕೆ ವಿಚಾರ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ…

2 hours ago

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…

2 hours ago

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…

2 hours ago